AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೆರಡು ವರ್ಷ ಪ್ರಾಯೋಗಿಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸೋಣ: ರಾಜನಾಥ್ ಸಿಂಗ್

ನೂತನ ಕೃಷಿ ಕಾಯ್ದೆಗಳನ್ನು ಒಂದೆರಡು ವರ್ಷ ಪ್ರಾಯೋಗಿಕವಾಗಿ ಜಾರಿಗೊಳಿಸೋಣ. ಅವುಗಳಿಂದ ಯಾವುದೇ ಪ್ರಯೋಜನ ಲಭ್ಯವಾಗುವುದಿಲ್ಲ ಎಂದು ಆಗಲೂ ಅನಿಸಿದರೆ ಕೇಂದ್ರ ಸರ್ಕಾರ ನೀವು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಪ್ರಸ್ತಾಪ ಮುಂದಿಟ್ಟಿದ್ದಾರೆ.

ಒಂದೆರಡು ವರ್ಷ ಪ್ರಾಯೋಗಿಕವಾಗಿ ಕೃಷಿ ಕಾಯ್ದೆಗಳನ್ನು ಜಾರಿಗೊಳಿಸೋಣ: ರಾಜನಾಥ್ ಸಿಂಗ್
ರಕ್ಷಣಾ ಸಚಿವ ರಾಜನಾಥ್ ಸಿಂಗ್
guruganesh bhat
| Edited By: |

Updated on: Dec 25, 2020 | 7:39 PM

Share

ದೆಹಲಿ: ನೂತನ ಕೃಷಿ ಕಾಯ್ದೆಗಳನ್ನು ಒಂದೆರಡು ವರ್ಷ ಪ್ರಾಯೋಗಿಕವಾಗಿ ಜಾರಿಗೊಳಿಸೋಣ. ಅವುಗಳಿಂದ ಯಾವುದೇ ಪ್ರಯೋಜನ ಲಭ್ಯವಾಗುವುದಿಲ್ಲ ಎಂದು  ಅನಿಸಿದರೆ ಕೇಂದ್ರ ಸರ್ಕಾರ ನೀವು ಸೂಚಿಸಿದ ಎಲ್ಲಾ ತಿದ್ದುಪಡಿಗಳನ್ನು ಮಾಡಲಿದೆ ಎಂದು ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೊಸ ಪ್ರಸ್ತಾವ ಮುಂದಿಟ್ಟಿದ್ದಾರೆ.

ಬರೋಬ್ಬರಿ ತಿಂಗಳಿಂದ ಗಡಿಗಳಲ್ಲಿ ಧರಣಿ ನಿರತರಾಗಿರುವ ರೈತರು ಮತ್ತು ಅವರ ಕುಟುಂಬದ ಕುರಿತು ನಮಗೆ ಅಪಾರ ಗೌರವವಿದೆ. ಸ್ವತಃ ನಾನೂ ರೈತ ಕುಟುಂಬದ ಹಿನ್ನೆಲೆಯವನೇ ಆಗಿದ್ದು, ಕೇಂದ್ರ ಸರ್ಕಾರ ರೈತರ ಹಿತಕ್ಕೆ ಧಕ್ಕೆ ಬರುವಂತಹ ಯಾವುದೇ ಕೆಲಸಕ್ಕೂ ಕೈಹಾಕುವುದಿಲ್ಲ ಎಂದು ಅವರು ತಿಳಿಸಿದರು.

ದೆಹಲಿಯ ದ್ವಾರ್ಕಾದಲ್ಲಿ ವರ್ಚುವಲ್ ಮೂಲಕ ಪ್ರಧಾನಿ ನರೇಂದ್ರ ಮೋದಿ ಭಾಷಣವನ್ನು ಆಲಿಸಿದ ಅವರು, ನೂತನ ಕೃಷಿ ಕಾಯ್ದೆಗಳಲ್ಲಿನ ಒಂದು ಅಂಶವೂ ರೈತ ವಿರೋಧಿಯಾಗಿಲ್ಲ. ಕನಿಷ್ಠ ಬೆಂಬಲ ಬೆಲೆಯನ್ನು ಮುಂಚಿನಂತೆಯೇ ಮುಂದುವರೆಸಲಾಗುವುದು ಎಂದು ಅವರು ನೂತನ ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡರು.

ಸದ್ಯ ನೂತನ ಕೃಷಿ ಕಾಯ್ದೆಗಳನ್ನು ಅನುಷ್ಠಾನಗೊಳಿಸೋಣ. ಒಂದು ವೇಳೆ ನಿಮಗೂ ಇವುಗಳಿಂದ ಕಿಂಚಿತ್ತೂ ಪ್ರಯೋಜನವಾಗದಿದ್ದರೆ, ಕೃಷಿ ಕಾಯ್ದೆಗಳಲ್ಲಿ ನೀವು ಹೇಳಿದಂತೆಯೇ ಬದಲಾವಣೆ ಮಾಡೋಣ. ಕೇವಲ ಮಾತುಕತೆಯ ಮೂಲಕವಷ್ಟೇ ಈ ಸಮಸ್ಯೆ ಬಗೆಹರಿಯಲು ಸಾಧ್ಯ ಎಂದು ಅವರು ವಿವರಿಸಿದ್ದಾರೆ.

ಕೇಂದ್ರ ಮತ್ತು ರೈತರ ನಡುವೆ ಸಂಧಾನ ಏರ್ಪಡಿಸಲು ಸಿದ್ಧ: ದುಷ್ಯಂತ್ ಚೌಟಾಲಾ

Follow Us
guruganesh bhat
guruganesh bhat
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ