AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Evening Digest | ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ, ಬೆಳವಣಿಗೆಗಳಿವು

Kannada News Digest: ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ ಆಯ್ದ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ.

Evening Digest | ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ, ಬೆಳವಣಿಗೆಗಳಿವು
ಶುಭಮನ್ ಗಿಲ್​, ರೋಹಿತ್​ ಶರ್ಮಾ
ಸಾಧು ಶ್ರೀನಾಥ್​
| Edited By: |

Updated on:Feb 24, 2021 | 7:27 PM

Share

ಇಂದು ನೀವು ಮಿಸ್ ಮಾಡಿಕೊಳ್ಳದೇ ಗಮನಿಸಬೇಕಾದ 9 ಪ್ರಮುಖ ಸುದ್ದಿ / ಪ್ರಚಲಿತ ವಿದ್ಯಮಾನಗಳ ಮಾಹಿತಿ ಇಲ್ಲಿದೆ. ದೇಶ-ವಿದೇಶಗಳಿಂದ ನಾಲ್ಕು ದಿಕ್ಕಿನಿಂದ ಸಾವಿರಾರು ಸುದ್ದಿ ಹರಿದಾಡುತ್ತಿರುತ್ತವೆ. ಕ್ಷಣಾರ್ಧದಲ್ಲಿ ಬಹುತೇಕ ಸುದ್ದಿಗಳನ್ನು ನಿಮಗೆ ತಲುಪಿಸುವ ಕಾರ್ಯ ಟಿವಿ9 ವೆಬ್​ಸೈಟ್​​ ಮಾಡುತ್ತಿದೆ. ದಿನವಿಡೀ ಹರಿದುಬರುವ ಸುದ್ದಿ ಪ್ರವಾಹದಲ್ಲಿ ಅತಿಮುಖ್ಯ ಸುದ್ದಿ / ಬೆಳವಣಿಗೆ ನಿಮ್ಮ ಕಣ್ತಪ್ಪಬಾರದು. ಹೀಗಾಗಿಯೇ ಆಯ್ದ 9 ಪ್ರಮುಖ ಸುದ್ದಿಗಳನ್ನು ನಿಮ್ಮ ಮುಂದಿಡುವ ಪ್ರಯತ್ನ ಟಿವಿ9 ಡಿಜಿಟಲ್ ತಂಡ ಮಾಡಿದೆ:

1.ಭಾರತ-ಇಂಗ್ಲೆಂಡ್ ಟೆಸ್ಟ್ ಕ್ರಿಕೆಟ್: 112 ರನ್​ಗಳಿಗೆ ಇಂಗ್ಲೆಂಡ್​ ಸರ್ವಪತನ ಟೀಂ ಇಂಡಿಯಾ ಪರ ಆರಂಭದಿಂದಲೂ ಆರ್ಭಟಿಸಿದ ಅಕ್ಷರ್​ 6, ಅಶ್ವಿನ್​ 3 ಹಾಗೂ ಇಶಾಂತ್ 1 ವಿಕೆಟ್​ ಪಡೆದು ಮಿಂಚಿದರು Link: ಅಕ್ಷರ್​-ಅಶ್ವಿನ್​​ ಅಬ್ಬರ, 112 ರನ್​ಗಳಿಗೆ ಇಂಗ್ಲೆಂಡ್​ ಆಲ್​ಔಟ್

2. ದೊಡ್ಡ ನಟನನ್ನ ಸಣ್ಣ ಹೀರೋಯಿನ್ ಮನೆಯಲ್ಲಿ ನಿಲ್ಲಿಸಿದ್ರು..  ನಟ ದರ್ಶನ್​​ನನ್ನು ನಾನು ಬಹಳ ಪ್ರೀತಿಸುತ್ತೇನೆ. ಅವತ್ತು ಪೋಲಿಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರಲ್ಲ, ಆಗ ಯಾರು ಬಂದಿದ್ರು ಅವನ ಸಪೋರ್ಟ್‌ಗೆ? ಆಗ ಬಂದಿದ್ದು ಜಗ್ಗೇಶ್ ಅಲ್ವಾ ನೀವೇ ಹೇಳಿ. Link:  ಆಗ ಯಾರು ಬಂದಿದ್ರು ಅವನ ಸಪೋರ್ಟ್‌ಗೆ: ಜಗ್ಗೇಶ್ ಪ್ರಶ್ನೆ

3. ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್ ಇದೇ ಮೊದಲ ಬಾರಿಗೆ ದರ್ಶನ್​ ಮೌನ​ ಮುರಿದಿದ್ದಾರೆ. ಟಿವಿ9 ಕನ್ನಡಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ಅಭಿಮಾನಿಗಳ ಪರವಾಗಿ ದರ್ಶನ್​ ಕ್ಷಮೆ ಯಾಚಿಸಿದ್ದಾರೆ. Link: ಜಗ್ಗೇಶ್​ ವಿವಾದಕ್ಕೆ ತೆರೆ: ಅಭಿಮಾನಿಗಳ ಪರವಾಗಿ ಕ್ಷಮೆ ಕೇಳಿದ ನಟ ದರ್ಶನ್​

4. ಪರೀಕ್ಷೆ ಹತ್ತಿರವಿರುವಾಗ ಮಕ್ಕಳ ದೈಹಿಕ ಕ್ಷಮತೆ, ಏಕಾಗ್ರತೆ ಕಾಪಾಡಲು ಈ ಆಹಾರಗಳು ಸಹಕಾರಿ ಸಾಧಾರಣವಾಗಿ ಹಸಿರು ಸೊಪ್ಪಿನ ತರಕಾರಿಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿಣಾಂಶ ಒಳಗೊಂಡಿರುತ್ತವೆ. ಇದು ರಕ್ತದಲ್ಲಿನ ಹಿಮೋಗ್ಲೋಬಿನ್​ ಪ್ರಮಾಣ ವೃದ್ಧಿಸುವ ಜೊತೆಗೆ ಮೆದುಳು ಸಕ್ರಿಯವಾಗಿರಲು ಸಹಕಾರಿಯಾಗುತ್ತದೆ. Link: ಮಕ್ಕಳ ಏಕಾಗ್ರತೆ ಹೆಚ್ಚಿಸಲು ಈ ಜೀವನಶೈಲಿ ಸಹಕಾರಿ

5. ಮೂರು ಮದುವೆಯಾಚೆಗೂ ಹಲವರೊಂದಿಗೆ ಅಫೇರ್ ಇತ್ತು ಫುಟ್​ಬಾಲ್ ವಿಶ್ವಕಪ್​ ಗೆದ್ದ ಈ ಆಟಗಾರನನ್ನು ಈಗಲೂ ಅದೆಷ್ಟೋ ಯುವಕರು ತಮ್ಮ ರೋಲ್ ಮಾಡೆಲ್​ ಎಂದುಕೊಳ್ಳುತ್ತಿದ್ದಾರೆ. ಫುಟ್ಬಾಲ್​ ಗ್ರೌಂಡ್​ನಲ್ಲಿ ಅದ್ಭುತ ಸಾಧನೆ ತೋರಿರುವ ಪೀಲೆಯ ವೈಯಕ್ತಿಕ ಜೀವನ ಈಗ ಸುದ್ದಿಯಲ್ಲಿದೆ. Link: ಫುಟ್ಬಾಲ್​ ದಂತಕತೆ ಪೀಲೆ ಬಿಚ್ಚಿಟ್ಟ ಸತ್ಯ

6.ಮೋದಿ ದಂಗಾಬಾಜ್​ ಎಂದ ಮಮತಾ ಬ್ಯಾನರ್ಜಿ ಬಂಗಾಳವನ್ನು ಬಂಗಾಳವೇ ಆಳುತ್ತದೆ. ಗುಜರಾತ್ ಬಂಗಾಳವನ್ನು ಆಳುವುದಿಲ್ಲ ಎನ್ನುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾಗೆ ಮಮತಾ ಟಾಂಗ್ ನೀಡಿದರು. Link: ಪಶ್ಚಿಮ ಬಂಗಾಳ ಚುನಾವಣೆ

7.ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಶಿಫಾರಸು ಪುದುಚೇರಿಯಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ಲೆಫ್ಟಿನೆಂಟ್ ಗವರ್ನರ್ ತಮಿಳಿಸೈ ಸೌಂದರರಾಜನ್ ಶಿಫಾರಸು ಮಾಡಿದ ಬೆನ್ನಲ್ಲೇ ಕೇಂದ್ರ ಸರ್ಕಾರ ಈ ತೀರ್ಮಾನ ಕೈಗೊಂಡಿದೆ. Link: ಪುದುಚೇರಿ ರಾಜಕಾರಣಕ್ಕೆ ಮತ್ತೊಂದು ತಿರುವು

8.ಪಿಂಕ್-ಬಾಲ್ ಪಂದ್ಯಗಳೇ ಟೆಸ್ಟ್​ ಕ್ರಿಕೆಟ್​ನ ಭವಿಷ್ಯ: ಸೌರವ್ ಗಂಗೂಲಿ ಅನಾರೋಗ್ಯದ ನಿಮಿತ್ತ ಪಂದ್ಯ ವೀಕ್ಷಿಸಲು ಅಹಮದಾಬಾದಿಗೆ ಹೋಗಲಾಗದ ಸ್ಥಿತಿಗೆ ನಿರಾಶೆ ವ್ಯಕ್ತಪಡಿಸಿದ ಗಂಗೂಲಿ ಭಾರತ ತಂಡದ ಆಟ, ಟೆಸ್ಟ್​ ಕ್ರಿಕೆಟ್​ನ ಭವಿಷ್ಯದ ಬಗ್ಗೆ ಭಾವಲಹರಿ ಹರಿಸಿದ್ದಾರೆ. Link: ಗೆಲ್ಲಲಿದೆ ಭಾರತ: ಗಂಗೂಲಿ ನುಡಿದ ಭವಿಷ್ಯ

9.ಜಯಲಲಿತಾ ಅಂದ್ರೆ ನನಗೆ ತುಂಬಾ ಇಷ್ಟ ನಾನು ಬಾಲ ನಟಿಯಾಗಿದ್ದಾಗ ಜಯಲಲಿತಾ ಅವರನ್ನು ತುಂಬಾ ಇಷ್ಟ ಪಡುತ್ತಿದ್ದೆ. ಅವರ ಅಭಿಮಾನಿಯಾಗಿದ್ದೆ, ಅವರ ಜತೆಗೆ ತುಂಬಾ ಒಳ್ಳೆಯ ನೆನಪುಗಳಿವೆ ಎಂದಿದ್ದರು ಶ್ರೀದೇವಿ Link: ಮೋಹಕತಾರೆಯ ಮನದ ಮಾತು

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ  www.tv9kannada.com  ನೋಡುತ್ತಿರಿ.

Published On - 7:20 pm, Wed, 24 February 21

ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಇಂದು ಈ ರಾಶಿಯವರ ಪ್ರೇಮಿಯಿಂದ ಮನ್ನಣೆ!
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಆಗ ವೀರಪ್ಪನ್‌ ಕೇಸ್‌ನಲ್ಲಿ ಗಿಫ್ಟ್‌: ಹೆಚ್​ಡಿ ಕುಮಾರಸ್ವಾಮಿ ಹೊಸ ಬಾಂಬ್‌
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ಬಾಂಗ್ಲಾ ಜೊತೆಗೆ ಪಾಕಿಸ್ತಾನ ಕೂಡ ಟಿ20 ವಿಶ್ವಕಪ್​ನಿಂದ ಔಟ್?
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ತಾನು ಕಲಿತ ಶಾಲೆಗೆ ಹೋಗಿ ವಿದ್ಯಾರ್ಥಿಗಳೊಟ್ಟಿಗೆ ಬೆರೆತ ಗಿಲ್ಲಿ: ವಿಡಿಯೋ
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಫುಲ್ ಟ್ರಾಫಿಕ್: ತಡೆಯಲಾಗದೇ ರಸ್ತೆಯಲ್ಲಿ ಮೂತ್ರ ವಿಸರ್ಜನೆ!
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ನಿಯಂತ್ರಿಸಲು ಪೊಲೀಸರ ಪ್ಲ್ಯಾನ್: ಏನದು?
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಮೂಲಕ ಧರ್ಮ ಪ್ರಚಾರದ ವಾಹನವಾದ ಪಂಚಾಯ್ತಿ ಸ್ವಚ್ಛತಾ ಗಾಡಿ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಲಕ್ಕುಂಡಿ ಸಂಪತ್ತು ಕಾಯ್ತಾ ಇದೆಯಾ ಘಟಸರ್ಪ? ಬೃಹತ್ ಘಟಸರ್ಪ ಮೂರ್ತಿ ಪತ್ತೆ!
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಸಿದ್ದರಾಮಯ್ಯ ಆಗಮನಕ್ಕೂ ಮುನ್ನ ಬೃಹತ್ ಕಟೌಟ್​ಗಳು ಬಿದ್ದು ನಾಲ್ವರಿಗೆ ಗಾಯ
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್
ಮಗನ ‘ಕಲ್ಟ್’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ಜಮೀರ್ ಅಹ್ಮದ್