AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೆಲವು ನಿರ್ದಿಷ್ಟ ವಿಷಯಗಳನ್ನು ತೆಗೆದು ಹಾಕಬೇಕು ಎಂಬ ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್

ಕೇಂದ್ರ ಸರ್ಕಾರ ಇತ್ತೀಚೆಗೆ ಟ್ವಿಟರ್‌ಗೆ ನಿರ್ದಿಷ್ಟ ವಿಷಯವನ್ನು ತೆಗೆದುಹಾಕಬೇಕು ಇಲ್ಲವೇ ಕ್ರಿಮಿನಲ್ ಕ್ರಮವನ್ನು ಎದುರಿಸಬೇಕು ಎಂದು ಹೇಳಿತ್ತು.

ಕೆಲವು ನಿರ್ದಿಷ್ಟ ವಿಷಯಗಳನ್ನು ತೆಗೆದು ಹಾಕಬೇಕು ಎಂಬ  ಕೇಂದ್ರ ಸರ್ಕಾರದ ಆದೇಶದ ವಿರುದ್ಧ ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ ಟ್ವಿಟರ್
ಕರ್ನಾಟಕ ಹೈಕೋರ್ಟ್​
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 05, 2022 | 6:14 PM

Share

ಮೈಕ್ರೋಬ್ಲಾಗಿಂಗ್ ಪ್ಲಾಟ್‌ಫಾರ್ಮ್​​​ನಲ್ಲಿ ಕೆಲವು ವಿಷಯವನ್ನು ತೆಗೆದುಹಾಕುವಂತೆ ಕೇಂದ್ರ ಸರ್ಕಾರ ಹೊರಡಿಸಿದ ಆದೇಶವನ್ನು ಪ್ರಶ್ನಿಸಿ ಟ್ವಿಟರ್ (Twitter), ಕರ್ನಾಟಕ ಹೈಕೋರ್ಟ್‌ಗೆ (Karnataka High Court) ಮೊರೆ ಹೋಗಿದೆ. ಕೇಂದ್ರ ಸರ್ಕಾರ ಇತ್ತೀಚೆಗೆ ಟ್ವಿಟರ್‌ಗೆ ನಿರ್ದಿಷ್ಟ ವಿಷಯವನ್ನು ತೆಗೆದುಹಾಕಬೇಕು ಇಲ್ಲವೇ ಕ್ರಿಮಿನಲ್ ಕ್ರಮವನ್ನು ಎದುರಿಸಬೇಕು ಎಂದು ಹೇಳಿತ್ತು. ಟ್ವಿಟರ್ ಇತ್ತೀಚಿನ ದಿನಗಳಲ್ಲಿ ಕೇಂದ್ರ ಮತ್ತು ಕೆಲವು ರಾಜ್ಯ ಸರ್ಕಾರಗಳೊಂದಿಗೆ ಜಗಳವಾಡುತ್ತಿದೆ. ಕಳೆದ ವರ್ಷ, ಉತ್ತರ ಪ್ರದೇಶ ಪೊಲೀಸರು ಟ್ವಿಟರ್ ಇಂಡಿಯಾ ಮುಖ್ಯಸ್ಥ ಮನೀಶ್ ಮಹೇಶ್ವರಿ ಅವರಿಗೆ ಸೆಕ್ಷನ್ 41 ಎ ಸಿಆರ್‌ಪಿಸಿ ಅಡಿಯಲ್ಲಿ ನೋಟಿಸ್ ನೀಡಿದ್ದರು. ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಗಡ್ಡ ಬೋಳಿಸುವಂತೆ ಹೇಳಿ ಬಲವಂತವಾಗಿ “ವಂದೇ ಮಾತರಂ” ಮತ್ತು “ಜೈ ಶ್ರೀ ರಾಮ್” ಎಂದು ಘೋಷಣೆ ಕೂಗಿದ ವಿಡಿಯೊ ಟ್ವೀಟ್ ಪ್ರಕರಣದಲ್ಲಿ ಟ್ವಿಟರ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿತ್ತು. ಆಗ ಮಹೇಶ್ವರಿ ಅವರು ಕರ್ನಾಟಕ ಹೈಕೋರ್ಟ್‌ನಿಂದ ಮಧ್ಯಂತರ ರಕ್ಷಣೆ ಪಡೆದಿದ್ದರು. ಇದರ ವಿರುದ್ಧ ಯುಪಿ ಸರ್ಕಾರ ಸಲ್ಲಿಸಿರುವ ಮೇಲ್ಮನವಿ ಸುಪ್ರೀಂಕೋರ್ಟ್‌ನಲ್ಲಿ ಬಾಕಿ ಇದೆ.

ಐಟಿ ಕಾಯ್ದೆಯ ಸೆಕ್ಷನ್ 69 ಎ ಅಡಿಯಲ್ಲಿ ಕಳುಹಿಸಿದ ನೋಟಿಸ್ ಪ್ರಕಾರ ಕೆಲವು ವಿಷಯಗಳನ್ನು ತೆಗೆದುಹಾಕಲು ಕೇಂದ್ರ ಸರ್ಕಾರ ಟ್ವಿಟರ್ ಗೆ ಕೊನೆಯ ಗಡುವು ನೀಡಿತ್ತು. ಜೂನ್ 6 ಮತ್ತು ಜೂನ್9ರಂದು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯ ನೀಡಿದ್ದ ಆದೇಶವನ್ನು ಅನುಸರಿಸಿಲ್ಲ ಎಂದು ಹೇಳಿ ಕಳೆದ ವಾರ ಕೇಂದ್ರ ಸರ್ಕಾರ ಟ್ವಿಟರ್​ಗೆ ನೋಟಿಸ್ ಕಳುಹಿಸಿತ್ತು. ಟ್ವಿಟರ್ ಉಲ್ಲಂಘನೆಯನ್ನು ಮುಂದುವರೆಸಿದರೆ, ಹೊಸ ಐಟಿ ನಿಯಮಗಳ ಅಡಿಯಲ್ಲಿ ಮಧ್ಯವರ್ತಿಯಾಗಿ ತಮ್ಮ ರಕ್ಷಣೆಯನ್ನು ಕಳೆದುಕೊಳ್ಳಬಹುದು ಎಂದು ಕೇಂದ್ರವು ಹೇಳಿದೆ.

ಇದಕ್ಕೂ ಮುನ್ನ ಎಲೆಕ್ಟ್ರಾನಿಕ್ಸ್ ಮತ್ತು ಐಟಿ ಸಚಿವಾಲಯವು ನಿಯಮಗಳನ್ನು ಪಾಲಿಸುವಂತೆ ಟ್ವಿಟರ್‌ಗೆ ತಿಳಿಸಿದ್ದು ಜುಲೈ 4 ರ ಗಡುವನ್ನು ನಿಗದಿಪಡಿಸಿತ್ತು. ಅಂತಿಮ ಸೂಚನೆಯನ್ನು ಅನುಸರಿಸಲು ಟ್ವಿಟರ್ ವಿಫಲವಾದರೆ, ಅದು ಮಧ್ಯವರ್ತಿ ಸ್ಥಾನಮಾನವನ್ನು ಕಳೆದುಕೊಳ್ಳಬಹುದು ಎಂದು ಪಿಟಿಐ ವರದಿ ತಿಳಿಸಿದೆ. ಜೂನ್ 27 ರಂದು ಸರ್ಕಾರ ಹೊರಡಿಸಿದ ಅಂತಿಮ ಸೂಚನೆಯನ್ನು ಸಾಮಾಜಿಕ ಮಾಧ್ಯಮ ವೇದಿಕೆ ಟ್ವಿಟರ್ ಅನುಸರಿಸಿದೆ ಎಂದು ಅಧಿಕೃತ ಮೂಲವು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿದೆ.

Published On - 5:45 pm, Tue, 5 July 22

Follow Us
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ರಾಜ್ಯಸಭೆ ಕಲಾಪದಲ್ಲಿ ಸಿಪಿಎಂ ಸಂಸದನಿಗೆ ಲುಂಗಿವಾಲಾ ಎಂದ ಬಿಜೆಪಿ ಸಂಸದೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
ಕೈ ಹೈಕಮಾಂಡ್ ಶಿಫಾರಸ್ಸಿನ ಪಟ್ಟಿಯಲ್ಲಿ ಮತ್ತೊಂದು ಬದಲಾವಣೆ
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
‘ರೈತರ ಪ್ರತಿಭಟನೆಗೆ ಬಾರದ ಸ್ಟಾರ್​ಗಳ ಸಿನಿಮಾ ನಿಷೇಧಿಸಿ’: ಸಾರಾ ಗೋವಿಂದು
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಮುಖ್ಯ ಚುನಾವಣಾಧಿಕಾರಿ ಮಹತ್ವದ ಸುದ್ದಿಗೋಷ್ಠಿ
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ರಾಮಮಂದಿರ ದೇಣಿಗೆ ಕಳ್ಳತನ ಖಂಡಿಸಿ ವಿಪಕ್ಷಗಳ ಪ್ರತಿಭಟನೆ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ