AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆ ಒಟ್ಟು ಮೂರು ಎನ್​ಜಿಒಗಳಿಗೆ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಒಂದು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..
ಜ್ಯಾಕ್ ಡಾರ್ಸೆ
Lakshmi Hegde
|

Updated on:May 11, 2021 | 8:32 PM

Share

ಚೆನ್ನೈ: ಭಾರತದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವಿರುದ್ಧ ಹೋರಾಟಕ್ಕೆ, ಸೋಷಿಯಲ್ ಮೀಡಿಯಾ ದೈತ್ಯ ಟ್ವಿಟರ್​​ ಸಿಇಒ ಜ್ಯಾಕ್​ ಡೋರ್ಸೆ ಅವರು ವೈಯಕ್ತಿಕವಾಗಿ 15 ಮಿಲಿಯನ್ ಡಾಲರ್​​ ಅಂದರೆ ಸುಮಾರು 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಡಾರ್ಸೆ, ಕೊವಿಡ್​ 19 ಪರಿಹಾರ ಕಾರ್ಯ ನಡೆಸುತ್ತಿರುವ ಕೇರ್​, ಏಡ್​ ಇಂಡಿಯಾ ಮತ್ತು ಸೇವಾ ಇಂಟರ್​ನ್ಯಾಷನಲ್ ಎನ್​ಜಿಒಗಳಿಗೆ 15 ಮಿಲಿಯನ್ ಡಾಲರ್​ಗಳನ್ನು ಹಂಚಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜ್ಯಾಕ್​ ಡೋರ್ಸೆ ಅವರು, ಅಸೋಸಿಯೇಶನ್​ ಆಫ್ ಇಂಡಿಯಾ (AID India)ಕ್ಕೆ 2,500,000 ಡಾಲರ್​, ಕೇರ್​ ಎನ್​ಜಿಒಕ್ಕೆ 10,000,000 ಡಾಲರ್​ ಮತ್ತು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಜ್ಯಾಕ್ ಡಾರ್ಸೆ ಅವರು ಕಳೆದ ವರ್ಷ ಏಪ್ರಿಲ್​ನಿಂದಲೂ ಜಾಗತಿಕವಾಗಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಆರ್ಥಿಕ ನೆರವು ಘೋಷಿಸುತ್ತಲೇ ಇದ್ದಾರೆ. ಎನ್​ಜಿಒ ಮೂಲಕ ಹಣವನ್ನು ದೇಣಿಗೆ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 200 ಸಂಸ್ಥೆಗಳಿಗೆ ಹಣ ನೀಡಿದ್ದಾರೆ. ಇದೀಗ ಭಾರತದ ಮೂರು ಎನ್​ಜಿಒಗಳಿಗೆ ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಸದ್ಯ ಬೆಡ್​, ಆಕ್ಸಿಜನ್ ಸೇರಿ ಹಲವು ವೈದ್ಯಕೀಯ ಉಪಕರಣಗಳ ಕೊರತೆ ಉಂಟಾಗಿದೆ. ಬೇರೆ ಅನೇಕ ದೇಶಗಳು ಭಾರತದ ನೆರವಿಗೆ ನಿಂತಿವೆ. ಆಕ್ಸಿಜನ್​, ಮಾಸ್ಕ್, ರೆಮ್​ಡೆಸಿವಿರ್ ಇಂಜಕ್ಷೆನ್​ ಸೇರಿ ಅಗತ್ಯ ವಸ್ತುಗಳನ್ನು ತಮ್ಮ ದೇಶಗಳಿಂದ ಕಳಿಸುತ್ತಿವೆ.

Published On - 8:20 pm, Tue, 11 May 21

Follow Us
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ