AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆ ಒಟ್ಟು ಮೂರು ಎನ್​ಜಿಒಗಳಿಗೆ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಒಂದು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..
ಜ್ಯಾಕ್ ಡಾರ್ಸೆ
Lakshmi Hegde
|

Updated on:May 11, 2021 | 8:32 PM

Share

ಚೆನ್ನೈ: ಭಾರತದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವಿರುದ್ಧ ಹೋರಾಟಕ್ಕೆ, ಸೋಷಿಯಲ್ ಮೀಡಿಯಾ ದೈತ್ಯ ಟ್ವಿಟರ್​​ ಸಿಇಒ ಜ್ಯಾಕ್​ ಡೋರ್ಸೆ ಅವರು ವೈಯಕ್ತಿಕವಾಗಿ 15 ಮಿಲಿಯನ್ ಡಾಲರ್​​ ಅಂದರೆ ಸುಮಾರು 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಡಾರ್ಸೆ, ಕೊವಿಡ್​ 19 ಪರಿಹಾರ ಕಾರ್ಯ ನಡೆಸುತ್ತಿರುವ ಕೇರ್​, ಏಡ್​ ಇಂಡಿಯಾ ಮತ್ತು ಸೇವಾ ಇಂಟರ್​ನ್ಯಾಷನಲ್ ಎನ್​ಜಿಒಗಳಿಗೆ 15 ಮಿಲಿಯನ್ ಡಾಲರ್​ಗಳನ್ನು ಹಂಚಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜ್ಯಾಕ್​ ಡೋರ್ಸೆ ಅವರು, ಅಸೋಸಿಯೇಶನ್​ ಆಫ್ ಇಂಡಿಯಾ (AID India)ಕ್ಕೆ 2,500,000 ಡಾಲರ್​, ಕೇರ್​ ಎನ್​ಜಿಒಕ್ಕೆ 10,000,000 ಡಾಲರ್​ ಮತ್ತು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಜ್ಯಾಕ್ ಡಾರ್ಸೆ ಅವರು ಕಳೆದ ವರ್ಷ ಏಪ್ರಿಲ್​ನಿಂದಲೂ ಜಾಗತಿಕವಾಗಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಆರ್ಥಿಕ ನೆರವು ಘೋಷಿಸುತ್ತಲೇ ಇದ್ದಾರೆ. ಎನ್​ಜಿಒ ಮೂಲಕ ಹಣವನ್ನು ದೇಣಿಗೆ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 200 ಸಂಸ್ಥೆಗಳಿಗೆ ಹಣ ನೀಡಿದ್ದಾರೆ. ಇದೀಗ ಭಾರತದ ಮೂರು ಎನ್​ಜಿಒಗಳಿಗೆ ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಸದ್ಯ ಬೆಡ್​, ಆಕ್ಸಿಜನ್ ಸೇರಿ ಹಲವು ವೈದ್ಯಕೀಯ ಉಪಕರಣಗಳ ಕೊರತೆ ಉಂಟಾಗಿದೆ. ಬೇರೆ ಅನೇಕ ದೇಶಗಳು ಭಾರತದ ನೆರವಿಗೆ ನಿಂತಿವೆ. ಆಕ್ಸಿಜನ್​, ಮಾಸ್ಕ್, ರೆಮ್​ಡೆಸಿವಿರ್ ಇಂಜಕ್ಷೆನ್​ ಸೇರಿ ಅಗತ್ಯ ವಸ್ತುಗಳನ್ನು ತಮ್ಮ ದೇಶಗಳಿಂದ ಕಳಿಸುತ್ತಿವೆ.

Published On - 8:20 pm, Tue, 11 May 21

Follow Us
Lakshmi Hegde
Lakshmi Hegde
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!