AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಟಿಟಿಡಿ ಹೇಳಿದೆ.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ
ತಿರುಮಲ ತಿರುಪತಿ ದೇವಸ್ಥಾನ
Lakshmi Hegde
| Edited By: |

Updated on: Dec 12, 2020 | 6:18 PM

Share

ತಿರುಮಲ: ತಿರುಮಲ ತಿರುಪತಿ ದೇವಸ್ಥಾನ (TTD)ಕೊವಿಡ್​-19 ನಿರ್ಬಂಧಗಳನ್ನು ಸಡಿಲಿಸಿದ್ದು, ಇನ್ನು ಮುಂದೆ 10 ವರ್ಷದೊಳಗಿನ ಮಕ್ಕಳು, 65 ಮೇಲ್ಪಟ್ಟ ವೃದ್ಧರು ಮತ್ತು ಗರ್ಭಿಣಿಯರೂ ಕೂಡ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಆಗಮಿಸಬಹುದು ಎಂದು ಹೇಳಿದೆ.

ಕೊರೊನಾ ಕಾರಣದಿಂದ ಮಾರ್ಚ್​ನಿಂದಲೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಇರಲಿಲ್ಲ. ಜೂನ್​ನಿಂದ ಮತ್ತೆ ದೇವರ ದರ್ಶನಕ್ಕೆ ಅನುಮತಿ ನೀಡಿದ್ದರೂ, 10 ವರ್ಷ ಒಳಗಿನ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ಅನುಮತಿ ನೀಡಿರಲಿಲ್ಲ. ಆದರೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೂ ಅವಕಾಶ ಕೊಡಿ ಎಂಬ ಮನವಿಯುಳ್ಳ ಇ-ಮೇಲ್​ಗಳು, ಫೋನ್​ ಕರೆಗಳು ಟಿಟಿಡಿಗೆ ಹೆಚ್ಚು ಪ್ರಮಾಣದಲ್ಲಿ ಬರಲು ಪ್ರಾರಂಭವಾಗಿತ್ತು.

ತಮ್ಮ ಪುಟ್ಟ ಮಕ್ಕಳಿಗೆ ಅನ್ನ ಹಾಕಿಸುವ ಶಾಸ್ತ್ರ, ಮುಡಿ ಕೊಡುವುದು, ಕಿವಿ ಚುಚ್ಚುವ ಶಾಸ್ತ್ರವನ್ನು ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮಾಡಲು ಬಯಸುತ್ತಿದ್ದೇವೆ ಎಂದು ಅನೇಕ ಪಾಲಕರು ಹೇಳಿದ್ದರು.. ಹಾಗೇ 65ವರ್ಷ ಮೇಲ್ಪಟ್ಟವರು ತಮ್ಮ ಷಷ್ಟಿಪೂರ್ತಿ, ಶಾಂತಿ ಪೂಜೆಯನ್ನು ಮಾಡಿಸುವುದಿತ್ತು, ಅವಕಾಶ ಮಾಡಿಕೊಂಡಿ ಎಂಬ ಕೋರಿಕೆ ಇಟ್ಟಿದ್ದರು. ಇದೆಲ್ಲ ಕಾರಣದಿಂದ ಟಿಟಿಡಿ ಮಹತ್ವದ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಆದರೆ ಸಾಮಾಜಿಕ ಅಂತರ ಪರಿಪಾಲನೆ, ಮಾಸ್ಕ್ ಕಡ್ಡಾಯ ಎಂದು ಹೇಳಿದೆ.

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ