AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆಗೆ ಆಶ್ರಯ ಪಡೆದಿದ್ದ ಕಟ್ಟಡವೇ ಕುಸಿದು ಬಿತ್ತು.. ಒಬ್ಬಾತನ ಅಂತ್ಯಕ್ರಿಯೆಗೆ ಹೋಗಿ 28 ಜನ ಪರಲೋಕಕ್ಕೆ!

ಒಬ್ಬನೇ ಒಬ್ಬ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಹೋದ 23 ಜನ ಜೀವಚ್ಛವವಾದ ದುರ್ಘಟನೆ ನಿನ್ನೆ ಉತ್ತರ ಪ್ರದೇಶದಲ್ಲಿ ನಡೆದು ಹೋಗಿದೆ.

ಮಳೆಗೆ ಆಶ್ರಯ ಪಡೆದಿದ್ದ ಕಟ್ಟಡವೇ ಕುಸಿದು ಬಿತ್ತು.. ಒಬ್ಬಾತನ ಅಂತ್ಯಕ್ರಿಯೆಗೆ ಹೋಗಿ 28 ಜನ ಪರಲೋಕಕ್ಕೆ!
ಸ್ಮಶಾನದಲ್ಲಿನ ಕಟ್ಟಡದ ಮೇಲ್ಚಾವಣಿ ಕುಸಿದು 23 ಜನರ ಸಾವು
ಆಯೇಷಾ ಬಾನು
|

Updated on:Jan 04, 2021 | 2:02 PM

Share

ಒಬ್ಬನೇ ಒಬ್ಬ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲು ಹೋದ 28 ಜನ ಜೀವಚ್ಛವವಾದ ದುರ್ಘಟನೆ ನಿನ್ನೆ ಉತ್ತರ ಪ್ರದೇಶದಲ್ಲಿ ನಡೆದು ಹೋಗಿದೆ. ಉತ್ತರ ಪ್ರದೇಶದ ಘಾಜಿಯಾಬಾದ್ ಜಿಲ್ಲೆಯಲ್ಲಿ ನಡೆದಿರೋ ಈ ದುರಂತ ಇಡೀ ದೇಶದ ಜನರನ್ನೇ ಬೆಚ್ಚಿ ಬೀಳಿಸಿದೆ.

ಉತ್ತರ ಪ್ರದೇಶದ ಘಾಜಿಯಾಬಾದ್​ ಜಿಲ್ಲೆಯ ಮುರಾದಾಬಾದ್​ನಲ್ಲಿ ಜೈ ರಾಂ ಎಂಬಾತ ಮೃತಪಟ್ಟಿದ್ದ. ಈತನ ಅಂತ್ಯಕ್ರಿಯೆ ನೆರವೇರಿಸಲು ಆತನ ಸಂಬಂಧಿಕರು ಮತ್ತು ಸ್ನೇಹಿತರು ಸ್ಮಶಾನಕ್ಕೆ ಹೋಗಿದ್ರು. ಈ ವೇಳೆ ಈ ದುರಂತ ನಡೆದಿದೆ.

ಒಬ್ಬಾತನ ಅಂತ್ಯಕ್ರಿಯೆಗೆ ಹೋಗಿ 28 ಜನ ಪರಲೋಕಕ್ಕೆ! ಮುರಾದಾಬಾದ್​ ನಿವಾಸಿಯಾಗಿದ್ದ ಜೈರಾಂ ಎಂಬಾತ ಭಾನುವಾರ ಮೃತಪಟ್ಟಿದ್ದ. ಈತನ ಅಂತ್ಯಕ್ರಿಯೆ ನೆರವೇರಿಸಲು ಮುರಾದಾಬಾದ್​ನಲ್ಲಿ ಸ್ಮಶಾಕ್ಕೆ ಆತನ ಸಂಬಂಧಿಕರು ಮತ್ತು ಸ್ನೇಹಿತರು ಹೋಗಿದ್ರು. ಈ ವೇಳೆ ಜೋರು ಮಳೆ ಸುರಿಯಲು ಶುರುವಾಗಿದೆ.

ಮಳೆ ಶುರುವಾಗಿದ್ದರಿಂದ ಅಂತ್ಯಕ್ರಿಯೆ ನೆರವೇರಿಸಲು ಸೇರಿದ್ದ ಜನರು ಅಲ್ಲೇ ಹತ್ತಿರದಲ್ಲಿ ಇದ್ದ ಕಟ್ಟಡದಲ್ಲಿ ಆಶ್ರಯ ಪಡೆದಿದ್ರು. ಕಟ್ಟಡ ಹಳೆಯದಾಗಿತ್ತು. ಜೊತೆಗೆ ಜೋರು ಮಳೆ ಸುರಿದ ಕಾರಣ ಕಟ್ಟಡದ ಮಣ್ಣು ಸರಿದು ಏಕಾಏಕಿ ಕಟ್ಟಡದ ಮೇಲ್ಚಾವಣಿ ಕುಸಿದು ಬಿದ್ದಿದೆ. ಈ ವೇಳೆ ಅಲ್ಲಿ ಆಶ್ರಯ ಪಡೆದಿದ್ದ 70ಕ್ಕೂ ಹೆಚ್ಚು ಜನ ಕಟ್ಟಡಗಳ ಅವಶೇಷಗಳಡಿ ಸಿಲುಕಿದ್ರು.

38 ಜನರ ರಕ್ಷಣೆ ಯಾವಾಗ ಕಟ್ಟಡ ಕುಸಿದು ಬಿತ್ತೋ.. ಅಲ್ಲಿ ನೆರೆದಿದ್ದವರು ತಕ್ಷಣವೇ ರಕ್ಷಣಾ ಕಾರ್ಯಾಚರಣೆ ನಡೆಸೋ ಜೊತೆಗೆ ಜಿಲ್ಲಾಡಳಿತಕ್ಕೆ ಸುದ್ದಿ ಮುಟ್ಟಿಸಿದ್ರು. ತಕ್ಷಣವೇ ಕಾರ್ಯಪ್ರವೃತ್ತರಾದ ಎನ್​ಡಿಆರ್​ಎಫ್ ಸಿಬ್ಬಂದಿ ಅವಶೇಷಗಳಡಿ ಸಿಲುಕಿದ್ದವರ ರಕ್ಷಣೆಗೆ ಮುಂದಾದ್ರು. ಈ ವೇಳೆ ಸುಮಾರು 38 ಜನರನ್ನ ರಕ್ಷಿಸಲಾಗಿದ್ದು.. ಅವಶೇಷಗಳಡಿ ಸಿಲುಕಿ 28 ಜನ ಮೃತಪಟ್ಟಿದ್ದಾರೆ. ಅಲ್ದೆ, 15 ಜನರಿಗೆ ಗಂಭೀರ ಗಾಯಗಳಾಗಿದ್ದು, ಘಾಜಿಯಾಬಾದ್ ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗ್ತಿದೆ.

ಘಟನೆಯ ಕುರಿತು ಟ್ವೀಟ್ ಮಾಡಿರೋ ಪ್ರಧಾನಿ ಮೋದಿ, ಇಂತಾ ದುರಂತ ಸಂಭವಿಸಬಾರದಿತ್ತು. ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಅಂತಾ ಹೇಳಿದ್ದಾರೆ. ಒಟ್ನಲ್ಲಿ ಬಾರದ ಲೋಕಕ್ಕೆ ಹೋದವನ ಕಳುಹಿಸಿಕೊಡಲು ಹೋದವರು ಸಹ ಆತನ ಹಿಂದೆಯೇ ಹೋಗಿದ್ದು ದುರಂತವೇ ಸರಿ.

ಅಂತ್ಯಕ್ರಿಯೆಗೆ ಬಂದವರೂ ಮಸಣ ಸೇರಿದರು: ಸ್ಮಶಾನದಲ್ಲಿನ ಕಟ್ಟಡದ ಮೇಲ್ಛಾವಣಿ ಕುಸಿದು 18 ಮಂದಿ ಸಾವು

Published On - 7:08 am, Mon, 4 January 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ