AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು.

ವಿಶ್ವಸಂಸ್ಥೆ ಭದ್ರತಾ ಮಂಡಳಿ ಭಯೋತ್ಪಾದನ ನಿಗ್ರಹ ಸಮಿತಿ ಅಧ್ಯಕ್ಷರಾಗಿ ಭಾರತದ ಖಾಯಂ ಪ್ರತಿನಿಧಿ ಟಿ.ಎಸ್​.ತಿರುಮೂರ್ತಿ ಅಧಿಕಾರ ಸ್ವೀಕಾರ
ಟಿಎಸ್​ ತಿರುಮೂರ್ತಿ
TV9 Web
| Edited By: |

Updated on:Jan 05, 2022 | 9:39 AM

Share

ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ(Permanent Representative to the UN) ಯಾಗಿರುವ ಟಿ.ಎಸ್​. ತಿರುಮೂರ್ತಿ(TS Tirumurti), ಭದ್ರತಾ ಮಂಡಳಿಯ ಭಯೋತ್ಪಾದನಾ ನಿಗ್ರಹ ಸಮಿತಿ 2022ರ ಅಧ್ಯಕ್ಷರಾಗಿ ನಿನ್ನೆ (ಜನವರಿ 4)ಅಧಿಕಾರ ಸ್ವೀಕಾರ ಮಾಡಿದ್ದಾರೆ. ವಿಶ್ವ ಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ ಶಾಶ್ವತವಲ್ಲದ ಸದಸ್ಯ ಸ್ಥಾನವನ್ನು ಹೊಂದಿದೆ. ಇದೀಗ ಅಧ್ಯಕ್ಷರಾಗಿ ನೇಮಕವಾಗಿರುವ ತಿರುಮೂರ್ತಿ ಅವರ ಆಡಳಿತದ ಅವಧಿ 2022ರ ಡಿಸೆಂಬರ್​ 31ಕ್ಕೆ ಮುಕ್ತಾಯಗೊಳ್ಳಲಿದೆ. 

ವಿಶ್ವಸಂಸ್ಥೆಯ ಭಯೋತ್ಪಾದನ ನಿಗ್ರಹ ಸಮಿತಿ (CTC) 2001ರಲ್ಲಿ ಸ್ಥಾಪನೆಯಾಗಿದೆ. ಯುಎಸ್​ ಮೇಲೆ ಸೆಪ್ಟೆಂಬರ್​ 11ರಂದು ಭೀಕರ ಭಯೋತ್ಪಾದಕ ದಾಳಿಯಾಗಿತ್ತು. ಅದರ ಬೆನ್ನಲ್ಲೇ ಈ ಸಮಿತಿ ಹುಟ್ಟಿಕೊಂಡಿದೆ. ಇದು ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಂಗಸಂಸ್ಥೆಯೇ ಆಗಿದೆ. ಭಯೋತ್ಪಾದನಾ ನಿಗ್ರಹ ಸಮಿತಿಯ ಕಾರ್ಯನಿರ್ವಾಹಕ ನಿರ್ದೇಶನಾಲಯ(ಸಿಟಿಇಡಿ)ದ ಆದೇಶವನ್ನು ನವೀಕರಿಸುವ ನಿರ್ಣಯದ ಪರವಾಗಿ ಭಾರತ ಮತಚಲಾಯಿಸಿದ ಮರುದಿನವೇ ಟಿ.ಎಸ್​. ತಿರುಮೂರ್ತಿ ಸಿಟಿಸಿಯ ಅಧ್ಯಕ್ಷರಾಗಿ ನೇಮಕರಾಗಿದ್ದಾರೆ.

ತಿರುಮೂರ್ತಿಯವರು ವಿಶ್ವಸಂಸ್ಥೆಗೆ ಖಾಯಂ ಪ್ರತಿನಿಧಿಯಾಗಿ ನೇಮಕಗೊಳ್ಳುವುದಕ್ಕೂ ಮೊದಲು, 2020ರಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯದಲ್ಲಿ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದರು. ಗಲ್ಫ್, ಅರಬ್, ಆಫ್ರಿಕಾ ಮತ್ತು ಭಾರತದ ಅಭಿವೃದ್ಧಿ ಪಾಲುದಾರಿಕೆ ಒಳಗೊಂಡಿರುವ ಆರ್ಥಿಕ ಖಾತೆ ವಿಭಾಗದಲ್ಲೂ ಕೆಲಸ ಮಾಡಿದ್ದರು. ಹಾಗೇ, ತಿರುಮೂರ್ತಿಯವರು ಈ ಹಿಂದೆ ಈಜಿಪ್ಟ್​​ನ ಭಾರತೀಯ ರಾಯಭಾರಿಯಾಗಿದ್ದರು.  ಜಿನಿವಾದಲ್ಲಿದ್ದುಕೊಂಡು ವಿಶ್ವಸಂಸ್ಥೆಗೆ ಭಾರತದ ಖಾಯಂ ಮಿಷನ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪ್ಯಾಲೇಸ್ಟಿನಿಯನ್ ಪ್ರಾಧಿಕಾರಕ್ಕೆ ಭಾರತದ ಪ್ರತಿನಿಧಿಯಾಗಿದ್ದರು. ಆಗ ಅವರು ಗಾಜಾದಲ್ಲಿ ಇದ್ದರು. ಯುನೈಟೆಡ್​ ನೇಶನ್ಸ್​ನ ಭಾರತದ ರಾಯಭಾರಿ ಕೌನ್ಸಿಲರ್​ ಆಗಿ, ಇಂಡೋನೇಷ್ಯಾದ ಜಕಾರ್ತಾದಲ್ಲಿರುವ ಭಾರತೀಯ ರಾಯಭಾರಿ ಕಚೇರಿಯ ಉಪಮುಖ್ಯಸ್ಥರಾಗಿ, ಮಲೇಷಿಯಾದ ಕೌಲಾ ಲಂಪುರ್​​ನಲ್ಲಿ ಭಾರತದ ಹೈಕಮಿಷನರ್​ ಆಗಿ ಕೂಡ ಕಾರ್ಯ ನಿರ್ವಹಿಸಿದ್ದಾರೆ.

ಇದನ್ನೂ ಓದಿ: ಬೆಳಗಾವಿಯಲ್ಲಿ ಮತ್ತೆ ಎಂಇಎಸ್ ಪುಂಡರ ಉದ್ಧಟತನ; ತಾಕತ್ತಿದ್ರೆ ಎಂಇಎಸ್ ನಿಷೇಧಿಸಿ ಎಂದು ಕರ್ನಾಟಕ ಸರ್ಕಾರಕ್ಕೆ ಸವಾಲ್

Published On - 9:32 am, Wed, 5 January 22

ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!