AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ
ತಿರುಪತಿಗೆ ಕಾಣಿಕೆಯಾಗಿ ನೀಡಲಾದ ಚಿನ್ನಾಭರಣ
TV9 Web
| Updated By: ಸುಷ್ಮಾ ಚಕ್ರೆ|

Updated on:Dec 10, 2021 | 9:36 PM

Share

ತಿರುಪತಿ: ಕೊರೊನಾದಿಂದಾಗಿ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಆದರೂ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಹರಿದುಬರುತ್ತಿರುವ ಜನರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ದೇಶದ ಶ್ರೀಮಂತ ದೇವಸ್ಥಾನದಲ್ಲಿ ಒಂದಾಗಿರುವ ತಿರುಮಲ ತಿರುಪತಿ ದೇವಸ್ಥಾನದ ವೆಂಕಟೇಶ್ವರ ಸ್ವಾಮಿ ದೇವರಿಗೆ ಅನಾಮಧೇಯ ಭಕ್ತರೊಬ್ಬರು 3 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೊಡುಗೆಯಾಗಿ ನೀಡಿದ್ದಾರೆ. ಕೊರೊನಾದಿಂದ ಸಾಕಷ್ಟು ನಿಯಮಗಳನ್ನು ಅಳವಡಿಸಲಾಗಿದ್ದರೂ ಹಣ, ಚಿನ್ನ ಮತ್ತಿತರ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವವರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ಆದರೆ, ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ಚಿನ್ನ- ವಜ್ರದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ.

ಇದನ್ನೂ ಓದಿ: ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Published On - 9:34 pm, Fri, 10 December 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ