AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಟಿಟಿಡಿ ಹೇಳಿದೆ.

ತಿಮ್ಮಪ್ಪನ ಸನ್ನಿಧಾನಕ್ಕೆ ಮತ್ತೆ ಮಕ್ಕಳು-ವೃದ್ಧರಿಗೆ ಅವಕಾಶ; ನಿರ್ಬಂಧ ಸಡಿಲಿಕೆ, ಆದ್ರೆ ಷರತ್ತು ಅನ್ವಯ
ತಿರುಮಲ ತಿರುಪತಿ ದೇವಸ್ಥಾನ
Lakshmi Hegde
| Edited By: |

Updated on: Dec 12, 2020 | 6:18 PM

Share

ತಿರುಮಲ: ತಿರುಮಲ ತಿರುಪತಿ ದೇವಸ್ಥಾನ (TTD)ಕೊವಿಡ್​-19 ನಿರ್ಬಂಧಗಳನ್ನು ಸಡಿಲಿಸಿದ್ದು, ಇನ್ನು ಮುಂದೆ 10 ವರ್ಷದೊಳಗಿನ ಮಕ್ಕಳು, 65 ಮೇಲ್ಪಟ್ಟ ವೃದ್ಧರು ಮತ್ತು ಗರ್ಭಿಣಿಯರೂ ಕೂಡ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಆಗಮಿಸಬಹುದು ಎಂದು ಹೇಳಿದೆ.

ಕೊರೊನಾ ಕಾರಣದಿಂದ ಮಾರ್ಚ್​ನಿಂದಲೂ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಅವಕಾಶ ಇರಲಿಲ್ಲ. ಜೂನ್​ನಿಂದ ಮತ್ತೆ ದೇವರ ದರ್ಶನಕ್ಕೆ ಅನುಮತಿ ನೀಡಿದ್ದರೂ, 10 ವರ್ಷ ಒಳಗಿನ ಮಕ್ಕಳು, ವೃದ್ಧರು, ಗರ್ಭಿಣಿಯರಿಗೆ ಅನುಮತಿ ನೀಡಿರಲಿಲ್ಲ. ಆದರೆ ಮಕ್ಕಳು, ವೃದ್ಧರು, ಗರ್ಭಿಣಿಯರಿಗೂ ಅವಕಾಶ ಕೊಡಿ ಎಂಬ ಮನವಿಯುಳ್ಳ ಇ-ಮೇಲ್​ಗಳು, ಫೋನ್​ ಕರೆಗಳು ಟಿಟಿಡಿಗೆ ಹೆಚ್ಚು ಪ್ರಮಾಣದಲ್ಲಿ ಬರಲು ಪ್ರಾರಂಭವಾಗಿತ್ತು.

ತಮ್ಮ ಪುಟ್ಟ ಮಕ್ಕಳಿಗೆ ಅನ್ನ ಹಾಕಿಸುವ ಶಾಸ್ತ್ರ, ಮುಡಿ ಕೊಡುವುದು, ಕಿವಿ ಚುಚ್ಚುವ ಶಾಸ್ತ್ರವನ್ನು ವೆಂಕಟೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಮಾಡಲು ಬಯಸುತ್ತಿದ್ದೇವೆ ಎಂದು ಅನೇಕ ಪಾಲಕರು ಹೇಳಿದ್ದರು.. ಹಾಗೇ 65ವರ್ಷ ಮೇಲ್ಪಟ್ಟವರು ತಮ್ಮ ಷಷ್ಟಿಪೂರ್ತಿ, ಶಾಂತಿ ಪೂಜೆಯನ್ನು ಮಾಡಿಸುವುದಿತ್ತು, ಅವಕಾಶ ಮಾಡಿಕೊಂಡಿ ಎಂಬ ಕೋರಿಕೆ ಇಟ್ಟಿದ್ದರು. ಇದೆಲ್ಲ ಕಾರಣದಿಂದ ಟಿಟಿಡಿ ಮಹತ್ವದ ನಿರ್ಧಾರವನ್ನು ಕೈಗೆತ್ತಿಕೊಂಡಿದೆ. ಆದರೆ ಸಾಮಾಜಿಕ ಅಂತರ ಪರಿಪಾಲನೆ, ಮಾಸ್ಕ್ ಕಡ್ಡಾಯ ಎಂದು ಹೇಳಿದೆ.

ಭಕ್ತರು ಈಗಿರುವ ನಿಯಮದ ಅನುಸಾರವೇ ಆನ್​ಲೈನ್​ನಲ್ಲಿ ಟಿಕೆಟ್​ ಬುಕ್ ಮಾಡಬೇಕು. ಕೇಂದ್ರ ಸರ್ಕಾರದ ಮಾರ್ಗಸೂಚಿಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ.

ತಿರುಪತಿಯಲ್ಲಿ ಶ್ರೀವಾರಿ ಲಡ್ಡು ಪ್ರಸಾದದ ಜೊತೆಗೆ 2021ರ ಕ್ಯಾಲೆಂಡರ್​, ಡೈರಿಯನ್ನೂ ಕೊಡ್ತಿದ್ದಾರೆ

ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್