AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter India: ಟ್ವಿಟರ್​​ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿ ಧರ್ಮೇಂದ್ರ ಚತುರ್​ ರಾಜೀನಾಮೆ; ಕೇಂದ್ರದ ಸೂಚನೆ ಮೇರೆಗೆ ನೇಮಕ ಮಾಡಿದ್ದ ಕಂಪನಿ

New IT Rules: ಭಾರತದಲ್ಲಿ ಮೇ 25ರಿಂದ ಹೊಸ ಐಟಿ ನಿಯಮಗಳು ಜಾರಿಯಾಗಿವೆ. ಅದರ ಅನ್ವಯ ಇಲ್ಲಿ 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ಕುಂದುಕೊರತೆ ನಿವಾರಣಾ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬೇಕು.

Twitter India: ಟ್ವಿಟರ್​​ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿ ಧರ್ಮೇಂದ್ರ ಚತುರ್​ ರಾಜೀನಾಮೆ; ಕೇಂದ್ರದ ಸೂಚನೆ ಮೇರೆಗೆ ನೇಮಕ ಮಾಡಿದ್ದ ಕಂಪನಿ
ಟ್ವಿಟರ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jun 28, 2021 | 8:31 AM

Share

ಭಾರತದಲ್ಲಿ ಟ್ವಿಟರ್​ ಮತ್ತು ಕೇಂದ್ರ ಸರ್ಕಾರದ ನಡುವೆ, ಹೊಸ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ತಿಕ್ಕಾಟ ನಡೆದಿದ್ದು ಗೊತ್ತೇಇದೆ. ಅದಾದ ಬಳಿಕ ಭಾರತದ ಹೊಸ ಐಟಿ ನಿಯಮಗಳ ಅನುಸರಣೆ ಸಂಬಂಧ ಟ್ವಿಟರ್​​ ಮಧ್ಯಂತರ ಮುಖ್ಯ ಅನುಸರಣೆ ಅಧಿಕಾರಿಯನ್ನು ನೇಮಕ ಮಾಡಿತ್ತು. ಹಾಗೇ ಟ್ವಿಟರ್ ಬಳಕೆದಾರರ ಕುಂದುಕೊರತೆ, ಸಮಸ್ಯೆ ಆಲಿಸಲು ಮಧ್ಯಂತರ ಪ್ರಾದೇಶಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಿತ್ತು. ಆದರೆ ಇತ್ತೀಚೆಗಷ್ಟೇ ನೇಮಕವಾಗಿದ್ದ ಮಧ್ಯಂತರ ಪ್ರಾದೇಶಿಕ ಕುಂದುಕೊರತೆ ಪರಿಹಾರ ಅಧಿಕಾರಿ ಧರ್ಮೇಂದ್ರ ಚತುರ್​ ರಾಜೀನಾಮೆ ನೀಡಿದ್ದಾರೆ.

ಕೇಂದ್ರ ಸರ್ಕಾರದ ಆದೇಶದ ಮೇರೆಗೆ ಟ್ವಿಟರ್​ ಮಧ್ಯಂತರ ಪ್ರಾದೇಶಿಕ ಕುಂದುಕೊರತೆ ನಿವಾರಣಾ ಅಧಿಕಾರಿಯನ್ನು ನೇಮಕ ಮಾಡಿತ್ತು. ಆದರೆ ಧರ್ಮೇಂದ್ರ ಚತುರ್​ ಈಗ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಸೋಷಿಯಲ್​ ಮೀಡಿಯಾದ ವೆಬ್​ಸೈಟ್​​ನಲ್ಲಿ ಇನ್ನುಮುಂದೆ ಅವರ ಹೆಸರು ಇರುವುದಿಲ್ಲ. ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್) ನಿಯಮಗಳು-2021ರಡಿಯಲ್ಲಿ ಅದನ್ನು ತೆಗೆಯಲಾಗಿದೆ ಎಂದು ಟ್ವಿಟರ್​ ಹೇಳಿದ್ದಾಗಿ ಪಿಟಿಐ ವರದಿ ಮಾಡಿದೆ. ಕೇಂದ್ರ ಸರ್ಕಾರ ತನ್ನ ಹೊಸ ಐಟಿ ನಿಯಮಗಳಡಿ, ಸಾಮಾಜಿಕ ಮಾಧ್ಯಮಗಳು ಭಾರತದಲ್ಲಿ ಮಧ್ಯಂತರ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡುವುದನ್ನು ಕಡ್ಡಾಯಗೊಳಿಸಿದೆ. ಆದರೆ ಜೂನ್​ ಪ್ರಾರಂಭದಲ್ಲಷ್ಟೇ ನೇಮಕವಾಗಿದ್ದ ಧರ್ಮೇಂದ್ರ ಚತುರ್​ ತಿಂಗಳ ಅಂತ್ಯದೊಳಗೇ ರಾಜೀನಾಮೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಿಗೆ ಸಂಬಂಧಪಟ್ಟಂತೆ ಕೇಂದ್ರದ ಹೊಸ ನಿಯಮಗಳ ವಿಚಾರದಲ್ಲಿ ಟ್ವಿಟರ್​ ಕಂಪನಿ ಮತ್ತು ಕೇಂದ್ರ ಸರ್ಕಾರದ ನಡುವೆ ಸಂಘರ್ಷ ನಡೆಯುತ್ತಿರುವ ಬೆನ್ನಲ್ಲೇ ಇಂಥದ್ದೊಂದು ಬೆಳವಣಿಗೆ ನಡೆದಿದೆ. ಭಾರತದಲ್ಲಿನ ನಿಯಮಗಳನ್ನು ಪಾಲಿಸುವಲ್ಲಿ ಟ್ವಿಟರ್ ವಿಫಲವಾಗಿದೆ ಎಂದು ಇತ್ತೀಚೆಗೆ ಕೇಂದ್ರ ಸರ್ಕಾರ ಹಲವು ಬಾರಿ ಆಕ್ಷೇಪ ವ್ಯಕ್ತಪಡಿಸುತ್ತಲೇ ಇತ್ತು.

ಭಾರತದಲ್ಲಿ ಮೇ 25ರಿಂದ ಹೊಸ ಐಟಿ ನಿಯಮಗಳು ಜಾರಿಯಾಗಿವೆ. ಅದರ ಅನ್ವಯ ಇಲ್ಲಿ 50 ಲಕ್ಷ ಮತ್ತು ಅದಕ್ಕಿಂತ ಹೆಚ್ಚಿನ ಬಳಕೆದಾರರನ್ನು ಹೊಂದಿರುವ ಸಾಮಾಜಿಕ ಮಾಧ್ಯಮ ಕಂಪನಿಗಳು ಕುಂದುಕೊರತೆ ನಿವಾರಣಾ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಬೇಕು ಮತ್ತು ಅವರ ಹೆಸರು, ಫೋನ್​ ನಂಬರ್​ನ್ನು ತಮ್ಮ ವೆಬ್​ಸೈಟ್​ ಮೂಲಕ ಪ್ರಚುರಪಡಿಸಬೇಕು. ಬಳಕೆದಾರರಿಗೆ ಸೋಷಿಯಲ್ ಮೀಡಿಯಾ ಸಂಬಂಧಪಟ್ಟು ಉಂಟಾಗುವ ಸಮಸ್ಯೆಗಳನ್ನು ಅವರು ಆಲಿಸಬೇಕು ಎಂದು ಹೇಳಲಾಗಿದೆ. ಆದರೆ ಕೇಂದ್ರ ಸರ್ಕಾರ ಹೇಳಿದ್ದ ನಿಯಮಗಳನ್ನು ಪಾಲಿಸಲು ವಿಳಂಬ ಮಾಡಿದ ಟ್ವಿಟರ್​ಗೆ ಜೂ.5ರಂದು ನೋಟಿಸ್​ ಕೂಡ ನೀಡಲಾಗಿತ್ತು. ಬಳಿಕ ಕೇಂದ್ರದ ಆದೇಶವನ್ನು ಪಾಲಿಸುವುದಾಗಿ ಹೇಳಿಕೊಂಡಿತ್ತು.

ಇದನ್ನೂ ಓದಿ: Explainer: ಹಲವು ಟ್ವಿಟರ್​ ಖಾತೆಗಳ ಫಾಲೊವರ್ಸ್ ಸಂಖ್ಯೆ​ ಇಳಿಯುತ್ತಿದೆ ಏಕೆ?

Published On - 8:30 am, Mon, 28 June 21

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ