AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಟಿಟಿಡಿ ಹೇಳಿದೆ.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ
ತಿರುಮಲ ತಿರುಪತಿ ದೇವಸ್ಥಾನ
Lakshmi Hegde
| Edited By: ಸಾಧು ಶ್ರೀನಾಥ್​|

Updated on: Dec 12, 2020 | 6:18 PM

Share

ತಿರುಮಲ: ತಿರುಮಲ ತಿರುಪತಿ ದೇವಸ್ಥಾನ (TTD)ಕೊವಿಡ್​-19 ನಿರ್ಬಂಧಗಳನ್ನು ಸಡಿಲಿಸಿದ್ದು, ಇನ್ನು ಮುಂದೆ 10 ವರ್ಷದೊಳಗಿನ ಮಕ್ಕಳು, 65 ಮೇಲ್ಪಟ್ಟ ವೃದ್ಧರು ಮತ್ತು ಗರ್ಭಿಣಿಯರೂ ಕೂಡ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಆಗಮಿಸಬಹುದು ಎಂದು ಹೇಳಿದೆ.

ಕೊರೊನಾ ಕಾರಣದಿಂದ ಮಾರ್ಚ್​ನಿಂದಲೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಇರಲಿಲ್ಲ. ಜೂನ್​ನಿಂದ ಮತ್ತೆ ದೇವರ ದರ್ಶನಕ್ಕೆ ಅನುಮತಿ ನೀಡಿದ್ದರೂ, 10 ವರ್ಷ ಒಳಗಿನ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ಅನುಮತಿ ನೀಡಿರಲಿಲ್ಲ. ಆದರೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೂ ಅವಕಾಶ ಕೊಡಿ ಎಂಬ ಮನವಿಯುಳ್ಳ ಇ-ಮೇಲ್​ಗಳು, ಫೋನ್​ ಕರೆಗಳು ಟಿಟಿಡಿಗೆ ಹೆಚ್ಚು ಪ್ರಮಾಣದಲ್ಲಿ ಬರಲು ಪ್ರಾರಂಭವಾಗಿತ್ತು.

ತಮ್ಮ ಪುಟ್ಟ ಮಕ್ಕಳಿಗೆ ಅನ್ನ ಹಾಕಿಸುವ ಶಾಸ್ತ್ರ, ಮುಡಿ ಕೊಡುವುದು, ಕಿವಿ ಚುಚ್ಚುವ ಶಾಸ್ತ್ರವನ್ನು ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮಾಡಲು ಬಯಸುತ್ತಿದ್ದೇವೆ ಎಂದು ಅನೇಕ ಪಾಲಕರು ಹೇಳಿದ್ದರು.. ಹಾಗೇ 65ವರ್ಷ ಮೇಲ್ಪಟ್ಟವರು ತಮ್ಮ ಷಷ್ಟಿಪೂರ್ತಿ, ಶಾಂತಿ ಪೂಜೆಯನ್ನು ಮಾಡಿಸುವುದಿತ್ತು, ಅವಕಾಶ ಮಾಡಿಕೊಂಡಿ ಎಂಬ ಕೋರಿಕೆ ಇಟ್ಟಿದ್ದರು. ಇದೆಲ್ಲ ಕಾರಣದಿಂದ ಟಿಟಿಡಿ ಮಹತ್ವದ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಆದರೆ ಸಾಮಾಜಿಕ ಅಂತರ ಪರಿಪಾಲನೆ, ಮಾಸ್ಕ್ ಕಡ್ಡಾಯ ಎಂದು ಹೇಳಿದೆ.

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

Follow Us
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ರೌಡಿಶೀಟರ್ ಬರ್ತ್‌ಡೇ ಪಾರ್ಟಿಯಲ್ಲಿ ಬಿಜೆಪಿ ಶಾಸಕ ಭಾಗಿ
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು
ಲಿಂಗನಮಕ್ಕಿ ಡ್ಯಾಮ್ ಹಿನ್ನೀರು ಇಳಿಕೆ: ನಿಂತಿದ್ದ ಲಾಂಚ್ ಮತ್ತೆ ಶುರು