AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ
ಟಿಎಸ್​ ತಿರುಮೂರ್ತಿ
TV9 Web
| Updated By: Lakshmi Hegde|

Updated on:Jan 05, 2022 | 9:39 AM

Share

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ(Permanent Representative to the UN) ಯಾಗಿರುವ ಟಿ.ಎಸ್​. ತಿರುಮೂರ್ತಿ(TS Tirumurti), ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿ 2022ರ ಅಧ್ಯಕ್ಷರಾಗಿ ನಿನ್ನೆ (ಜನವರಿ 4)ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಶಾಶ್ವತವಲ್ಲದ ಸದಸ್ಯ ಸ್ಥಾನವನ್ನು ಹೊಂದಿದೆ. ಇದೀಗ ಅಧ್ಯಕ್ಷರಾಗಿ ನೇಮಕವಾಗಿರುವ ತಿರುಮೂರ್ತಿ ಅವರ ಆಡಳಿತದ ಅವಧಿ 2022ರ ಡಿಸೆಂಬರ್​ 31ಕ್ಕೆ ಮುಕ್ತಾಯಗೊಳ್ಳಲಿದೆ. 

ವಿಶ್ವಸಂಸ್ಥೆಯ ಭಯೋತ್ಪಾದನ ನಿಗ್ರಹ ಸಮಿತಿ (CTC) 2001ರಲ್ಲಿ ಸ್ಥಾಪನೆಯಾಗಿದೆ. ಯುಎಸ್​ ಮೇಲೆ ಸೆಪ್ಟೆಂಬರ್​ 11ರಂದು ಭೀಕರ ಭಯೋತ್ಪಾದಕ ದಾಳಿಯಾಗಿತ್ತು. ಅದರ ಬೆನ್ನಲ್ಲೇ ಈ ಸಮಿತಿ ಹುಟ್ಟಿಕೊಂಡಿದೆ. ಇದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಂಗಸಂಸ್ಥೆಯೇ ಆಗಿದೆ. ಭಯೋತ್ಪಾದನಾ ನಿಗ್ರಹ ಸಮಿತಿಯ ಕಾರ್ಯನಿರ್ವಾಹಕ ನಿರ್ದೇಶನಾಲಯ(ಸಿಟಿಇಡಿ)ದ ಆದೇಶವನ್ನು ನವೀಕರಿಸುವ ನಿರ್ಣಯದ ಪರವಾಗಿ ಭಾರತ ಮತಚಲಾಯಿಸಿದ ಮರುದಿನವೇ ಟಿ.ಎಸ್​. ತಿರುಮೂರ್ತಿ ಸಿಟಿಸಿಯ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಗಲ್ಫ್, ಅರಬ್, ಆಫ್ರಿಕಾ ಮತ್ತು ಭಾರತದ ಅಭಿವೃದ್ಧಿ ಪಾಲುದಾರಿಕೆ ಒಳಗೊಂಡಿರುವ ಆರ್ಥಿಕ ಖಾತೆ ವಿಭಾಗದಲ್ಲೂ ಕೆಲಸ ಮಾಡಿದ್ದರು. ಹಾಗೇ, ತಿರುಮೂರ್ತಿಯವರು ಈ ಹಿಂದೆ ಈಜಿಪ್ಟ್​​ನ ಭಾರತೀಯ ರಾಯಭಾರಿಯಾಗಿದ್ದರು.  ಜಿನಿವಾದಲ್ಲಿದ್ದುಕೊಂಡು ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪ್ಯಾಲೇಸ್ಟಿನಿಯನ್ ಪ್ರಾಧಿಕಾರಕ್ಕೆ ಭಾರತದ ಪ್ರತಿನಿಧಿಯಾಗಿದ್ದರು. ಆಗ ಅವರು ಗಾಜಾದಲ್ಲಿ ಇದ್ದರು. ಯುನೈಟೆಡ್​ ನೇಶನ್ಸ್​ನ ಭಾರತದ ರಾಯಭಾರಿ ಕೌನ್ಸಿಲರ್​ ಆಗಿ, ಇಂಡೋನೇಷ್ಯಾದ ಜಕಾರ್ತಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉಪಮುಖ್ಯಸ್ಥರಾಗಿ, ಮಲೇಷಿಯಾದ ಕೌಲಾ ಲಂಪುರ್​​ನಲ್ಲಿ ಭಾರತದ ಹೈಕಮಿಷನರ್​ ಆಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಉದ್ಧಟತನ; ತಾಕತ್ತಿದ್ರೆ ಎಂಇಎಸ್ ನಿಷೇಧಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸವಾಲ್

Published On - 9:32 am, Wed, 5 January 22

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್