AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಕ್ತರ ಗಮನಕ್ಕೆ: ನವೆಂಬರ್‌ನಿಂದ ತಿರುಪತಿ ವೆಂಕಟರಮಣ ದರ್ಶನ ನಿಯಮಗಳಲ್ಲಿ ಬದಲಾವಣೆ

ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ನವೆಂಬರ್‌ ತಿಂಗಳಿನಿಂದ ಭಕ್ತರ ದರ್ಶನ ನಿಯಮಗಳಲ್ಲಿ ಬದಲಾವಣೆ ತರಲು ನಿರ್ಧರಿಸಿದೆ. ನವೆಂಬರ್​ನಿಂದ ಹೊಸ ನಿಯಮ ಜಾರಿಗೆ ಬರಲಿದೆ.

ಭಕ್ತರ ಗಮನಕ್ಕೆ: ನವೆಂಬರ್‌ನಿಂದ ತಿರುಪತಿ ವೆಂಕಟರಮಣ ದರ್ಶನ ನಿಯಮಗಳಲ್ಲಿ ಬದಲಾವಣೆ
Tirupathi
TV9 Web
| Edited By: |

Updated on:Oct 30, 2022 | 10:02 PM

Share

ತಿರುಪತಿ: ಸರ್ವ ದರ್ಶನ ಟೋಕನ್‌ಗಳ ವಿತರಣೆಯನ್ನು ನವೆಂಬರ್ 1ರಿಂದ ಪುನರಾರಂಭಿಸಲು ತಿರುಮಲ ತಿರುಪತಿ ದೇವಸ್ಥಾನ ಸಮಿತಿ ಮಂಡಲಿ(ಟಿಟಿಡಿ) ತೀರ್ಮಾನಿಸಿದೆ . ಕಳೆದ ಏಪ್ರಿಲ್ 12ರಿಂದ ಸರ್ವದರ್ಶನ ಟೋಕನ್‌ಗಳ ವಿತರಣೆಯನ್ನು ಟಿಟಿಡಿ ನಿಲ್ಲಿಸಿತ್ತು. ಇದೀಗ ಮತ್ತೆ ನವೆಂಬರ್‌ ತಿಂಗಳಿನಿಂದ ದರ್ಶನದ ನಿಯಮಗಳಲ್ಲಿ ಬದಲಾವಣೆ ತರಲು ಮುಂದಾಗಿದೆ.

ತಿರುಪತಿಯ ಭೂದೇವಿ ಕಾಂಪ್ಲೆಕ್ಸ್‌, ಶ್ರೀನಿವಾಸಂ ಮತ್ತು ರೈಲು ನಿಲ್ದಾಣದ ಹಿಂಭಾಗದ ಎರಡನೇ ಚೌಲಿ óನಲ್ಲಿ ಸರ್ವದರ್ಶನ ಟೋಕನ್‌ ವಿತರಿಸಲಾಗುತ್ತದೆ. ಪ್ರತಿ ಶನಿವಾರ, ರವಿವಾರ, ಸೋಮವಾರ ಮತ್ತು ಬುಧವಾರದಂದು 20,000ದಿಂದ 25,000 ಟೋಕನ್‌ಗಳನ್ನು ವಿತರಿಸಲಾಗುತ್ತದೆ.

TTD: ಹಿರಿಯ ನಾಗರಿಕರಿಗೆ ಟಿಟಿಡಿ ಗುಡ್ ನ್ಯೂಸ್! ಉಚಿತ ದರ್ಶನ ಟಿಕೆಟ್ ಆನ್‌ಲೈನ್ ನಲ್ಲಿ ಬಿಡುಗಡೆ ಬಗ್ಗೆ ಪ್ರಮುಖ ಘೋಷಣೆ

ಮಂಗಳವಾರ, ಗುರುವಾರ ಮತ್ತು ಶುಕ್ರವಾರ 15,000 ಟೋಕನ್‌ ವಿತರಿಸಲಾಗುವುದು ಎಂದು ಟಿಟಿಡಿ ಇಒ ಎ.ವಿ. ಧರ್ಮಾರೆಡ್ಡಿ ಮಾಹಿತಿ ನೀಡಿದ್ದಾರೆ. ಇನ್ನು ಉಚಿತ ದರ್ಶನದ ಭಕ್ತರ ಕಾಯುವ ಸಮಯವನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ವಿಐಪಿ ದರ್ಶನದ ಸಮಯವನ್ನು ಪ್ರಾಯೋಗಿಕವಾಗಿ ಡಿ.1ರಿಂದ ಬೆಳಗ್ಗೆ 8 ಗಂಟೆಗೆ ಆರಂಭಿಸಲಾಗುವುದು ಎಂದೂ ಅವರು ತಿಳಿಸಿದ್ದಾರೆ.

ಮುಂಜಾನೆ 8 ಗಂಟೆಗೆ ಮುಗಿಯಬೇಕಿದ್ದ ವಿಐಪಿ ದರ್ಶನ ಕೆಲವು ದಿನ 10 ಗಂಟೆಯ ತನಕ ಸಾಗುತ್ತಿತ್ತು. ಇದರಿಂದಾಗಿ ಉಚಿತ ದರ್ಶನಕ್ಕೆ ಬರುವ ಭಕ್ತರಿಗೆ ತೊಂದರೆ ಆಗುತ್ತಿತ್ತು. ಅಲ್ಲದೇ ಅರ್ಜಿತ ಸೇವೆ ವೀಕ್ಷಿಸಲು ಸಹ ಸಾಧ್ಯವಾಗುತ್ತಿರಲಿಲ್ಲ. ವಿಐಪಿ ದರ್ಶನ ಮುಗಿಯುವ ತನಕ ವೈಕುಂಠಂ ಕ್ಯೂ ಕಾಂಪ್ಲೆಕ್ಸ್‌ನಲ್ಲಿರುವ ಉಚಿತ ದರ್ಶನದ ಭಕ್ತರು ತಾಸುಗಟ್ಟಲೇ ಕಾಯಬೇಕಿತ್ತು. ಇಂತಹ ಸಮಸ್ಯೆಗಳನ್ನು ಬಗೆಹರಿಸಲು ಟಿಟಿಡಿ ಪ್ರಾಯೋಗಿಕ ಬದಲಾವಣೆ ಮಾಡುತ್ತಿದೆ.

Published On - 10:02 pm, Sun, 30 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ