AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

TV9 Kannada News Live: ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ, ಕರ್ನಾಟಕ ಸಂಪುಟ ವಿಸ್ತರಣೆ

Karnataka News Today Live Updates: ಸಾರ್ವಜನಿಕ ಪರೀಕ್ಷೆಗಳಲ್ಲಿ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ 'ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026' ಅನ್ನು ಲೋಕಸಭೆಯಲ್ಲಿ ಮಂಡಿಸುತ್ತಿದೆ. ಸಿಬ್ಬಂದಿ ಮತ್ತು ತರಬೇತಿ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಮಂಡಿಸಲಿರುವ ಈ ಕಾನೂನು ಪರೀಕ್ಷೆಗಳಲ್ಲಿ ಪಾರದರ್ಶಕತೆ ಮತ್ತು ನಂಬಿಕೆಯನ್ನು ಮರುಸ್ಥಾಪಿಸುವ ಗುರಿ ಹೊಂದಿದೆ. ಇದರಿಂದ ದೇಶಾದ್ಯಂತ ಪರೀಕ್ಷೆಗಳ ವಿಶ್ವಾಸಾರ್ಹತೆ ಹೆಚ್ಚಲಿದೆ. ಇದರ ಜತೆಗೆ ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. 'ಕರಾವಳಿ' (Karavali) ಸಿನಿಮಾ ಪ್ರೇಕ್ಷಕರಿಂದ ಸಿಗುತ್ತಿರುವ ಧನಾತ್ಮಕ ವಿಮರ್ಶೆ. ಹೀಗೆ ಇಂದಿನ ಪ್ರಮುಖ ಸುದ್ದಿಗಳ ಮಾಹಿತಿ ಇಲ್ಲಿದೆ ನೋಡಿ

TV9 Kannada News Live: ಲೋಕಸಭೆಯಲ್ಲಿ 'ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026' ಮಂಡನೆ, ಕರ್ನಾಟಕ ಸಂಪುಟ ವಿಸ್ತರಣೆ
ಅಕ್ಷಯ್​ ಪಲ್ಲಮಜಲು​​
|

Updated on:Jul 27, 2026 | 12:31 PM

Share

LIVE NEWS & UPDATES

  • 27 Jul 2026 12:31 PM (IST)

    “ಕೇಂದ್ರ ನಾಯಕರನ್ನು ಮೆಚ್ಚಿಸಲು ಸಿ.ಟಿ. ರವಿ ಹೀಗೆ ಮಾತಾಡ್ತಾರೆ”: ಶಾಸಕ ಹೆಚ್.ಸಿ. ಬಾಲಕೃಷ್ಣ

    ಮುಲ್ಲಾಗಳ ಕುರಿತು ಬಿಜೆಪಿ ಎಂಎಲ್‌ಸಿ ಸಿ.ಟಿ. ರವಿ ಅವರು ನೀಡಿದ್ದಾರೆ ಎನ್ನಲಾದ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಶಾಸಕ ಹೆಚ್.ಸಿ. ಬಾಲಕೃಷ್ಣ ಅವರು ಬೆಂಗಳೂರಿನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದು, ಸಿ.ಟಿ. ರವಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿ.ಟಿ. ರವಿ ಅವರ ಹೇಳಿಕೆಯನ್ನು ಖಂಡಿಸಿದ ಬಾಲಕೃಷ್ಣ ಅವರು, ಈ ರೀತಿಯ ಮಾತುಗಳ ಅಗತ್ಯವಿರಲಿಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

  • 27 Jul 2026 12:29 PM (IST)

    ಕೆಪಿಎಸ್‌ಸಿ ಅಕ್ರಮ: ಸುಮಾ ಸಾಹುಕಾರ್‌ಗೆ ಹೈಕೋರ್ಟ್ ಭಾರಿ ತರಾಟೆ

    ಕರ್ನಾಟಕ ಲೋಕಸೇವಾ ಆಯೋಗದ (KPSC) ನೇಮಕಾತಿಯಲ್ಲಿ ಸುಳ್ಳು ಆದಾಯ ಪ್ರಮಾಣಪತ್ರ ಸಲ್ಲಿಸಿದ ಆರೋಪ ಎದುರಿಸುತ್ತಿರುವ ಸುಮಾ ಎಸ್. ಸಾಹುಕಾರ್ ಅವರಿಗೆ ಕರ್ನಾಟಕ ಹೈಕೋರ್ಟ್ ತೀವ್ರ ತರಾಟೆ ತೆಗೆದುಕೊಂಡಿದೆ. ತಮ್ಮ ವಿರುದ್ಧದ ಪ್ರಕರಣವನ್ನು ರದ್ದುಗೊಳಿಸುವಂತೆ ಕೋರಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ಹೈಕೋರ್ಟ್ ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಅರ್ಜಿ ಹಿಂಪಡೆಯಲಾಗಿದೆ.

  • 27 Jul 2026 12:27 PM (IST)

    ಕೆಪಿಎಸ್‌ಸಿ ಪಶು ವೈದ್ಯಾಧಿಕಾರಿ ನೇಮಕಾತಿ ಅಕ್ರಮ: ಎಬಿವಿಪಿ ಬೃಹತ್ ಪ್ರತಿಭಟನೆ

    ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶು ವೈದ್ಯಾಧಿಕಾರಿ ನೇಮಕಾತಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮವನ್ನು ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ವಿದ್ಯಾರ್ಥಿಗಳು ತುಮಕೂರಿನಲ್ಲಿ ಸೋಮವಾರ ಭಾರಿ ಪ್ರತಿಭಟನೆ ನಡೆಸಿದರು. ನಗರದ ಪ್ರಮುಖ ಟೌನ್ ಹಾಲ್ ವೃತ್ತದಲ್ಲಿ ಜಮಾಯಿಸಿದ ನೂರಾರು ವಿದ್ಯಾರ್ಥಿಗಳು ಮಾನವ ಸರಪಳಿ ನಿರ್ಮಿಸಿ, ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

  • 27 Jul 2026 12:24 PM (IST)

    ಪ್ರತಿಭಟನಾನಿರತ ವಿದ್ಯಾರ್ಥಿಗಳ ಬಂಧನಕ್ಕೆ CJP ತೀವ್ರ ಆಕ್ರೋಶ

    ಅಸ್ಸಾಂ, ಪಶ್ಚಿಮ ಬಂಗಾಳ ಹಾಗೂ ಬಿಹಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮ ಹಾಗೂ ಬಂಧನವನ್ನು ಖಂಡಿಸಿ ಕಾಕರೂಚ್ ಜನತಾ ಪಾರ್ಟಿ (CJP) ತೀವ್ರ ಕಳವಳ ವ್ಯಕ್ತಪಡಿಸಿದೆ. ಯಾವುದೇ ರೀತಿಯ ಕಾನೂನು ಅಥವಾ ಶಿಸ್ತುಕ್ರಮ ಕೈಗೊಳ್ಳುವುದಿಲ್ಲ ಎಂಬ ಕೇಂದ್ರ ಸರ್ಕಾರದ ಭರವಸೆಗೆ ವಿರುದ್ಧವಾಗಿ ಪೊಲೀಸರು ನಡೆದುಕೊಳ್ಳುತ್ತಿದ್ದಾರೆ ಎಂದು ಸಿಜೆಪಿ ಆಕ್ರೋಶ ಹೊರಹಾಕಿದೆ.

  • 27 Jul 2026 12:21 PM (IST)

    ಕರ್ನಾಟಕ ಸಂಪುಟ ವಿಸ್ತರಣೆ: ಹೈಕಮಾಂಡ್ ಭೇಟಿಗೆ ದೆಹಲಿಗೆ ತೆರಳಿದ ಸಿಎಂ ಡಿ.ಕೆ. ಶಿವಕುಮಾರ್

    ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ.

  • 27 Jul 2026 12:19 PM (IST)

    ಲೋಕಸಭೆಯಲ್ಲಿ ‘ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026’ ಮಂಡನೆ

    ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಕಾನೂನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ.

Breaking News Today Live Updates in Kannada: ದೇಶದಲ್ಲಿ ನಿರಂತರವಾಗಿ ವರದಿಯಾಗುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ (Question Paper Leak) ಹಾಗೂ ಪರೀಕ್ಷಾ ಅಕ್ರಮಗಳಿಗೆ ಸಂಪೂರ್ಣ ಕಡಿವಾಣ ಹಾಕಲು ಕೇಂದ್ರ ಸರ್ಕಾರ ಅತ್ಯಂತ ಮಹತ್ವದ ಹೆಜ್ಜೆ ಇಟ್ಟಿದೆ. ಸಾರ್ವಜನಿಕ ಪರೀಕ್ಷೆಗಳಲ್ಲಿ ಪಾರದರ್ಶಕತೆ ಹಾಗೂ ನಂಬಿಕೆಯನ್ನು ಮರುಸ್ಥಾಪಿಸುವ ಉದ್ದೇಶದಿಂದ ‘ಸಾರ್ವಜನಿಕ ಪರೀಕ್ಷೆಗಳ (ಅಕ್ರಮ ತಡೆ) ತಿದ್ದುಪಡಿ ಮಸೂದೆ 2026’ ಅನ್ನು ಕೇಂದ್ರ ಸಿಬ್ಬಂದಿ ಮತ್ತು ತರಬೇತಿ ಇಲಾಖೆಯ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಇಂದು (ಜುಲೈ 27, ಸೋಮವಾರ) ಲೋಕಸಭೆಯಲ್ಲಿ ಮಂಡಿಸುತ್ತಿದ್ದಾರೆ. ಈ ಕುರಿತು ಶೀಘ್ರವೇ ಕಾನೂನು ಜಾರಿಗೆ ತರಲು ಸರ್ಕಾರ ತೀರ್ಮಾನಿಸಿದೆ. ಕರ್ನಾಟಕ ರಾಜ್ಯ ರಾಜಕೀಯದಲ್ಲಿ ಸಂಪುಟ ವಿಸ್ತರಣೆಯ ಕಾವು ಏರಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಸಭೆ ನಡೆಯಲಿದೆ. ಸ್ಯಾಂಡಲ್‌ವುಡ್‌ನ ಬಹುನಿರೀಕ್ಷಿತ ‘ಕರಾವಳಿ’ (Karavali) ಸಿನಿಮಾ ಪ್ರೇಕ್ಷಕರಿಂದ ಸಿಗುತ್ತಿರುವ ಧನಾತ್ಮಕ ವಿಮರ್ಶೆಗಳೊಂದಿಗೆ ಬಾಕ್ಸ್ ಆಫೀಸ್‌ನಲ್ಲಿ ಧೂಳೆಬ್ಬಿಸುತ್ತಿದೆ. ಸ್ಕಾಟ್‌ಲ್ಯಾಂಡ್‌ನ ಗ್ಲ್ಯಾಸ್ಗೋದಲ್ಲಿ ನಡೆಯುತ್ತಿರುವ 2026ರ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕ್ರೀಡಾಪಟುಗಳು ಅದ್ಭುತ ಪ್ರದರ್ಶನ ಮುಂದುವರಿಸಿದ್ದಾರೆ.

Published On - Jul 27,2026 12:18 PM

Follow Us
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಲೋಕಸಭೆಯಲ್ಲಿ ಪರೀಕ್ಷಾ ಅಕ್ರಮ ತಡೆ ತಿದ್ದುಪಡಿ ಮಸೂದೆ 2026 ಮಂಡನೆ
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಡಿಕೆಶಿ ಸಚಿವ ಸಂಪುಟದಲ್ಲಿ 12ರಿಂದ 15  ಹೊಸ ಮುಖಗಳಿಗೆ ಮಣೆ?
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಬಾಯ್ಲರ್ ಟ್ಯಾಂಕ್ ಮಗುಚಿ ಮೈಸೂರು - ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿ ಬಂದ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಭವ್ಯಾ ಗೌಡಗೆ ತಂಗಿ ಎಂದು ಕರೆದು ಕಾಲೆಳೆದ ಹುಲಿ ಕಾರ್ತಿಕ್
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ನೀರು ಬಿಡುಗಡೆ
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಶಿವಗಂಗೆ ಬೆಟ್ಟದಲ್ಲಿ ಮಂಗನ ಚೇಷ್ಟೆ: ಪ್ರವಾಸಿಗರ ಮೊಬೈಲ್ ಕಸಿದು ಪುಂಡಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ