AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ

ಡಾಲರ್​ ಶೇಷಾದ್ರಿ 1978ರಲ್ಲಿ ಟಿಟಿಡಿಯನ್ನು ಸೇರ್ಪಡೆಗೊಂಡರು. 2007ರಲ್ಲಿ ಅವರು ನಿವೃತ್ತರಾದರೂ ಕೂಡ ಅವರ ಕಾರ್ಯವೈಖರಿಯನ್ನು ನೋಡಿ, ಅಲ್ಲಿಯೇ ತಮ್ಮ ಸೇವೆ ಮುಂದುವರಿಸಲು ಅವಕಾಶ ನೀಡಲಾಗಿತ್ತು.

ತಿರುಮಲ ತಿರುಪತಿ ದೇವಸ್ಥಾನಂನ ಒಎಸ್​ಡಿ ಪಿ.ಶೇಷಾದ್ರಿ ವಿಶಾಖಪಟ್ಟಣಂನಲ್ಲಿ ನಿಧನ
ಪಿ.ಶೇಷಾದ್ರಿ
TV9 Web
| Edited By: |

Updated on: Nov 29, 2021 | 11:40 AM

Share

ವಿಶಾಖಪಟ್ಟಣಂ: ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ)ನ ವಿಶೇಷ ಕರ್ತವ್ಯ ಅಧಿಕಾರಿ ಆಗಿದ್ದ ಪಿ.ಶೇಷಾದ್ರಿ (74) ಇಂದು ಮುಂಜಾನೆ ವಿಶಾಖಪಟ್ಟಣಂನಲ್ಲಿ ನಿಧನರಾದರು. ಇವರು ಡಾಲರ್​​ ಶೇಷಾದ್ರಿ ಎಂದೇ ಜನಪ್ರಿಯರಾಗಿದ್ದರು. ಹಲವು ದಶಕಗಳಿಂದಲೂ ಅವರು ಟಿಟಿಡಿಯಲ್ಲೇ ಇದ್ದರು. ಹಾಗೇ, ಟಿಟಿಡಿ ವತಿಯಿಂದ ವಿಶಾಖಪಟ್ಟಣಂನಲ್ಲಿ ಆಯೋಜಿಸಿದ್ದ ದೀಪೋತ್ಸವದಲ್ಲಿ ಪಾಲ್ಗೊಳ್ಳಲು ಅಲ್ಲಿಗೆ ತೆರಳಿದ್ದಾಗ ನಿಧನರಾಗಿದ್ದಾರೆ.

ಸೋಮವಾರ ಮುಂಜಾನೆ ಹೊತ್ತಿಗೆ ಅವರಿಗೆ ಹೃದಯ ಸ್ತಂಭನವಾಗಿದೆ. ಕೂಡಲೇ ಅವರನ್ನು ರಾಮನಗರದಲ್ಲಿರುವ ಕಾರ್ಪೋರೇಟ್​ ಆಸ್ಪತ್ರೆಗೆ ದಾಖಲು ಮಾಡಲಾಯಿತು. ಆದರೆ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾಗಿ ವೈದ್ಯರು ಘೋಷಿಸಿದ್ದಾರೆ. ಮೃತದೇಹವನ್ನು ಏರ್​ಲಿಫ್ಟ್​ ಮೂಲಕ ತಿರುಪತಿಗೆ ತರಲಾಗುವುದು ಎಂದು ಹೇಳಲಾಗಿದ್ದು, ಇಲ್ಲಿಯೇ ಅಂತಿಮ ಸಂಸ್ಕಾರ ನಡೆಯಲಿದೆ.

ಡಾಲರ್​ ಶೇಷಾದ್ರಿ 1978ರಲ್ಲಿ ಟಿಟಿಡಿಯನ್ನು ಸೇರ್ಪಡೆಗೊಂಡರು. 2007ರಲ್ಲಿ ಅವರು ನಿವೃತ್ತರಾದರೂ ಕೂಡ ಅವರ ಕಾರ್ಯವೈಖರಿಯನ್ನು ನೋಡಿ, ಅಲ್ಲಿಯೇ ತಮ್ಮ ಸೇವೆ ಮುಂದುವರಿಸಲು ಅವಕಾಶ ನೀಡಲಾಗಿತ್ತು. ಅವರ ನಿಧನಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ವೈ.ಎಸ್​.ಜಗನ್​ರೆಡ್ಡಿ ಸಂತಾಪ ಸೂಚಿಸಿದ್ದಾರೆ. ಹಾಗೇ, ಟಿಡಿಪಿ ಪಕ್ಷದ ಪ್ರಧಾನ ಕಾರ್ಯದರ್ಶಿ, ಮಾಜಿ ಸಿಎಂ ಎನ್​.ಚಂದ್ರಬಾಬು ನಾಯ್ಡು ಅವರ ಪುತ್ರ ನಾರಾ ಲೋಕೇಶ್​ ಸಂತಾಪ ಸೂಚಿಸಿದ್ದು, ಟಿಟಿಡಿಯ ಒಎಎಸ್​ಡಿ ಶೇಶಾದ್ರಿ ನಿಧನ ದುಃಖ ತಂದಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 3ನೆಯ ಅಲೆ ಮುನ್ನೆಲೆ ಸರ್ಕಾರದ ಮುಂದೆ ಲಾಕ್‌ಡೌನ್ ಪ್ರಸ್ತಾವನೆ ಇಲ್ಲ -ಸಚಿವ ಡಾ. ಕೆ. ಸುಧಾಕರ್

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ