AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ.

TTD: ತಿರುಪತಿ ತಿಮ್ಮಪ್ಪನಿಗೆ ಅನಾಮಧೇಯ ವ್ಯಕ್ತಿಯಿಂದ 3 ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಾಣಿಕೆ
ತಿರುಪತಿಗೆ ಕಾಣಿಕೆಯಾಗಿ ನೀಡಲಾದ ಚಿನ್ನಾಭರಣ
TV9 Web
| Edited By: |

Updated on:Dec 10, 2021 | 9:36 PM

Share

ತಿರುಪತಿ: ಕೊರೊನಾದಿಂದಾಗಿ ದೇವಸ್ಥಾನಗಳಿಗೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ಆದರೂ ತಿರುಪತಿ ವೆಂಕಟೇಶ್ವರ ದೇವಸ್ಥಾನಕ್ಕೆ ದಿನವೂ ಸಾವಿರಾರು ಸಂಖ್ಯೆಯಲ್ಲಿ ಹರಿದುಬರುತ್ತಿರುವ ಜನರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ. ದೇಶದ ಶ್ರೀಮಂತ ದೇವಸ್ಥಾನದಲ್ಲಿ ಒಂದಾಗಿರುವ ತಿರುಮಲ ತಿರುಪತಿ ದೇವಸ್ಥಾನದ ವೆಂಕಟೇಶ್ವರ ಸ್ವಾಮಿ ದೇವರಿಗೆ ಅನಾಮಧೇಯ ಭಕ್ತರೊಬ್ಬರು 3 ಕೋಟಿ ರೂ. ಮೌಲ್ಯದ ಚಿನ್ನಾಭರಣವನ್ನು ಕೊಡುಗೆಯಾಗಿ ನೀಡಿದ್ದಾರೆ. ಕೊರೊನಾದಿಂದ ಸಾಕಷ್ಟು ನಿಯಮಗಳನ್ನು ಅಳವಡಿಸಲಾಗಿದ್ದರೂ ಹಣ, ಚಿನ್ನ ಮತ್ತಿತರ ಬೆಲೆ ಬಾಳುವ ವಸ್ತುಗಳನ್ನು ಕಾಣಿಕೆಯಾಗಿ ನೀಡುವವರ ಸಂಖ್ಯೆಯಲ್ಲಿ ಕಡಿಮೆಯಾಗಿಲ್ಲ.

ಕೆಲವು ದಿನಗಳ ಹಿಂದೆ ಅನಾಮಧೇಯ ಭಕ್ತರೊಬ್ಬರು ತಿರುಪತಿ ದೇವರಿಗೆ 3 ಕೋಟಿ ರೂ. ಬೆಲೆ ಬಾಳುವ ವಜ್ರ ಮತ್ತು ಚಿನ್ನದಿಂದ ಮಾಡಲಾದ ಕಟಿ-ವರದ ಹಸ್ತವನ್ನು ಕಾಣಿಕೆಯಾಗಿ ನೀಡಿದ್ದಾರೆ. ಆದರೆ, ತನ್ನ ಹೆಸರನ್ನು ಹೇಳಲು ಅವರು ಇಚ್ಛಿಸಿಲ್ಲ. ವೆಂಕಟೇಶ್ವರನಿಗೆ ಕಾಣಿಕೆಯಾಗಿ ನೀಡಿರುವ ಈ ಚಿನ್ನ- ವಜ್ರದ ಹಸ್ತಗಳನ್ನು ನಾನು ಭಕ್ತಿಯಿಂದ ನೀಡುತ್ತಿದ್ದೇನೆ, ಅದಕ್ಕೆ ಪ್ರಚಾರ ಬೇಕಾಗಿಲ್ಲ ಎಂದು ಅವರು ಹೇಳಿದ್ದಾರೆ.

ಈ ಚಿನ್ನದ ಆಭರಣ ಬರೋಬ್ಬರಿ 5.3 ಕೆಜಿ ಮೌಲ್ಯದ್ದಾಗಿದೆ. ಇದಕ್ಕೆ ಸುಮಾರು 3 ಕೋಟಿ ವೆಚ್ಚವಾಗಿದೆ. ಈ ಆಭರಣವನ್ನು ತಿರುಪತಿ ದೇಗುಲದ ಅಧಿಕಾರಿಗಳಿಗೆ ಆ ಭಕ್ತರು ನೀಡಿದ್ದಾರೆ.

ಇದನ್ನೂ ಓದಿ: ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಮೈಸೂರು: ಚಾಮುಂಡಿದೇವಿ ದೇವಸ್ಥಾನದ ಹುಂಡಿಯಲ್ಲಿ ಭರ್ಜರಿ ಕಾಣಿಕೆ; ಒಂದೂವರೆ ತಿಂಗಳಲ್ಲಿ 1.77 ಕೋಟಿ ರೂ. ಸಂಗ್ರಹ

Published On - 9:34 pm, Fri, 10 December 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ