AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ. ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು ಹೋಗಿ ಸಪ್ನಾ ರಹಾನ್ ಮತ್ತು […]

IPS ಅಧಿಕಾರಿ ಮಾಡ್ತೀನಿ ಅಂತಾ TV ನಟಿ ಮತ್ತು ಪತಿಯಿಂದ 3.5 ಕೋಟಿ ರೂ ವಂಚನೆ, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on: Sep 29, 2020 | 5:08 PM

Share

ಮುಂಬೈ: ಐಪಿಎಸ್ ಅಧಿಕಾರಿಯಾಗಿ ನೇಮಕಗೊಳಿಸುವುದಾಗಿ ಭರವಸೆ ನೀಡಿ 3.5 ಕೋಟಿ ರೂ.ಗೆ ವಂಚನೆ ಮಾಡಿದ್ದ ಟಿವಿ ನಟಿ ಸಪ್ನಾ ರಹಾನ್ (28) ಮತ್ತು ಅವರ ಪತಿ ಪುನೀತ್ ಕುಮಾರ್ ರಹಾನ್ (26) ದಂಪತಿಯನ್ನು ಬಂಧಿಸಲಾಗಿದೆ. ಮುಂಬೈ ಕ್ರೈಂ ಬ್ರ್ಯಾಂಚ್ ಪೊಲೀಸರು ಭಾನುವಾರ ದಂಪತಿಯನ್ನು ಅರೆಸ್ಟ್ ಮಾಡಿದ್ದಾರೆ.

ಸಪ್ನಾ ರಹಾನ್ ಟಿವಿ ಕಾರ್ಯಕ್ರಮಗಳನ್ನು ಮಾಡುತ್ತಿದ್ದರು. ಹೀಗಾಗಿ ಅವರಿಗೆ ಅನೇಕ ಪ್ರಭಾವಿಗಳ ಪರಿಚಯವಿರುತ್ತೆ ಎಂದು ವ್ಯಕ್ತಿಯೊಬ್ಬ ಇವರನ್ನು ನಂಬಿದ್ದ. ಈ ನಂಬಿಕೆಯನ್ನೇ ಅದಾಯ ಮಾಡಿಕೊಳ್ಳಲು ಹೋಗಿ ಸಪ್ನಾ ರಹಾನ್ ಮತ್ತು ಅವರ ಪತಿ ಪುನೀತ್ ಇಂತಹ ವಂಚನೆ ಮಾಡಿದ್ದಾರೆ. ವ್ಯಕ್ತಿಯನ್ನು ಐಪಿಎಸ್ ಅಧಿಕಾರಿಯಾಗಿ ನೇಮಕ ಮಾಡಿ ಜಲಂಧರ್‌ನಲ್ಲಿ ಪೋಸ್ಟಿಂಗ್ ಮಾಡಿಸುವುದಾಗಿ ಭರವಸೆ ನೀಡಿ ಬರೊಬ್ಬರಿ 3.5 ಕೋಟಿ ರೂ. ವಂಚನೆ ಮಾಡಿದ್ದಾರೆ. ಈ ಕುರಿತು ಪಂಜಾಬ್‌ನ ಜಲಂಧರ್‌ನಲ್ಲಿ ದಂಪತಿಯ ವಿರುದ್ಧ ವಂಚನೆ ಪ್ರಕರಣ ದಾಖಲಾಗಿತ್ತು.

ಪಂಜಾಬ್ ವಂಚನೆ-ವಿರೋಧಿ ಘಟಕವು (Punjab Police anti-fraud unit) ಮುಂಬೈ ಪೊಲೀಸರನ್ನು ಸಂಪರ್ಕಿಸಿ ತನಿಖೆಗೆ ಸಹಾಯ ಮಾಡಲು ಕೇಳಿದೆ. ನಂತರ ಒಶಿವಾರಾ ಪ್ರದೇಶದ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿ ದಂಪತಿಯನ್ನು ಬಂಧಿಸಿದ್ದಾರೆ. ಇದಾದ ನಂತರ ಪಂಜಾಬ್ ಪೊಲೀಸರು ತಮ್ಮ ಆರೋಪಿಗಳನ್ನು ರಿಮಾಂಡ್ ಪಡೆದು ಜಲಂಧರ್‌ಗೆ ಕರೆದೊಯ್ದಿದ್ದಾರೆ ಎಂದು ಇನ್ಸ್‌ಪೆಕ್ಟರ್ ವಿನಯ್ ಘೋರ್ಪುಡೆ ತಿಳಿಸಿದ್ದಾರೆ.

ಕೆಲವು ಟಿವಿ ಕಾರ್ಯಕ್ರಮಗಳಲ್ಲಿ ನಟಿಸಿರುವ ಸಪ್ನಾ ಮತ್ತು ಆಕೆಯ ಪತಿಯನ್ನು ಜಲಾಂಧರ್ ಪೊಲೀಸರು ಮೋಸ, ನಂಬಿಕೆ ಉಲ್ಲಂಘನೆ ಮತ್ತು ಕ್ರಿಮಿನಲ್ ಪಿತೂರಿ ಪ್ರಕರಣ ದಾಖಲಿಸಿದ್ದಾರೆ. ತನಿಖೆಯ ಸಮಯದಲ್ಲಿ, ದಂಪತಿ ಕೇಂದ್ರ ರಕ್ಷಣಾ ಸಚಿವಾಲಯ ಮತ್ತು ರಾಷ್ಟ್ರೀಯ ಪೊಲೀಸ್ ಅಕಾಡೆಮಿಯ ನಕಲಿ ನೇಮಕಾತಿ ಪತ್ರಗಳನ್ನು ವಂಚನೆಗೆ ಒಳಗಾದ ವ್ಯಕ್ತಿಗೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಗಂಡ-ಹೆಂಡತಿ ವಿರುದ್ಧ ಜಲಂಧರ್ ಮ್ಯಾಜಿಸ್ಟ್ರೇಟ್ ಜಾಮೀನು ರಹಿತ ವಾರಂಟ್ ಹೊರಡಿಸಿದರೂ ಪೊಲೀಸರು ಅವರನ್ನು ಬಂಧಿಸುವಲ್ಲಿ ವಿಫಲರಾಗಿದ್ದಾರೆ.

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ