AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Tirupati: ಚೆನ್ನೈನಲ್ಲಿ ನಿರ್ಮಾಣವಾಯ್ತು ತಿರುಪತಿ ತಿಮ್ಮಪ್ಪನ ಎರಡನೇ ದೇವಾಲಯ, ಮಾರ್ಚ್​ 17ಕ್ಕೆ ಉದ್ಘಾಟನೆ

ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಚೆನ್ನೈನಲ್ಲಿ ತನ್ನ ಎರಡನೇ ದೇವಸ್ಥಾನವನ್ನು ನಿರ್ಮಿಸಿದೆ.

Tirupati: ಚೆನ್ನೈನಲ್ಲಿ ನಿರ್ಮಾಣವಾಯ್ತು ತಿರುಪತಿ ತಿಮ್ಮಪ್ಪನ ಎರಡನೇ ದೇವಾಲಯ, ಮಾರ್ಚ್​ 17ಕ್ಕೆ ಉದ್ಘಾಟನೆ
ತಿರುಪತಿ ದೇವಸ್ಥಾನImage Credit source: Wikipedia
ನಯನಾ ರಾಜೀವ್
|

Updated on: Mar 14, 2023 | 9:02 AM

Share

ವಿಶ್ವವಿಖ್ಯಾತ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿಯು ಚೆನ್ನೈನಲ್ಲಿ ತನ್ನ ಎರಡನೇ ದೇವಸ್ಥಾನವನ್ನು ನಿರ್ಮಿಸಿದೆ. ತಿರುಪತಿ ತಿರುಮಲ ದೇವಸ್ಥಾನವು ವಿಶ್ವದ ಶ್ರೀಮಂತ ದೇವಸ್ಥಾನ ಎನಿಸಿಕೊಂಡಿದೆ. ತಮಿಳುನಾಡಿನ ರಾಜಧಾನಿ ಚೆನ್ನೈನಲ್ಲಿ ಟಿಟಿಡಿಯ ಎರಡನೇ ದೇವಸ್ಥಾನ ನಿರ್ಮಾಣವಾಗಿದ್ದು, ಮಾರ್ಚ್​ 17ರಂದು ತೆರೆಯಲಾಗುತ್ತದೆ. ಚೆನ್ನೈನ ಟಿ ನಗರದ ಜಿಎನ್ ಚೆಟ್ಟಿ ರಸ್ತೆಯಲ್ಲಿ ಸ್ಥಾಪಿಸಲಾದ ಈ ಹೊಸ ದೇವಾಲಯವು ಟಿಟಿಡಿಯ ಎರಡನೇ ದೇವಾಲಯವಾಗಿದೆ. ಇದು ಟಿ ನಗರದ ವೆಂಕಟನಾರಾಯಣ ರಸ್ತೆಯಲ್ಲಿರುವ ಟಿಟಿಡಿಯ ಮೊದಲ ದೇವಸ್ಥಾನ ಹಾಗೂ ಮಾಹಿತಿ ಕೇಂದ್ರಕ್ಕೆ ಬಹಳ ಹತ್ತಿರದಲ್ಲಿದೆ.

ಈ ದೇವಾಲಯವು ವೆಂಕಟೇಶ್ವರನ ದೈವಿಕ ಪತ್ನಿ ಪದ್ಮಾವತಿ ಅಮ್ಮನವರಿಗೆ ಸಮರ್ಪಿತವಾಗಿದೆ. ಚೆನ್ನೈನ ಟಿ ನಗರದ ಜಿಎನ್ ಚೆಟ್ಟಿ ರಸ್ತೆಯಲ್ಲಿ ಹೊಸ ದೇವಾಲಯವನ್ನು ನಿರ್ಮಿಸಲಾಗಿದೆ. ದಕ್ಷಿಣ ಭಾರತದ ಚಲನಚಿತ್ರ ನಟಿ ಪಿ ಕಾಂಚನಾ ಅವರು 14,880 ಚದರ ಅಡಿ ವಿಸ್ತೀರ್ಣದ ಭೂಮಿಯನ್ನು ದೇವಸ್ಥಾನಕ್ಕಾಗಿ ಧಾನ ಮಾಡಿದ್ದಾರೆ.

ಮತ್ತಷ್ಟು ಓದಿ: TTD Assets: ತಿರುಪತಿ ತಿಮ್ಮಪ್ಪನ ಒಟ್ಟು ಆಸ್ತಿ ಎಷ್ಟು? ಅದರ ಮೌಲ್ಯವೆಷ್ಟು, ಇರುವ ಬಂಗಾರವೆಷ್ಟು? ಇಲ್ಲಿದೆ ಮಾಹಿತಿ

ಸುಮಾರು 7 ಕೋಟಿ ರೂ. ವೆಚ್ಚದಲ್ಲಿ ದೇವಸ್ಥಾನವನ್ನು ನಿರ್ಮಿಸಲಾಗಿದೆ. ದೇವಾಲಯವನ್ನು ತೆರೆಯುವ ಮೊದಲು ಅಂಕುರಾರ್ಪಣದೊಂದಿಗೆ ಅನೇಕ ಧಾರ್ಮಿಕ ವಿಧಿಗಳನ್ನು ನಡೆಸಲಾಗುತ್ತದೆ. ಮಾರ್ಚ್​ 17 ರಂದು ಮಹಾಕುಂಭಾಭಿಷೇಕದೊಂದಿಗೆ ದೇವಸ್ಥಾನದಲ್ಲಿ ಧಾರ್ಮಿಕ ವಿಧಿವಿಧಾನಗಳು ಮುಕ್ತಾಯಗೊಳ್ಳಲಿವೆ.

ಮಾರ್ಚ್​ 17 ರಂದು ನಡೆಯುವ ಶ್ರೀ ಪದ್ಮಾವತಿ ಅಮ್ಮನವರ ಮಹಾಕುಂಭಾಭಿಷೇಕದಲ್ಲಿ ಎಲ್ಲಾ ಭಕ್ತರು ಭಾಗವಹಿಸುವಂತೆ ಮನವಿ ಮಾಡಲಾಗಿದೆ. ವಿಷ್ಣುವಿನ ಅವತಾರವಾದ ವೆಂಕಟೇಶ್ವರನ ಜಗತ್ಪ್ರಸಿದ್ಧ ತಿರುಪತಿ ದೇವಸ್ಥಾನವು ತಮಿಳುನಾಡಿನ ನೆರೆಯ ರಾಜ್ಯವಾದ ಆಂಧ್ರಪ್ರದೇಶದಲ್ಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
5 ಪಂದ್ಯಗಳಲ್ಲಿ 4ನೇ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
ಕೊನೆಯ ಹಂತದಲ್ಲಿ ಈ ಮಾತು ಬೇಕಾ? ಅಶ್ವಿನಿ-ಗಿಲ್ಲಿಗೆ ಸುದೀಪ್ ಕ್ಲಾಸ್
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
'ನಮ್ಮನ್ನ ಬಿಟ್ಟು ಹೋಗ್ಬೇಡಿ ಟೀಚರ್ಸ್​' ಶಿಕ್ಷಕರ ಮುಂದೆ ಮಕ್ಕಳ ಕಣ್ಣೀರು!
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಶಾಲೆ ಗೇಟ್​ ಬಂದ್​ ಮಾಡಿ ಶಿಕ್ಷಕರನ್ನ ತಡೆದು ಕಣ್ಣೀರಿಟ್ಟ ಮಕ್ಕಳು
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
ಅಕ್ರಮ‌ ಕಟ್ಟಡ ಹೆಸರಿನಲ್ಲಿ ಖಾಸಗಿ ಶಾಲೆ ತೆರವು: ಶಾಮಿಯಾನದಡಿ ಮಕ್ಕಳಿಗೆ ಪಾಠ
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
BBL 2026: ರಣರೋಚಕ ಪಂದ್ಯದಲ್ಲಿ ರೋಚಕ ಜಯ..!
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಣದ ಹುಣ್ಣಿಮೆಗೆ ಜನಸಾಗರ, ಬೆಳಗಾವಿಯಲ್ಲಿ ಬಸ್ ಕೊರತೆಯಿಂದ ಭಕ್ತರ ಪರದಾಟ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಬಿಗ್ ಬಾಸ್​​ನಲ್ಲಿ ಸುದೀಪ್ ಚರ್ಚೆ ಮಾಡಬೇಕಿರುವ ವಿಷಯಗಳ ಪಟ್ಟಿ ದೊಡ್ಡದಿದೆ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ
ಸರ್ಕಾರದ ಗ್ಯಾರಂಟಿ ಯೋಜನೆ ವಿರುದ್ಧ ಗುಡುಗಿದ ಹೆಚ್​​ಡಿ ದೇವೇಗೌಡ