AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಡಾಲರ್​ ಶೇಷಾದ್ರಿ 1978ರಲ್ಲಿ ಟಿಟಿಡಿಯನ್ನು ಸೇರ್ಪಡೆಗೊಂಡರು. 2007ರಲ್ಲಿ ಅವರು ನಿವೃತ್ತರಾದರೂ ಕೂಡ ಅವರ ಕಾರ್ಯವೈಖರಿಯನ್ನು ನೋಡಿ, ಅಲ್ಲಿಯೇ ತಮ್ಮ ಸೇವೆ ಮುಂದುವರಿಸಲು ಅವಕಾಶ ನೀಡಲಾಗಿತ್ತು.

ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ
ಪಿ.ಶೇಷಾದ್ರಿ
TV9 Web
| Edited By: |

Updated on: Nov 29, 2021 | 11:40 AM

Share

ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ವಿಶೇಷ ಕರ್ತವ್ಯ ಅಧಿಕಾರಿ ಆಗಿದ್ದ ಪಿ.ಶೇಷಾದ್ರಿ (74) ಇಂದು ಮುಂಜಾನೆ ವಿಶಾಖಪಟ್ಟಣಂನಲ್ಲಿ ನಿಧನರಾದರು. ಇವರು ಡಾಲರ್​​ ಶೇಷಾದ್ರಿ ಎಂದೇ ಜನಪ್ರಿಯರಾಗಿದ್ದರು. ಹಲವು ದಶಕಗಳಿಂದಲೂ ಅವರು ಟಿಟಿಡಿಯಲ್ಲೇ ಇದ್ದರು. ಹಾಗೇ, ಟಿಟಿಡಿ ವತಿಯಿಂದ ವಿಶಾಖಪಟ್ಟಣಂನಲ್ಲಿ ಆಯೋಜಿಸಿದ್ದ ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದಾಗ ನಿಧನರಾಗಿದ್ದಾರೆ.

ಸೋಮವಾರ ಮುಂಜಾನೆ ಹೊತ್ತಿಗೆ ಅವರಿಗೆ ಹೃದಯ ಸ್ತಂಭನವಾಗಿದೆ. ಕೂಡಲೇ ಅವರನ್ನು ರಾಮನಗರದಲ್ಲಿರುವ ಕಾರ್ಪೋರೇಟ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಏರ್​ಲಿಫ್ಟ್​ ಮೂಲಕ ತಿರುಪತಿಗೆ ತರಲಾಗುವುದು ಎಂದು ಹೇಳಲಾಗಿದ್ದು, ಇಲ್ಲಿಯೇ ಅಂತಿಮ ಸಂಸ್ಕಾರ ನಡೆಯಲಿದೆ.

ಡಾಲರ್​ ಶೇಷಾದ್ರಿ 1978ರಲ್ಲಿ ಟಿಟಿಡಿಯನ್ನು ಸೇರ್ಪಡೆಗೊಂಡರು. 2007ರಲ್ಲಿ ಅವರು ನಿವೃತ್ತರಾದರೂ ಕೂಡ ಅವರ ಕಾರ್ಯವೈಖರಿಯನ್ನು ನೋಡಿ, ಅಲ್ಲಿಯೇ ತಮ್ಮ ಸೇವೆ ಮುಂದುವರಿಸಲು ಅವಕಾಶ ನೀಡಲಾಗಿತ್ತು. ಅವರ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಹಾಗೇ, ಟಿಡಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಎನ್​.ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್​ ಸಂತಾಪ ಸೂಚಿಸಿದ್ದು, ಟಿಟಿಡಿಯ ಒಎಎಸ್​ಡಿ ಶೇಶಾದ್ರಿ ನಿಧನ ದುಃಖ ತಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೆಯ ಅಲೆ ಮುನ್ನೆಲೆ ಸರ್ಕಾರದ ಮುಂದೆ ಲಾಕ್‌ಡೌನ್ ಪ್ರಸ್ತಾವನೆ ಇಲ್ಲ -ಸಚಿವ ಡಾ. ಕೆ. ಸುಧಾಕರ್

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್