Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆರೆಬ್ರಲ್ ಪಾಲ್ಸಿಯಿಂದ ಬಳಲುತ್ತಿದ್ದ ವಿದ್ಯಾರ್ಥಿಗೆ ಜೆಇಇ ಪರೀಕ್ಷೆಯಲ್ಲಿ 438 ನೇ ರ‍್ಯಾಂಕ್

ಪಶ್ಚಿಮ ಬಂಗಾಳದ ಮಿಡ್ನಾಪುರ್ ನಿವಾಸಿ ಸೆರೆಬ್ರಲ್ ಪಾಲ್ಸಿಯಿಂದ ಕುತ್ತಿಗೆಯ ಕೆಳಗೆ ಸ್ವಾಧೀನ ಕಳೆದುಕೊಂಡ ತುಹಿನ್ ದೇವ್ ಜೆಇಇ (ಮುಖ್ಯ ಪರೀಕ್ಷೆ)ಯಲ್ಲಿ 438ನೇ ರ‍್ಯಾಂಕ್ ಗಳಿಸಿದ್ದಾರೆ.

ಸೆರೆಬ್ರಲ್ ಪಾಲ್ಸಿಯಿಂದ ಬಳಲುತ್ತಿದ್ದ ವಿದ್ಯಾರ್ಥಿಗೆ ಜೆಇಇ ಪರೀಕ್ಷೆಯಲ್ಲಿ 438 ನೇ ರ‍್ಯಾಂಕ್
ತುಹಿನ್ ದೇವ್ (ಕೃಪೆ ಟ್ವಿಟರ್)
Follow us
ರಶ್ಮಿ ಕಲ್ಲಕಟ್ಟ
| Updated By: ರಾಜೇಶ್ ದುಗ್ಗುಮನೆ

Updated on: Dec 22, 2020 | 7:43 PM

ಕೋಟಾ: ಬಾಯಿಯಲ್ಲಿ ಪೆನ್ನು ಇರಿಸಿ ಪರೀಕ್ಷೆ ಬರೆಯುತ್ತಾನೆ ಈ ವಿದ್ಯಾರ್ಥಿ.  ಮೊಬೈಲ್ ಫೋನ್, ಕಂಪ್ಯೂಟರ್ ಎಲ್ಲವನ್ನೂ  ನಿರ್ವಹಿಸುವುದು ಕೂಡಾ ಇದೇ ರೀತಿಯಲ್ಲಿ.  ಸೆರೆಬ್ರಲ್ ಪಾಲ್ಸಿಯಿಂದ ಕುತ್ತಿಗೆಯ ಕೆಳಗೆ ಸ್ವಾಧೀನ ಕಳೆದುಕೊಂಡ ತುಹಿನ್ ಡೇ ಎಂಬ ಈ ವಿದ್ಯಾರ್ಥಿ ಜೆಇಇ(ಮುಖ್ಯ ಪರೀಕ್ಷೆ)ಯಲ್ಲಿ 438ನೇ ರ‍್ಯಾಂಕ್  ಪಡೆದು ಪಶ್ಚಿಮ ಬಂಗಾಳದ ಶಿಬ್ ಪುರ್ ಐಐಇಎಸ್ ಟಿ ಕಾಲೇಜಿನಲ್ಲಿ ಮಾಹಿತಿ ತಂತ್ರಜ್ಞಾನ ವಿಭಾಗದಲ್ಲಿ ಇಂಜಿನಿಯರಿಂಗ್ ಸೀಟು ಪಡೆದುಕೊಂಡಿದ್ದಾರೆ.

ಮೂಳೆಗಳನ್ನು ನೆಟ್ಟಗಾಗಿಸುವುದಕ್ಕಾಗಿ ಸುಮಾರು 20 ಸರ್ಜರಿಗೊಳಗಾಗಿರುವ ತುಹಿನ್ ಮಿಡ್ನಾಪುರ್ ನಿವಾಸಿ. ರಾಜಸ್ಥಾನದ ಕೋಟಾದಲ್ಲಿರುವ ಕೋಚಿಂಗ್ ಸಂಸ್ಥೆಯಲ್ಲಿ ಪರೀಕ್ಷೆಗೆ ಸಿದ್ಧತೆ ನಡೆಸಿದ್ದ ಈತ ಕಳೆದ ವರ್ಷ ಜೆಇಇ (ಅಡ್ವಾನ್ಡ್) ಪರೀಕ್ಷೆ ಪಾಸಾಗಿದ್ದರೂ ಪ್ಲಸ್ ಟುನಲ್ಲಿ ಇಂಜಿನಿಯರಿಂಗ್ ಕೋರ್ಸ್ ಗೆ ಅರ್ಹತೆ ಪಡೆಯಲಿರುವ ಅಂಕ ಗಳಿಸಲು ವಿಫಲರಾಗಿದ್ದರು.

ಈ ವಿದ್ಯಾರ್ಥಿಗೆ ಪ್ರವೇಶ ನೀಡಿದ್ದಕ್ಕಾಗಿ ನಮ್ಮ ಸಂಸ್ಥೆಯಲ್ಲಿರುವ ಎಲ್ಲರಿಗೂ ಖುಷಿ ಆಗಿತ್ತು. ಅವನಿಗೆ ಹಲವಾರು ಪ್ರಶಸ್ತಿಗಳು ಸಿಕ್ಕಿದ್ದು, ನಮಗೆ ಒಳ್ಳೆಯ ವಿದ್ಯಾರ್ಥಿಯಾಗಲಿದ್ದಾನೆ. ಶೇ.90ರಷ್ಟು ಅಂಗವೈಕಲ್ಯವಿರುವ ವಿದ್ಯಾರ್ಥಿಯೊಬ್ಬರು ನಮ್ಮ ಸಂಸ್ಥೆಯಲ್ಲಿ ಕಲಿಯುುತ್ತಿರುವುದು ಇದೇ ಮೊದಲು ಎಂದು ಇಂಡಿಯನ್ ಇನ್ಸಿಟ್ಯೂಟ್ ಆಫ್ ಇಂಜಿನಿಯರಿಂಗ್ ಸಯನ್ಸ್ ಆ್ಯಂಡ್ ಟೆಕ್ನಾಲಜಿಯ (ಐಐಇಎಸ್​​ಟಿ ) ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ತುಹಿನ್ ಅವರ ಕುಟುಂಬಕ್ಕೂ ವಸತಿ ಸೌಕರ್ಯ ಕಲ್ಪಿಸುವ ಬಗ್ಗೆ ಐಐಇಎಸ್​​ಟಿ ಯೋಚಿಸುತ್ತಿದೆ.  ಹಲವಾರು ಪುಸ್ತಕಗಳನ್ನು ರಚಿಸಿದ ಲೇಖಕ, ಕಾಸ್ಮೊಲೊಜಿಸ್ಟ್, ಇಂಗ್ಲಿಷ್ ಸೈದ್ದಾಂತಿಕ ಭೌತ ವಿಜ್ಞಾನಿ ಸ್ಟೀಫನ್ ಹಾಕಿಂಗ್ ಅವರೇ ನನಗೆ ಸ್ಫೂರ್ತಿ. ಇಂಜಿನಿಯರಿಂಗ್ ನಲ್ಲಿ ಭೌತಶಾಸ್ತ್ರದ ಬಗ್ಗೆ ಕಲಿಯುವುದು ಕಡಿಮೆ ಇದ್ದರೂ ನನ್ನ ಕನಸು ಸಾಕಾರಗೊಳಿಸಲು ಇದನ್ನು ಆಯ್ಕೆ ಮಾಡಿಕೊಂಡೆ ಅಂತಾರೆ ತುಹಿನ್.

JEE ಮುಖ್ಯ ಪರೀಕ್ಷಾ ವೇಳಾಪಟ್ಟಿ ಪ್ರಕಟ; ಕನ್ನಡ ಸೇರಿದಂತೆ 13 ಭಾಷೆಗಳಲ್ಲಿ ಪರೀಕ್ಷೆ ಬರೆಯಲು ಅವಕಾಶ

‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
‘ಅರ್ಜುನ್ ಜನ್ಯ ರೀತಿಯ ಹುಚ್ಚ ಬೇರೆ ಯಾರಿಲ್ಲ: ರಾಜ್ ಬಿ. ಶೆಟ್ಟಿ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ನಿರ್ದೇಶಕರ ಪಾಲಿಗೆ ಶಿವಣ್ಣ ಅಪರಂಜಿ; ಕಾರಣ ಕೊಟ್ಟು ವಿವರಿಸಿದ ಉಪೇಂದ್ರ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ