AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆ ಒಟ್ಟು ಮೂರು ಎನ್​ಜಿಒಗಳಿಗೆ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಒಂದು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..
ಜ್ಯಾಕ್ ಡಾರ್ಸೆ
Lakshmi Hegde
|

Updated on:May 11, 2021 | 8:32 PM

Share

ಚೆನ್ನೈ: ಭಾರತದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವಿರುದ್ಧ ಹೋರಾಟಕ್ಕೆ, ಸೋಷಿಯಲ್ ಮೀಡಿಯಾ ದೈತ್ಯ ಟ್ವಿಟರ್​​ ಸಿಇಒ ಜ್ಯಾಕ್​ ಡೋರ್ಸೆ ಅವರು ವೈಯಕ್ತಿಕವಾಗಿ 15 ಮಿಲಿಯನ್ ಡಾಲರ್​​ ಅಂದರೆ ಸುಮಾರು 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಡಾರ್ಸೆ, ಕೊವಿಡ್​ 19 ಪರಿಹಾರ ಕಾರ್ಯ ನಡೆಸುತ್ತಿರುವ ಕೇರ್​, ಏಡ್​ ಇಂಡಿಯಾ ಮತ್ತು ಸೇವಾ ಇಂಟರ್​ನ್ಯಾಷನಲ್ ಎನ್​ಜಿಒಗಳಿಗೆ 15 ಮಿಲಿಯನ್ ಡಾಲರ್​ಗಳನ್ನು ಹಂಚಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜ್ಯಾಕ್​ ಡೋರ್ಸೆ ಅವರು, ಅಸೋಸಿಯೇಶನ್​ ಆಫ್ ಇಂಡಿಯಾ (AID India)ಕ್ಕೆ 2,500,000 ಡಾಲರ್​, ಕೇರ್​ ಎನ್​ಜಿಒಕ್ಕೆ 10,000,000 ಡಾಲರ್​ ಮತ್ತು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಜ್ಯಾಕ್ ಡಾರ್ಸೆ ಅವರು ಕಳೆದ ವರ್ಷ ಏಪ್ರಿಲ್​ನಿಂದಲೂ ಜಾಗತಿಕವಾಗಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಆರ್ಥಿಕ ನೆರವು ಘೋಷಿಸುತ್ತಲೇ ಇದ್ದಾರೆ. ಎನ್​ಜಿಒ ಮೂಲಕ ಹಣವನ್ನು ದೇಣಿಗೆ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 200 ಸಂಸ್ಥೆಗಳಿಗೆ ಹಣ ನೀಡಿದ್ದಾರೆ. ಇದೀಗ ಭಾರತದ ಮೂರು ಎನ್​ಜಿಒಗಳಿಗೆ ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಸದ್ಯ ಬೆಡ್​, ಆಕ್ಸಿಜನ್ ಸೇರಿ ಹಲವು ವೈದ್ಯಕೀಯ ಉಪಕರಣಗಳ ಕೊರತೆ ಉಂಟಾಗಿದೆ. ಬೇರೆ ಅನೇಕ ದೇಶಗಳು ಭಾರತದ ನೆರವಿಗೆ ನಿಂತಿವೆ. ಆಕ್ಸಿಜನ್​, ಮಾಸ್ಕ್, ರೆಮ್​ಡೆಸಿವಿರ್ ಇಂಜಕ್ಷೆನ್​ ಸೇರಿ ಅಗತ್ಯ ವಸ್ತುಗಳನ್ನು ತಮ್ಮ ದೇಶಗಳಿಂದ ಕಳಿಸುತ್ತಿವೆ.

Published On - 8:20 pm, Tue, 11 May 21

ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ