
ತಿರುಪತಿ: ತಿರುಮಲದಲ್ಲಿ ಶ್ರೀ ವೇಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಲಡ್ಡು ಪ್ರಸಾದವನ್ನು ಭಕ್ತರಿಗೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದ ಇಬ್ಬರು ದಲ್ಲಾಳಿಗಳನ್ನು ವಿಜಿಲೆನ್ಸ್ ಅಧಿಕಾರಿಗಳು ಬಂಧಿಸಿದ್ದಾರೆ.
ಬಂಧಿತರಿಂದ ನೂರಾರು ತಿರುಪತಿ ಲಡ್ಡು ಪ್ರಸಾದದ ಟೋಕನ್ಗಳು, ಹಲವಾರು ಆಧಾರ್ ಕಾರ್ಡ್ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಧಿತರು ನೆಲ್ಲೂರು, ಪ್ರಕಾಶಂ ಜಿಲ್ಲೆಗೆ ಸೇರಿದವರೆಂದು ಪತ್ತೆಯಾಗಿದೆ. ಟಿಟಿಡಿ ವಿಜಿಲೆನ್ಸ್ ಅಧಿಕಾರಿಗಳು ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಿ, ಪ್ರಕರಣ ದಾಖಲಿಸಿದ್ದಾರೆ.
Published On - 12:58 pm, Fri, 22 November 19