AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ.

TTD Darshan Tickets: ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಡಿಸೆಂಬರ್ ಕೋಟಾ ಸರ್ವದರ್ಶನ ಟೋಕನ್​ ಬಿಡುಗಡೆ ಮಾಡಿದ ಟಿಟಿಡಿ
ದೇಗುಲ ಚಿತ್ರ
TV9 Web
| Edited By: |

Updated on: Nov 27, 2021 | 4:33 PM

Share

ತಿರುಪತಿ ತಿರುಮಲ ಶ್ರೀವಾರಿ ಭಕ್ತರಿಗೆ ಟಿಟಿಡಿ (ತಿರುಮಲ ತಿರುಪತಿ ದೇವಸ್ಥಾನಂ ಮಂಡಳಿ) ಗುಡ್​ ನ್ಯೂಸ್​ ನೀಡಿದೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ಆನ್​ಲೈನ್​​ನಲ್ಲಿ ಟಿಕೆಟ್ ಬಿಡುಗಡೆ ಮಾಡಲು ಸಿದ್ಧತೆ ನಡೆಸಿದೆ. ಹಾಗೇ, ಡಿಸೆಂಬರ್ ತಿಂಗಳ ಸರ್ವದರ್ಶನ ಟೋಕನ್​ನ್ನು ಇಂದು ಬೆಳಗ್ಗೆ 9 ಗಂಟೆಯಿಂದ ನೀಡಲು ಪ್ರಾರಂಭಿಸಿದ್ದಾಗಿ ಟಿಟಿಡಿ ಪ್ರಕಟಣೆ ಹೊರಡಿಸಿದೆ.  

ಹಾಗೇ ಭಕ್ತರು ಬೆಟ್ಟದಲ್ಲಿ ತಂಗಲು ವಸತಿ ಬುಕಿಂಗ್​ ಮತ್ತು ಸರ್ವದರ್ಶನ ಟಿಕೆಟ್​ನ್ನು ನವೆಂಬರ್ 28ರಂದು ಬೆಳಗ್ಗೆ 9 ಗಂಟೆಗೆ ಬಿಡುಗಡೆ ಮಾಡುವುದಾಗಿಯೂ ಟಿಟಿಡಿ ತಿಳಿಸಿದೆ. ಭಕ್ತರು ಟಿಟಿಡಿ ವೆಬ್​ಸೈಟ್​ಗೆ ಹೋಗಿ, ಅಲ್ಲಿಯೇ ವಿಶೇಷ ದರ್ಶನ (300 ರೂ.ಗೆ ಒಂದು ಟಿಕೆಟ್​) ಟಿಕೆಟ್​ ಮತ್ತು ಸರ್ವದರ್ಶನಕ್ಕೆ ಟಿಕೆಟ್​ ಬುಕ್ ಮಾಡಬಹುದು. ಅದರಲ್ಲೂ ಕಳೆದ ತಿಂಗಳಿನಿಂದ ಸರ್ವದರ್ಶನ ಕೋಟಾವನ್ನು ಹೆಚ್ಚಿಸಲಾಗಿದೆ.

ದೇಗುಲಕ್ಕೆ ಬರುವ ಭಕ್ತರು ಯಾವ ಕಾರಣಕ್ಕೂ ಕೊರೊನಾ ಮುನ್ನೆಚ್ಚರಿಕಾ ಕ್ರಮಗಳನ್ನು ಮರೆಯುವಂತಿಲ್ಲ. ಪ್ರತಿಯೊಂದನ್ನೂ ಪಾಲನೆ ಮಾಡಲೇಬೇಕು ಎಂದು ಟಿಟಿಡಿ ಸಲಹೆ ನೀಡಿದೆ. ಆನ್​ಲೈನ್​ಲ್ಲಿ ಕೂಡ ಕ್ಯೂ ಮಾದರಿಯಲ್ಲೇ ಟಿಕೆಟ್ ಬುಕ್ಕಿಂಗ್​ ವ್ಯವಸ್ಥೆ ಇರಲಿದ್ದು, ಯಾರು ಮೊದಲು ಲಾಗಿನ್​ ಆಗುತ್ತಾರೋ ಅವರಿಗೆ ಮೊದಲು ಬುಕ್ಕಿಂಗ್​ ಮಾಡಲು ಅವಕಾಶ ಇರುತ್ತದೆ.

ಇದನ್ನೂ ಓದಿ: ಕಾಡುಹಂದಿ ಊರೊಳಗೆ ಬಂದು ಕಾರು ಶೋರೂಮ್ ಸಿಬ್ಬಂದಿ ಮೇಲೆ ಅಟ್ಟಾಡಿಸಿ ಹಲ್ಲೆ ಮಾಡಿದ್ದು ಮಂಗಳೂರಿನಲ್ಲಿ ಮಾರಾಯ್ರೇ!

Follow Us
Web contact
Web contact

TV9 Kannada

Read More
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ಅಯ್ಯೋ 19 ವರ್ಷಗಳಿಂದ ಮಗುವಂತೆ ಸಾಕಿದ್ದ ಬೆಕ್ಕು ಹೋಗಿ ಬಿಡ್ತಾ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್