AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೋವಾದಲ್ಲಿ ಸುನಾಮಿ ಎಚ್ಚರಿಕೆ ಸೈರನ್: ಆತಂಕಕ್ಕೆ ಒಳಗಾದ ಕಡಲ ಜನ

Tsunami warning sirens in Goa: ಪೊರ್ವೊರಿಮ್‌ನಲ್ಲಿರುವ ಅರ್ಲಿ ವಾರ್ನಿಂಗ್ ಡಿಸೆಮಿನೇಷನ್ ಸಿಸ್ಟಮ್‌ನಿಂದ ಸುನಾಮಿಯ ಬಗ್ಗೆ ಎಚ್ಚರಿಕೆ ನೀಡುವ ಸೈರನ್ ತಪ್ಪಾಗಿ ಪ್ಲೇ ಆಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಅಧಿಕಾರಿಯೊಬ್ಬರು ಇಂದು (ಸೆ.7) ತಿಳಿಸಿದ್ದಾರೆ. ಬುಧವಾರ ರಾತ್ರಿ 9 ಗಂಟೆಯ ಈ ಘಟನೆ ನಡೆದಿದೆ. ರಾತ್ರಿ ವೇಳೆ ಸುನಾಮಿಯ ಬಗ್ಗೆ ಎಚ್ಚರಿಕೆ ನೀಡುವ ಸೈರನ್ ಮೊಳಗಲು ಆರಂಭಿಸಿದ್ದು, 20 ನಿಮಿಷಕ್ಕೂ ಹೆಚ್ಚು ಕಾಲ ಈ ಸೈರನ್ ಕೂಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಗೋವಾದಲ್ಲಿ ಸುನಾಮಿ ಎಚ್ಚರಿಕೆ ಸೈರನ್: ಆತಂಕಕ್ಕೆ ಒಳಗಾದ ಕಡಲ ಜನ
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Sep 07, 2023 | 6:08 PM

Share

ಪಣಜಿ, ಸೆ.7: ಯಾವುದೇ ಮುನ್ಸೂಚನೆ ಇಲ್ಲದೆ ಸುನಾಮಿ ಎಚ್ಚರಿಕೆ ಸೈರನ್ (Tsunami warning sirens)​​​​​​ ಹೊಡೆದಿದ್ದು, ಕಡಲ ತೀರದ ಜನರು ಆತಂಕಕ್ಕೆ ಒಳಲಾಗಿರುವ ಘಟನೆ ಗೋವಾದ (Goa) ಪಣಜಿಯಲ್ಲಿ ಬುಧವಾರ (ಸೆ.6) ನಡೆದಿದೆ. ಪೊರ್ವೊರಿಮ್‌ನಲ್ಲಿರುವ ಅರ್ಲಿ ವಾರ್ನಿಂಗ್ ಡಿಸೆಮಿನೇಷನ್ ಸಿಸ್ಟಮ್‌ನಿಂದ ಸುನಾಮಿಯ ಬಗ್ಗೆ ಎಚ್ಚರಿಕೆ ನೀಡುವ ಸೈರನ್ ತಪ್ಪಾಗಿ ಪ್ಲೇ ಆಗಿದ್ದು, ಇದು ಸ್ಥಳೀಯ ನಿವಾಸಿಗಳಲ್ಲಿ ಭೀತಿಯನ್ನು ಉಂಟುಮಾಡಿದೆ ಎಂದು ಅಧಿಕಾರಿಯೊಬ್ಬರು ಇಂದು (ಸೆ.7) ತಿಳಿಸಿದ್ದಾರೆ. ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ. ರಾತ್ರಿ ವೇಳೆ ಸುನಾಮಿಯ ಬಗ್ಗೆ ಎಚ್ಚರಿಕೆ ನೀಡುವ ಸೈರನ್ ಮೊಳಗಲು ಆರಂಭಿಸಿದ್ದು, 20 ನಿಮಿಷಕ್ಕೂ ಹೆಚ್ಚು ಕಾಲ ಈ ಸೈರನ್ ಕೂಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಇನ್ನು ಈ ಸೈರನ್​​ ಕೂಗಲು ಕಾರಣ ಏನು? ಎಂಬುದರ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದು ತಾಂತ್ರಿಕ ದೋಷದಿಂದ ಅಥವಾ ಇನ್ನಾವುದೇ ಕಾರಣಕ್ಕೆ ಸೈರನ್​​ ಆಗಿದೆ ಎಂಬುದನ್ನು ತನಿಖೆ ನಡೆಸಲಾಗುತ್ತಿದ್ದು, ಈ ಬಗ್ಗೆ ವರದಿ ಕೇಳಿದ್ದೇವೆ ಎಂದು ರಾಜ್ಯ ಸಚಿವರೊಬ್ಬರು ತಿಳಿಸಿದ್ದಾರೆ. ಗೋವಾ ರಾಜಧಾನಿ ಪಣಜಿಯ ಹೊರವಲಯದಲ್ಲಿರುವ ಉತ್ತರ ಗೋವಾದ ಪೊರ್ವೊರಿಮ್‌ನಲ್ಲಿರುವ ಬೆಟ್ಟದ ಮೇಲೆ ಅರ್ಲಿ ವಾರ್ನಿಂಗ್ ಡಿಸೆಮಿನೇಷನ್ ಸಿಸ್ಟಮ್ (ಇಡಬ್ಲ್ಯೂಡಿಎಸ್) ಅನ್ನು ಸ್ಥಾಪಿಸಲಾಗಿದೆ. ಇಲ್ಲಿಂದ ಈ ಸೈರನ್​​​ ಕೇಳಿ ಬಂದಿದೆ ಎಂದು ಹೇಳಲಾಗಿದೆ.

ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಉತ್ತರ ಗೋವಾ ಜಿಲ್ಲಾಧಿಕಾರಿ ಮಾಮು ಹಗೆ, ‘ಸುನಾಮಿ ಕುರಿತು ಅಧಿಕಾರಿಗಳಿಂದ ಯಾವುದೇ ಮಾಹಿತಿ ಇಲ್ಲದ ಕಾರಣ ಇದೊಂದು ಸುಳ್ಳು ಎಚ್ಚರಿಕೆ’ ಎಂದು ಹೇಳಿದ್ದಾರೆ. ಇನ್ನು ಈ ಸೈರನ್​​​ನ್ನು ಯಾವುದೇ ಪರಿಶೀಲನೆಗೆ ಅಥವಾ ಪ್ರಯೋಗಕ್ಕೆ ಬಳಸಿಲ್ಲ. ಸಮುದ್ರ ತೀರದ ಅಪಾಯದ ಬಗ್ಗೆ ಭಾರತೀಯ ರಾಷ್ಟ್ರೀಯ ಸಾಗರ ಮಾಹಿತಿ ಸೇವೆಗಳ ಕೇಂದ್ರದಿಂದಲ್ಲೂ(INCOIS) ಯಾವುದೇ ವರದಿ ಬಂದಿಲ್ಲ ಎಂದು ಡಿಸಿ ಹೇಳಿದ್ದಾರೆ.

ಇದನ್ನೂ ಓದಿ:ಗೋವಾದಿಂದ ಅಕ್ರಮವಾಗಿ ಸಾಗಿಸಲು ಯತ್ನ, 18 ವಿವಿಧ ನಮೂನೆ ಮದ್ಯ ಜಪ್ತಿ

ಇನ್ನು ಯಾವ ಕಾರಣಕ್ಕೆ ಈ ಸೈರನ್​​ ಮಾಡಲಾಗಿದೆ ಎಂಬ ಬಗ್ಗೆ ವರದಿ ನೀಡಲು ರಾಜ್ಯ ಜಲಸಂಪನ್ಮೂಲ ಇಲಾಖೆ (WRD)ಗೆ ನಿರ್ದೇಶನ ನೀಡಿರುವುದಾಗಿ ಜಿಲ್ಲಾಧಿಕಾರಿ ಹೇಳಿದರು. ಈ ಕುರಿತು ಮಾತನಾಡಿದ ಸ್ಥಳೀಯ ನಿವಾಸಿ ಅವಿನಾಶ್ ಆರ್, ರಾತ್ರಿ ಊಟ ಮುಗಿಸಿ ವಾಕಿಂಗ್ ಹೊರಟಿದ್ದ ನಮಗೆ ಸೈರನ್ ಸದ್ದು ಕೇಳಿಸಿದಾಗ ಒಂದು ಗಾಬರಿಯಾಗಿದೆ. ನಂತರ ಇದು ಪ್ರಯೋಗ ನಡೆಸಲು ಹಾಕಿರಬಹುದು ಎಂದು ತಿಳಿದುಕೊಂಡಿದ್ದೇವು ಎಂದು ಹೇಳಿದ್ದಾರೆ.

Published On - 4:51 pm, Thu, 7 September 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ