AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ

ಟಿವಿ9 ನೆಟ್​ವರ್ಕ್ ಆಯೋಜಿಸಿರುವ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT) ಶೃಂಗಸಭೆಯಲ್ಲಿ ತೆಲಂಗಾಣದ ಮುಖ್ಯಮಂತ್ರಿ ರೇವಂತ್ ರೆಡ್ಡಿ ಕೂಡ ಚರ್ಚೆಯಲ್ಲಿ ಪಾಲ್ಗೊಂಡಿದ್ದಾರೆ. ಈ ವೇಳೆ ಬಿಜೆಪಿ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ತಾರತಮ್ಯ ಮಾಡುತ್ತಿದೆ ಎಂದು ಸಿಎಂ ರೇವಂತ್ ಆರೋಪಿಸಿದ್ದಾರೆ. ಕೇಂದ್ರ ಸಚಿವ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನೋಡಿಕೊಳ್ಳುವವರಲ್ಲಿ ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ದಕ್ಷಿಣ ರಾಜ್ಯಗಳಿಂದ ಯಾರಾದರೂ ಇದ್ದಾರೆಯೇ? ಎಂದು ಅವರು ಪ್ರಶ್ನಿಸಿದ್ದಾರೆ.

ದಕ್ಷಿಣ ಭಾರತವನ್ನು ಕೇಂದ್ರ ಸರ್ಕಾರ ಕೀಳಾಗಿ ಕಾಣುತ್ತಿದೆ; ಟಿವಿ9 ಶೃಂಗಸಭೆಯಲ್ಲಿ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪ
Revanth Reddy
ಸುಷ್ಮಾ ಚಕ್ರೆ
|

Updated on: Mar 24, 2026 | 9:32 PM

Share

ನವದೆಹಲಿ, ಮಾರ್ಚ್ 24: ಟಿವಿ9 ವಾಟ್ ಇಂಡಿಯಾ ಥಿಂಕ್ಸ್ ಟುಡೇ ಶೃಂಗಸಭೆಯಲ್ಲಿ (WITT Summit 2026) ಭಾಗವಹಿಸಿದ ತೆಲಂಗಾಣದ ಸಿಎಂ ರೇವಂತ್ ರೆಡ್ಡಿ ದಕ್ಷಿಣ ಭಾರತದ ರಾಜ್ಯಗಳ ಬಗ್ಗೆ ಕೇಂದ್ರ ಸರ್ಕಾರ ತೋರಿಸುತ್ತಿರುವ ತಾರತಮ್ಯವನ್ನು ಟೀಕಿಸಿದರು. ಕೇಂದ್ರ ಸರ್ಕಾರ ದಕ್ಷಿಣ ರಾಜ್ಯಗಳನ್ನು ಕೀಳಾಗಿ ಕಾಣುತ್ತಿದೆ. ಕೇರಳ, ತೆಲಂಗಾಣ, ಆಂಧ್ರಪ್ರದೇಶ, ತಮಿಳುನಾಡು ಮತ್ತು ಕರ್ನಾಟಕದಂತಹ ರಾಜ್ಯಗಳಿಗೆ ಕೇಂದ್ರದಲ್ಲಿ ಸರಿಯಾದ ಪ್ರಾತಿನಿಧ್ಯವಿಲ್ಲ ಎಂದು ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆರೋಪಿಸಿದ್ದಾರೆ.

ಕ್ಷೇತ್ರಗಳ ಮರುವಿಂಗಡಣೆ ನಡೆದರೆ, ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ಈಗಿರುವಂತೆ ಸಂಖ್ಯೆಯಲ್ಲಿ ವ್ಯತ್ಯಾಸವಾಗಬೇಕು. ಅದು ಆಗದಿದ್ದರೆ ದಕ್ಷಿಣದ ರಾಜ್ಯಗಳು ತಮ್ಮ ಪ್ರಭಾವ ಕಳೆದುಕೊಳ್ಳುತ್ತವೆ. ಬಿಜೆಪಿ ಉತ್ತರ ಮತ್ತು ದಕ್ಷಿಣ ಭಾರತದ ನಡುವೆ ತಾರತಮ್ಯ ಮಾಡುತ್ತಿದೆ. ಕೇಂದ್ರ ಸಂಪುಟದಲ್ಲಿ ಪ್ರಮುಖ ಖಾತೆಗಳನ್ನು ನೋಡಿಕೊಳ್ಳುವವರು ನಿರ್ಮಲಾ ಸೀತಾರಾಮನ್ ಹೊರತುಪಡಿಸಿ ದಕ್ಷಿಣದ ರಾಜ್ಯಗಳಿಂದ ಯಾರಾದರೂ ಇದ್ದಾರೆಯೇ? ಕೇಂದ್ರ ಬಯಸಿದಂತೆ ಕ್ಷೇತ್ರಗಳ ಮರುವಿಂಗಡಣೆ ನಡೆದರೆ ದಕ್ಷಿಣ ಭಾರತದ ರಾಜ್ಯಗಳು ಅತ್ಯಲ್ಪವಾಗುತ್ತವೆ ಎಂದು ರೇವಂತ್ ರೆಡ್ಡಿ ಕಳವಳ ವ್ಯಕ್ತಪಡಿಸಿದರು.

ಇದನ್ನೂ ಓದಿ: WITT Summit 2026: ಬಂಗಾಳದಲ್ಲಿ ಡಬಲ್ ಎಂಜಿನ್ ಸರ್ಕಾರ ರಚನೆ ಖಚಿತ; WITT ಶೃಂಗಸಭೆಯಲ್ಲಿ ಕೇಂದ್ರ ಸಚಿವ ಕಿಶನ್ ರೆಡ್ಡಿ ಭವಿಷ್ಯ

ಕೇಂದ್ರ ಸರ್ಕಾರ ಮತ್ತು ಪ್ರಧಾನಿ ಮೋದಿಯವರ ನೀತಿಗಳನ್ನು ಟೀಕಿಸಿದ  ಅವರು ಮೋದಿ ಅನುಸರಿಸುತ್ತಿರುವ ತ್ರಿ-ಡಿ ನೀತಿಯನ್ನು ಎದುರಿಸಲು ದಕ್ಷಿಣದ ಎಲ್ಲಾ ರಾಜ್ಯಗಳು ಒಂದಾಗುವ ಅಗತ್ಯದ ಕರೆ ನೀಡಿದರು. “ಬಿಜೆಪಿಯ ಹಿರಿಯ ನಾಯಕ ವೆಂಕಯ್ಯ ನಾಯ್ಡು ಅವರನ್ನು ಅವಮಾನಿಸಲಾಗಿದೆ. ವೆಂಕಯ್ಯ ನಾಯ್ಡು ಅವರನ್ನು ದೆಹಲಿಯಿಂದ ಏಕೆ ಸ್ಥಳಾಂತರಿಸಲಾಯಿತು? ಅವರನ್ನು ರಾಷ್ಟ್ರಪತಿಯನ್ನಾಗಿ ಏಕೆ ಮಾಡಲಿಲ್ಲ? ಮೊದಲಿನಿಂದಲೂ ಬಿಜೆಪಿಯಲ್ಲಿದ್ದ ಆ ವ್ಯಕ್ತಿಯನ್ನು ಏಕೆ ಕಡೆಗಣಿಸಲಾಯಿತು?” ದಕ್ಷಿಣದ ನಾಯಕರಿಗೆ ಕೇಂದ್ರ ಗೃಹ ಸಚಿವಾಲಯದಂತಹ ಪ್ರಮುಖ ಹುದ್ದೆಗಳನ್ನು ಏಕೆ ನೀಡಲಿಲ್ಲ ಎಂದು ಅವರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: PM Modi in WITT Summit 2026: ಯುದ್ಧದ ಸಮಯದಲ್ಲೂ ಭಾರತದ ಆರ್ಥಿಕ ಸ್ಥಿರತೆ ಕಂಡು ಜಗತ್ತು ಬೆರಗಾಗಿದೆ; ಟಿವಿ9 ಶೃಂಗಸಭೆಯಲ್ಲಿ ಪ್ರಧಾನಿ ಮೋದಿ ಬಣ್ಣನೆ

ಕೆಸಿಆರ್​ ಕುಟುಂಬದ ಬಗ್ಗೆ ಟೀಕೆ:

ರಾವಣನಿಂದಾಗಿಯೇ ರಾಮನಿಗೆ ಹೀರೋ ಎಂಬ ಹೆಸರು ಬಂದಿತು. ತೆಲಂಗಾಣದಲ್ಲಿಯೂ ಖಳನಾಯಕರಿಂದಾಗಿಯೇ ನಾನು ನಾಯಕನಾದೆ ಎಂದು ಮಾರ್ಮಿಕವಾಗಿ ರೇವಂತ್ ರೆಡ್ಡಿ ಹೇಳಿಕೆ ನೀಡಿದ್ದಾರೆ. ಇತರ ಪ್ರದೇಶಗಳಿಗೆ ಹೋಲಿಸಿದರೆ ತೆಲಂಗಾಣದ ಡಿಎನ್ಎ ಭಿನ್ನವಾಗಿದೆ. ಇಲ್ಲಿನ ಬಡವರು ಮತ್ತು ದಲಿತರು ನಿಜಾಮನ ವಿರುದ್ಧ ವೀರೋಚಿತವಾಗಿ ಹೋರಾಡಿದರು. ರಾಮನ ಖ್ಯಾತಿಗೆ ರಾವಣ ಹೇಗೆ ಕಾರಣನಾದನೋ ಹಾಗೇ ತೆಲಂಗಾಣದಲ್ಲಿ ಕೆಲವು ಖಳನಾಯಕರಿಂದಾಗಿ ಜನರು ನನ್ನನ್ನು ನಾಯಕನನ್ನಾಗಿ ಮಾಡಿದ್ದಾರೆ ಎಂದು ಅವರು ಕೆಸಿಆರ್ ಕುಟುಂಬದ ಬಗ್ಗೆ ಪರೋಕ್ಷವಾಗಿ ಟೀಕಿಸಿದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us