AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati: ಚೆನ್ನೈನಲ್ಲಿ ನಿರ್ಮಾಣವಾಯ್ತು ತಿರುಪತಿ ತಿಮ್ಮಪ್ಪನ ಎರಡನೇ ದೇವಾಲಯ, ಮಾರ್ಚ್​ 17ಕ್ಕೆ ಉದ್ಘಾಟನೆ

ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಚೆನ್ನೈನಲ್ಲಿ ತನ್ನ ಎರಡನೇ ದೇವಸ್ಥಾನವನ್ನು ನಿರ್ಮಿಸಿದೆ.

Tirupati: ಚೆನ್ನೈನಲ್ಲಿ ನಿರ್ಮಾಣವಾಯ್ತು ತಿರುಪತಿ ತಿಮ್ಮಪ್ಪನ ಎರಡನೇ ದೇವಾಲಯ, ಮಾರ್ಚ್​ 17ಕ್ಕೆ ಉದ್ಘಾಟನೆ
ತಿರುಪತಿ ದೇವಸ್ಥಾನImage Credit source: Wikipedia
ನಯನಾ ರಾಜೀವ್
|

Updated on: Mar 14, 2023 | 9:02 AM

Share

ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಚೆನ್ನೈನಲ್ಲಿ ತನ್ನ ಎರಡನೇ ದೇವಸ್ಥಾನವನ್ನು ನಿರ್ಮಿಸಿದೆ. ತಿರುಪತಿ ತಿರುಮಲ ದೇವಸ್ಥಾನವು ವಿಶ್ವದ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿದೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಟಿಟಿಡಿಯ ಎರಡನೇ ದೇವಸ್ಥಾನ ನಿರ್ಮಾಣವಾಗಿದ್ದು, ಮಾರ್ಚ್​ 17ರಂದು ತೆರೆಯಲಾಗುತ್ತದೆ. ಚೆನ್ನೈನ ಟಿ ನಗರದ ಜಿಎನ್ ಚೆಟ್ಟಿ ರಸ್ತೆಯಲ್ಲಿ ಸ್ಥಾಪಿಸಲಾದ ಈ ಹೊಸ ದೇವಾಲಯವು ಟಿಟಿಡಿಯ ಎರಡನೇ ದೇವಾಲಯವಾಗಿದೆ. ಇದು ಟಿ ನಗರದ ವೆಂಕಟನಾರಾಯಣ ರಸ್ತೆಯಲ್ಲಿರುವ ಟಿಟಿಡಿಯ ಮೊದಲ ದೇವಸ್ಥಾನ ಹಾಗೂ ಮಾಹಿತಿ ಕೇಂದ್ರಕ್ಕೆ ಬಹಳ ಹತ್ತಿರದಲ್ಲಿದೆ.

ಈ ದೇವಾಲಯವು ವೆಂಕಟೇಶ್ವರನ ದೈವಿಕ ಪತ್ನಿ ಪದ್ಮಾವತಿ ಅಮ್ಮನವರಿಗೆ ಸಮರ್ಪಿತವಾಗಿದೆ. ಚೆನ್ನೈನ ಟಿ ನಗರದ ಜಿಎನ್ ಚೆಟ್ಟಿ ರಸ್ತೆಯಲ್ಲಿ ಹೊಸ ದೇವಾಲಯವನ್ನು ನಿರ್ಮಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರ ನಟಿ ಪಿ ಕಾಂಚನಾ ಅವರು 14,880 ಚದರ ಅಡಿ ವಿಸ್ತೀರ್ಣದ ಭೂಮಿಯನ್ನು ದೇವಸ್ಥಾನಕ್ಕಾಗಿ ಧಾನ ಮಾಡಿದ್ದಾರೆ.

ಮತ್ತಷ್ಟು ಓದಿ: TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ದೇವಾಲಯವನ್ನು ತೆರೆಯುವ ಮೊದಲು ಅಂಕುರಾರ್ಪಣದೊಂದಿಗೆ ಅನೇಕ ಧಾರ್ಮಿಕ ವಿಧಿಗಳನ್ನು ನಡೆಸಲಾಗುತ್ತದೆ. ಮಾರ್ಚ್​ 17 ರಂದು ಮಹಾಕುಂಭಾಭಿಷೇಕದೊಂದಿಗೆ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಕ್ತಾಯಗೊಳ್ಳಲಿವೆ.

ಮಾರ್ಚ್​ 17 ರಂದು ನಡೆಯುವ ಶ್ರೀ ಪದ್ಮಾವತಿ ಅಮ್ಮನವರ ಮಹಾಕುಂಭಾಭಿಷೇಕದಲ್ಲಿ ಎಲ್ಲಾ ಭಕ್ತರು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ವಿಷ್ಣುವಿನ ಅವತಾರವಾದ ವೆಂಕಟೇಶ್ವರನ ಜಗತ್ಪ್ರಸಿದ್ಧ ತಿರುಪತಿ ದೇವಸ್ಥಾನವು ತಮಿಳುನಾಡಿನ ನೆರೆಯ ರಾಜ್ಯವಾದ ಆಂಧ್ರಪ್ರದೇಶದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ