AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಟ್ವೆಂಟಿ ಟ್ವೆಂಟಿ ಫೋರ್, ಮೋದಿ ಒನ್ಸ್​ ಮೋರ್​-ಬಿಜೆಪಿಗೆ ಮುಂದಿನ ಚುನಾವಣೆಯ ಸ್ಲೋಗನ್​ ಕೊಟ್ಟ ಬರ್ಲಿನ್​ನಲ್ಲಿರುವ ಭಾರತೀಯರು !

ನರೇಂದ್ರ ಮೋದಿಯವರನ್ನು ನೋಡುತ್ತಿದ್ದಂತೆ ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಲು ತೊಡಗಿದ್ದರು. ಅದಾದ ಮೇಲೆ ಸಂಜೆ ಪಾಟ್ಸ್‌ಡ್ಯಾಮರ್ ಪ್ಲಾಟ್ಜ್ ನಲ್ಲಿರುವ ಥಿಯೇಟರ್​ವೊಂದರಲ್ಲಿ ನರೇಂದ್ರ ಮೋದಿ ಭಾರತೀಯರೊಟ್ಟಿಗೆ ಸಂವಾದ ನಡೆಸಿದರು.

Video: ಟ್ವೆಂಟಿ ಟ್ವೆಂಟಿ ಫೋರ್, ಮೋದಿ ಒನ್ಸ್​ ಮೋರ್​-ಬಿಜೆಪಿಗೆ ಮುಂದಿನ ಚುನಾವಣೆಯ ಸ್ಲೋಗನ್​ ಕೊಟ್ಟ ಬರ್ಲಿನ್​ನಲ್ಲಿರುವ ಭಾರತೀಯರು !
ಬರ್ಲಿನ್​ನಲ್ಲಿ ಪ್ರಧಾನಿ ಮೋದಿ
TV9 Web
| Edited By: |

Updated on:May 03, 2022 | 2:26 PM

Share

‘ಟ್ವೆಂಟಿ ಟ್ವೆಂಟಿ ಫೋರ್..ಮೋದಿ ಒನ್ಸ್​ ಮೋರ್​’-ನಿನ್ನೆ ಬರ್ಲಿನ್​​ನಲ್ಲಿ ಭಾರತೀಯ ಮೂಲದವರಿಂದ ಬಹುದೊಡ್ಡದಾಗಿ ಕೂಗಲ್ಪಟ್ಟ ಘೋಷಣೆ ಇದು. ಪ್ರಧಾನಿ ನರೇಂದ್ರ ಮೋದಿ ನಿನ್ನೆಯಿಂದ ಮೂರು ದಿನಗಳ ಕಾಲ, ಯುರೋಪ್​​ನ ಮೂರು ದೇಶಗಳ ಪ್ರವಾಸದಲ್ಲಿದ್ದರೆ. ಮೊದಲು ಜರ್ಮನಿಗೆ ಭೇಟಿ ಕೊಟ್ಟ ಅವರು ಬರ್ಲಿನ್​​ನಲ್ಲಿ ಭಾರತೀಯರ ಜತೆಗೆ ಸಂವಾದ ನಡೆಸಿದರು. ಅಲ್ಲಿ ನಿಂತು ಭಾರತದಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಮಾಡುತ್ತಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಹೇಳಿದರು. ಅಷ್ಟೇ ಅಲ್ಲ, ಕಾಂಗ್ರೆಸ್​ನ್ನು ತೀವ್ರವಾಗಿ ಟೀಕಿಸಿದರು. ಬರ್ಲಿನ್​ನ ಬರ್ಲಿನ್​ನ ಬ್ರ್ಯಾಂಡನ್​​ಬರ್ಗ್​ ಏರ್​ಪೋರ್ಟ್​​ನಲ್ಲಿ ಲ್ಯಾಂಡ್ ಆಗಿ ಅಲ್ಲಿಂದ ಹೊಟೆಲ್​ ಹೊಡ್ಲೆನ್​ ಕೆಂಪಿನ್ಸ್ಕಿಗೆ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಭಾರತೀಯ ಮೂಲದವರಿಂದ ಭರ್ಜರಿ ಸ್ವಾಗತ ಸಿಕ್ಕಿತು.

ನರೇಂದ್ರ ಮೋದಿಯವರನ್ನು ನೋಡುತ್ತಿದ್ದಂತೆ ಭಾರತ್ ಮಾತಾ ಕಿ ಜೈ ಎಂಬ ಘೋಷಣೆ ಕೂಗಲು ತೊಡಗಿದ್ದರು. ಅದಾದ ಮೇಲೆ ಸಂಜೆ ಪಾಟ್ಸ್‌ಡ್ಯಾಮರ್ ಪ್ಲಾಟ್ಜ್ ನಲ್ಲಿರುವ ಥಿಯೇಟರ್​ವೊಂದರಲ್ಲಿ ನರೇಂದ್ರ ಮೋದಿ ಭಾರತೀಯರೊಟ್ಟಿಗೆ ಸಂವಾದ ನಡೆಸಿದರು. ನರೇಂದ್ರ ಮೋದಿ ಸಭಾಂಗಣ ಪ್ರವೇಶ ಮಾಡುತ್ತಿದ್ದಂತೆ ಟ್ವೆಂಟಿ ಟ್ವೆಂಟಿ ಫೋರ್​-ಮೋದಿ ಒನ್ಸ್​ ಮೋರ್​ ಎಂಬ ಘೋಷಣೆಯನ್ನು ದೊಡ್ಡದಾಗಿ ಕೂಗಿದರು. ಈ ಘೋಷಣೆ ತುಂಬ ಚೆನ್ನಾಗಿ, ಪ್ರಾಸಬದ್ಧವಾಗಿದೆ. ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಇದೇ ಸ್ಲೋಗನ್​ ಆದರೂ ಆಶ್ಚರ್ಯವಿಲ್ಲ ಎಂಬ ಚರ್ಚೆ ಸೋಷಿಯಲ್ ಮೀಡಿಯಾದಲ್ಲಿ ಶುರುವಾಗಿದೆ.

ಬಳಿಕ ಜನರನ್ನು ಉದ್ದೇಶಿಸಿ ಭಾಷಣ ಮಾಡಿದ ಪ್ರಧಾನಿ ಮೋದಿ, ನಾನಿಲ್ಲಿ ನನ್ನ ಬಗ್ಗೆ ಮಾತನಾಡಲು ಬಂದಿಲ್ಲ ಅಥವಾ ಮೋದಿ ಸರ್ಕಾರವನ್ನು ಹೊಗಳಿಕೊಳ್ಳಲು ಬಂದಿಲ್ಲ. ಈಗ ನಿರ್ಮಾಣವಾಗಿರುವ ನವ ಭಾರತದ ಬಗ್ಗೆ ತಿಳಿಸಲು ಬಂದಿದ್ದೇನೆ ಎಂದು ಮಾತು ಪ್ರಾರಂಭಿಸಿದ ಅವರು, ನಾನಿಲ್ಲಿ ಬಂದು, ಭಾರತೀಯರಾದ ನಿಮ್ಮನ್ನೆಲ್ಲ ಭೇಟಿಯಾಗಿದ್ದು ತುಂಬ ಖುಷಿಕೊಟ್ಟಿತು ಎಂದು ಹೇಳಿದರು.  ಭಾರತದಲ್ಲಿ ಮೂರು ದಶಕಗಳಿಂದ ಚಾಲ್ತಿಯಲ್ಲಿದ್ದ ಅಸ್ಥಿರ ರಾಜಕಾರಣವನ್ನು ಕೊನೆಗಾಣಿಸಲಾಗಿದೆ. ಈಗ ಭಾರತ ಹೊಸತನದಲ್ಲಿದೆ. ಅದರ ಪುನರುತ್ಥಾನವಾಗಿದೆ. ಪ್ರತಿಯೊಂದು ಮತದ ಮೌಲ್ಯವನ್ನೂ ನಾವು ಅರಿತುಕೊಂಡಿದ್ದೇವೆ ಎಂದರು.

ಇದನ್ನೂ ಓದಿ: ಅಮಿತ್ ಶಾ ವಿಐಪಿ ಆದ್ರೆ ನಮಗೇನ್ರೀ ಆಗ್​ಬೇಕು; ಬೆಂಗಳೂರಿನಲ್ಲಿ ಸಂಚಾರ ಅಸ್ತವ್ಯಸ್ತ, ವಾಹನ ಸವಾರರ ಹಿಡಿಶಾಪ

Published On - 2:19 pm, Tue, 3 May 22

Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು