AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ

ರೈತನು ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ರಾಜ್​ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ದೆಹಲಿ ಗಲಾಟೆ ಬಗ್ಗೆ ಆತುರದ ಟ್ವೀಟ್​ ಮಾಡಿದ ಪತ್ರಕರ್ತ ರಾಜ್​ದೀಪ್ ಸರ್ದೇಸಾಯಿಗೆ 2 ವಾರ ಟಿವಿ ಪರದೆಯಿಂದ ದೂರ ಉಳಿಯುವಂತೆ ನಿರ್ಬಂಧ
ರಾಜ್​ದೀಪ್ ಸರ್ದೇಸಾಯಿ
TV9 Web
| Edited By: |

Updated on:Apr 06, 2022 | 8:34 PM

Share

ದೆಹಲಿ: ಹಿರಿಯ ಪತ್ರಕರ್ತ ಹಾಗೂ ಪ್ರತಿಷ್ಠಿತ ವಾರ್ತಾ ವಾಹಿನಿಯ ನ್ಯೂಸ್ ಆಂಕರ್ ರಾಜ್​ದೀಪ್ ಸರ್ದೇಸಾಯಿ ಅವರಿಗೆ ಎರಡು ವಾರಗಳ ಕಾಲ ವಾಹಿನಿಯ ತೆರೆಯ ಮೇಲೆ ಬರದಂತೆ ನಿರ್ಬಂಧ ಹಾಗೂ ಒಂದು ತಿಂಗಳ ಸಂಬಳವನ್ನು ಕಡಿತಗೊಳಿಸಿ ಇಂಡಿಯಾ ಟುಡೇ ಗ್ರೂಪ್ ಆದೇಶ ನೀಡಿದೆ.

ಗಣರಾಜ್ಯೋತ್ಸವ ದಿನದಂದು ನಡೆದ ಟ್ರ್ಯಾಕ್ಟರ್ ಚಳುವಳಿಯಲ್ಲಿ, ರೈತನು ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ರಾಜ್​ದೀಪ್ ಸರ್ದೇಸಾಯಿ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

ಈಗ ಡಿಲೀಟ್ ಆಗಿರುವ ಟ್ವೀಟ್​ನಲ್ಲಿ, ‘45 ವರ್ಷದ ನವ್​ನೀತ್ ಎಂಬ ರೈತನೊಬ್ಬ, ಐಟಿಒ ಬಳಿ ಪೊಲೀಸ್ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ’ ಎಂದು ಸರ್ದೇಸಾಯಿ ಹೇಳಿದ್ದರು. ಈ ಬಲಿದಾನ ವ್ಯರ್ಥವಾಗುವುದಿಲ್ಲ ಎಂದು ರೈತರು ಹೇಳಿದ್ದಾರೆ ಎಂದೂ ರಾಜ್​ದೀಪ್ ಸರ್ದೇಸಾಯಿ ಟ್ವಿಟ್​ನಲ್ಲಿ ಬರೆದುಕೊಂಡಿದ್ದರು. ಇಂಡಿಯಾ ಟುಡೇ ವರದಿಗಾರನೊಂದಿಗೆ ಮಾತನಾಡುವ ವೇಳೆ, ನವ್​ನೀತ್ ಸಿಂಗ್, ರೈತ ಚಳುವಳಿಯ ಗುರುತಾಗಿ ಉಳಿಯುತ್ತಾರೆ ಮತ್ತು ನವ್​ನೀತ್​ಗೆ ನ್ಯಾಯ ಸಿಗುವವರೆಗೂ ರೈತರು ತಮ್ಮ ಜಾಗ ಬಿಟ್ಟು ಕದಲುವುದಿಲ್ಲ ಎಂದು ಕೂಡ ಸರ್ದೇಸಾಯಿ ಹೇಳಿದ್ದರು.

ರಾಜ್​ದೀಪ್ ಡಿಲೀಟ್ ಮಾಡಿದ್ದ ಟ್ವೀಟ್​ ಇದು..

ಇದನ್ನೂ ಓದಿ: Explainer | ಕೆಂಪುಕೋಟೆಯಲ್ಲಿ ರೈತ ಪ್ರತಿಭಟನಾಕಾರರು ಹಾರಿಸಿದ ಕೇಸರಿ ಧ್ವಜ ಯಾವುದು?

ಟ್ವೀಟ್​ನ್ನು ನಿನ್ನೆಯೇ ಹಿಂಪಡೆದುಕೊಂಡಿದ್ದ ರಾಜ್​ದೀಪ್ ಸರ್ದೇಸಾಯಿ, ಬಳಿಕ, ಟ್ರಾಕ್ಟರ್ ಮಗುಚಿ ರೈತ ಮೃತಪಟ್ಟಿದ್ದಾನೆ ಎಂದು ಸೂಚಿಸುವ ವೀಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಚಳುವಳಿಗಾರರು ರೈತ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ಹೇಳುತ್ತಿದ್ದಾರೆ. ಆದರೆ, ಪೊಲೀಸ್ ಬ್ಯಾರಿಕೇಡ್​ಗಳನ್ನು ಉರುಳಿಸಲು ಹೊರಟಾಗ, ಟ್ರಾಕ್ಟರ್ ಮಗುಚಿ ಬಿದ್ದು ನವ್​ನೀತ್ ಮೃತಪಟ್ಟಿದ್ದಾರೆ ಎಂದು ಈ ವೀಡಿಯೋ ಹೇಳುತ್ತಿದೆ ಎಂದು ಟ್ವೀಟ್​ನಲ್ಲಿ ಬರೆದುಕೊಂಡಿದ್ದರು.

ಜೊತೆಗೆ, ರೈತರು ಆಕ್ರೋಶಭರಿತರಾಗಿ ಪ್ರತಿಭಟನೆ ನಡೆಸುತ್ತಿದ್ದರೂ ಪೊಲೀಸರು ಬಹು ತಾಳ್ಮೆ ವಹಿಸಿ ಪರಿಸ್ಥಿತಿಯನ್ನು ತಣ್ಣಗಾಗಿಸಲು ಪ್ರಯತ್ನಿಸಿದ್ದಾರೆ ಎಂದು ಹೇಳಿದ್ದರು. ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಹೊರತು, ರೈತರು ಹೇಳಿದಂತೆ ಗುಂಡಿನ ದಾಳಿ ನಡೆಸಿರುವ ಬಗ್ಗೆ ಸಾಕ್ಷಿ ಲಭ್ಯವಿಲ್ಲ ಎಂದು ಕೂಡ ತಿಳಿಸಿದ್ದರು.

ರೈತ ಮೃತಪಟ್ಟಿರುವ ಬಗ್ಗೆ ದೆಹಲಿ ಪೊಲೀಸರು ವೀಡಿಯೋ ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ನವ್​ನೀತ್ ಸಿಂಗ್ ಟ್ರಾಕ್ಟರ್ ಮಗುಚಿ ಮೃತಪಟ್ಟಿರುವುದು ಕಂಡಿದೆ. ಜೊತೆಗೆ, ಮರಣೋತ್ತರ ಪರೀಕ್ಷೆಯ ವರದಿಯಲ್ಲೂ ಆತನ ದೇಹದ ಎಡಭಾಗಕ್ಕೆ ಬಲವಾದ ಏಟಾದ ಕಾರಣ ಮೃತಪಟ್ಟಿದ್ದಾನೆ ಎಂದು ಖಚಿತವಾಗಿದೆ. ಇದೀಗ, ರಾಜ್​ದೀಪ್ ಸರ್ದೇಸಾಯಿ ಮೇಲೆ ನಿರ್ಬಂಧ ಹೇರಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರು ಚರ್ಚೆ ಆರಂಭಿಸಿದ್ದು. ಟ್ವಿಟರ್ನ ನ್ಯೂಸ್ ವಿಭಾಗದಲ್ಲಿ ಈ ವಿಚಾರವು ಟ್ರೆಂಡಿಂಗ್​ನಲ್ಲಿದೆ.

ರಾಜ್​ದೀಪ್​ ಸರ್​ದೇಸಾಯಿ.. ಸುಳ್ಳು ಸುದ್ದಿಯ ಸರದಾರ?: ಟ್ವಿಟರ್​ನಲ್ಲಿ ಬಂಧನಕ್ಕೆ ಆಗ್ರಹ

Published On - 9:44 pm, Thu, 28 January 21

Follow Us
Web contact
Web contact

TV9 Kannada

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?