ಟಿವಿ9 ಫೆಸ್ಟಿವಲ್ ಆಫ್​ ಇಂಡಿಯಾ, ಕೊನೆಯ ದಿನದ ಉತ್ಸವ, ಏನೆಲ್ಲಾ ವಿಶೇಷತೆಗಳಿವೆ ಇಲ್ಲಿದೆ ಮಾಹಿತಿ

ದಸರಾ ಅಂಗವಾಗಿ ಟಿವಿ9 ನೆಟ್​ವರ್ಕ್​ ದೆಹಲಿಯ ಮೇಜರ್ ಧ್ಯಾನ್​ಚಂದ್ ಸ್ಟೇಡಿಯಂನಲ್ಲಿ ಆಯೋಜಿಸಿರುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ ಉತ್ಸವಕ್ಕೆ ಇಂದು ತೆರೆ ಬೀಳಲಿದೆ. ಇಂದು ಏನೆಲ್ಲಾ ಕಾರ್ಯಕ್ರಮಗಳು ಜರುಗಲಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಟಿವಿ9 ಫೆಸ್ಟಿವಲ್ ಆಫ್​ ಇಂಡಿಯಾ, ಕೊನೆಯ ದಿನದ ಉತ್ಸವ, ಏನೆಲ್ಲಾ ವಿಶೇಷತೆಗಳಿವೆ ಇಲ್ಲಿದೆ ಮಾಹಿತಿ
ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾ
Image Credit source: Tv9 Hindi

Updated on: Oct 13, 2024 | 12:43 PM

ದಸರಾ ಅಂಗವಾಗಿ ಟಿವಿ9 ನೆಟ್​ವರ್ಕ್​ ದೆಹಲಿಯ ಮೇಜರ್ ಧ್ಯಾನ್​ಚಂದ್ ಸ್ಟೇಡಿಯಂನಲ್ಲಿ ಆಯೋಜಿಸಿರುವ ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾಗೆ ಇಂದು ತೆರೆ ಬೀಳಲಿದೆ. ಇಂದು ಏನೆಲ್ಲಾ ಕಾರ್ಯಕ್ರಮಗಳು ಜರುಗಲಿವೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ.

ಕಳೆದ ನಾಲ್ಕು ದಿನಗಳಿಂದ ಈ ಕಾರ್ಯಕ್ರಮದಲ್ಲಿ ಸಾಕಷ್ಟು ಮಂದಿ ಪಾಲ್ಗೊಂಡಿದ್ದರು. ಹಬ್ಬದ ಕೊನೆಯ ದಿನವಾದ ಇಂದು ಬೆಳಗ್ಗೆ 9 ಗಂಟೆಗೆ ಸಾಂಪ್ರದಾಯಿಕ ಪೂಜೆಯೊಂದಿಗೆ ಪ್ರಾರಂಭವಾಯಿತು. ಐದನೇ ದಿನವಾದ ಇಂದು ಸಿಂಧೂರ್​ ಖೇಲಾ ಕಾರ್ಯಕ್ರಮ ನಡೆಯಲಿದೆ ಎಂದು ಹಬ್ಬದ ಅಂತಿಮ ಘಟ್ಟವನ್ನು ಸೂಚಿಸುತ್ತದೆ. ಇದರಲ್ಲಿ ದೇವಿಯ ಆಶೀರ್ವಾದ ಪಡೆದು ಒಬ್ಬರಿಗೊಬ್ಬರು ಕುಂಕುಮವನ್ನು ಇಟ್ಟುಕೊಳ್ಳುತ್ತಾರೆ.

ಉತ್ತರ ಪ್ರದೇಶದ ಉಪ ಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಕೂಡ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತೆ ದುರ್ಗೆಯ ಆಶೀರ್ವಾದ ಪಡೆದರು. ಶನಿವಾರ ಗರ್ಬಾ ನೃತ್ಯ ಪ್ರಮುಖ ಆಕರ್ಷಣೆಯಾಗಿತ್ತು, ಬಾಲಿವುಡ್ ಹಾಡುಗಳಿಗೆ ನೃತ್ಯ ಮಾಡಲಾಯಿತು.

ಮತ್ತಷ್ಟು ಓದಿ: ಇಂದು ಟಿವಿ9 ಫೆಸ್ಟಿವಲ್ ಆಫ್ ಇಂಡಿಯಾದ ನಾಲ್ಕನೇ ದಿನ: ಇಂದಿನ ಕಾರ್ಯಕ್ರಮಗಳ ವಿವರ ಇಲ್ಲಿದೆ

ಕೇಂದ್ರ ಸಚಿವೆ ಅನುಪ್ರಿಯಾ ಪಟೇಲ್ ಅವರ ಪತಿ ಆಶಿಶ್ ಪಟೇಲ್ ಅವರೊಂದಿಗೆ ಟಿವಿ9 ಎರಡನೇ ವಾರ್ಷಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಮತ್ತು ಕಾಂಗ್ರೆಸ್ ನಾಯಕ ಪವನ್ ಖೇಡಾ ಸೇರಿದಂತೆ ಇತರ ಪ್ರಮುಖ ವ್ಯಕ್ತಿಗಳು ಉತ್ಸವದಲ್ಲಿ ಭಾಗವಹಿಸಿದ್ದರು. ಅತಿಥಿಗಳೊಂದಿಗೆ ಟಿವಿ9 ನೆಟ್‌ವರ್ಕ್ ಎಂಡಿ ಮತ್ತು ಸಿಇಒ ಬರುನ್ ದಾಸ್ ಕೂಡ ಉಪಸ್ಥಿತರಿದ್ದರು.

ಬಿಜೆಪಿ ನಾಯಕ ಹಾಗೂ ದೆಹಲಿಯ ಲೋಕಸಭಾ ಸಂಸದ ಮನೋಜ್ ತಿವಾರಿ ಕೂಡ ಪಾಲ್ಗೊಂಡಿದ್ದರು. ಈ ವೇಳೆ ಸಂಸದ ಮನೋಜ್ ಅವರು ದುರ್ಗಾ ಮಾತೆಯ ಆಶೀರ್ವಾದ ಪಡೆದರು. ಅದ್ಭುತವಾದ ಸ್ಮರಣೀಯ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ಅವರು ಟಿವಿ9 ನೆಟ್‌ವರ್ಕ್‌ಗೆ ಧನ್ಯವಾದ ಅರ್ಪಿಸಿದರು.

ನವರಾತ್ರಿ ಮತ್ತು ದಸರಾವನ್ನು ಆಚರಿಸಲು ಭಾರತೀಯ ಮತ್ತು ವಿದೇಶಿ ತಿನಿಸುಗಳ 250 ಕ್ಕೂ ಹೆಚ್ಚು ಮಳಿಗೆಗಳನ್ನು ಸ್ಥಾಪಿಸಲಾಗಿದೆ. ಇಲ್ಲಿ ಆಯೋಜಿಸಿದ್ದ ಮೇಳದಲ್ಲಿ ಜನರು ಗರ್ಬಾ ನೃತ್ಯದ ಜತೆಗೆ ರುಚಿಕರ ತಿನಿಸುಗಳನ್ನು ಸವಿಯುತ್ತಿರುವುದು ಕಂಡು ಬಂತು.

ಬಿಹಾರದ ಪ್ರಸಿದ್ಧ ಲಿಟ್ಟಿ-ಚೋಖಾ, ರಾಜಸ್ಥಾನಿ ಪಾಕಪದ್ಧತಿಯಿಂದ ಪಂಜಾಬಿ ತಿನಿಸು, ಲಕ್ನೋವಿ ಕಬಾಬ್ ಮತ್ತು ದೆಹಲಿಯ ಪ್ರಸಿದ್ಧ ಚಾಟ್, ಆಹಾರ ಸಂಬಂಧಿತ ಸ್ಟಾಲ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ. ವೇದಿಕೆಯಲ್ಲಿ ಹಲವು ಜನಪದ ಕಲಾವಿದರು ಬಂಗಾಳ ಮಾತ್ರವಲ್ಲದೆ ಪಂಜಾಬ್ ಮತ್ತು ಗುಜರಾತ್ ನ ಸಾಂಪ್ರದಾಯಿಕ ನೃತ್ಯಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

 

 

 

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us