AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..

ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆ ಒಟ್ಟು ಮೂರು ಎನ್​ಜಿಒಗಳಿಗೆ ಹಣ ಹಂಚಿಕೆ ಮಾಡಿದ್ದು, ಅದರಲ್ಲಿ ಒಂದು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಭಾರತದಲ್ಲಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಟ್ವಿಟರ್​ ಸಿಇಒ ಜ್ಯಾಕ್​ ಡಾರ್ಸೆಯಿಂದ 15 ಮಿಲಿಯನ್ ಡಾಲರ್ ಆರ್ಥಿಕ ನೆರವು..
ಜ್ಯಾಕ್ ಡಾರ್ಸೆ
Follow us
Lakshmi Hegde
|

Updated on:May 11, 2021 | 8:32 PM

ಚೆನ್ನೈ: ಭಾರತದಲ್ಲಿ ಅಬ್ಬರಿಸುತ್ತಿರುವ ಕೊರೊನಾ ವಿರುದ್ಧ ಹೋರಾಟಕ್ಕೆ, ಸೋಷಿಯಲ್ ಮೀಡಿಯಾ ದೈತ್ಯ ಟ್ವಿಟರ್​​ ಸಿಇಒ ಜ್ಯಾಕ್​ ಡೋರ್ಸೆ ಅವರು ವೈಯಕ್ತಿಕವಾಗಿ 15 ಮಿಲಿಯನ್ ಡಾಲರ್​​ ಅಂದರೆ ಸುಮಾರು 110 ಕೋಟಿ ರೂಪಾಯಿ ಆರ್ಥಿಕ ನೆರವು ನೀಡಿದ್ದಾರೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಡಾರ್ಸೆ, ಕೊವಿಡ್​ 19 ಪರಿಹಾರ ಕಾರ್ಯ ನಡೆಸುತ್ತಿರುವ ಕೇರ್​, ಏಡ್​ ಇಂಡಿಯಾ ಮತ್ತು ಸೇವಾ ಇಂಟರ್​ನ್ಯಾಷನಲ್ ಎನ್​ಜಿಒಗಳಿಗೆ 15 ಮಿಲಿಯನ್ ಡಾಲರ್​ಗಳನ್ನು ಹಂಚಿ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜ್ಯಾಕ್​ ಡೋರ್ಸೆ ಅವರು, ಅಸೋಸಿಯೇಶನ್​ ಆಫ್ ಇಂಡಿಯಾ (AID India)ಕ್ಕೆ 2,500,000 ಡಾಲರ್​, ಕೇರ್​ ಎನ್​ಜಿಒಕ್ಕೆ 10,000,000 ಡಾಲರ್​ ಮತ್ತು ಆರ್​ಎಸ್​ಎಸ್​ನ ಅಂಗಸಂಸ್ಥೆಯಾದ ಸೇವಾ ಇಂಟರ್​ನ್ಯಾಶನಲ್​​ಗೆ 2,500,000 ಡಾಲರ್​ ನೀಡಿದ್ದಾಗಿ ಮೂಲಗಳು ತಿಳಿಸಿವೆ.

ಜ್ಯಾಕ್ ಡಾರ್ಸೆ ಅವರು ಕಳೆದ ವರ್ಷ ಏಪ್ರಿಲ್​ನಿಂದಲೂ ಜಾಗತಿಕವಾಗಿ ಕೊವಿಡ್​ 19 ವಿರುದ್ಧ ಹೋರಾಟಕ್ಕೆ ಆರ್ಥಿಕ ನೆರವು ಘೋಷಿಸುತ್ತಲೇ ಇದ್ದಾರೆ. ಎನ್​ಜಿಒ ಮೂಲಕ ಹಣವನ್ನು ದೇಣಿಗೆ ನೀಡುತ್ತಿದ್ದಾರೆ. ಇಲ್ಲಿಯವರೆಗೆ ಸುಮಾರು 200 ಸಂಸ್ಥೆಗಳಿಗೆ ಹಣ ನೀಡಿದ್ದಾರೆ. ಇದೀಗ ಭಾರತದ ಮೂರು ಎನ್​ಜಿಒಗಳಿಗೆ ದೇಣಿಗೆ ನೀಡಿದ್ದಾರೆ. ಭಾರತದಲ್ಲಿ ಸದ್ಯ ಬೆಡ್​, ಆಕ್ಸಿಜನ್ ಸೇರಿ ಹಲವು ವೈದ್ಯಕೀಯ ಉಪಕರಣಗಳ ಕೊರತೆ ಉಂಟಾಗಿದೆ. ಬೇರೆ ಅನೇಕ ದೇಶಗಳು ಭಾರತದ ನೆರವಿಗೆ ನಿಂತಿವೆ. ಆಕ್ಸಿಜನ್​, ಮಾಸ್ಕ್, ರೆಮ್​ಡೆಸಿವಿರ್ ಇಂಜಕ್ಷೆನ್​ ಸೇರಿ ಅಗತ್ಯ ವಸ್ತುಗಳನ್ನು ತಮ್ಮ ದೇಶಗಳಿಂದ ಕಳಿಸುತ್ತಿವೆ.

Published On - 8:20 pm, Tue, 11 May 21

ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ
ಸಮಾವೇಶದಲ್ಲಿ ಸರ್ಕಾರದ ಎರಡು ವರ್ಷದ ಸಾಧನೆಗಳ ಪುಸ್ತಕ ಬಿಡುಗಡೆ