AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​

ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಇ-ಮೇಲ್​ ಐಡಿ ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​
ಟ್ವಿಟರ್​ ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jul 11, 2021 | 1:32 PM

Share

ದೆಹಲಿ: ಟ್ವಿಟರ್​​  (Twitter) ಭಾರತದ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್​ ಪ್ರಕಾಶ್​​ರನ್ನು ಭಾನುವಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿದೆ. ಕೇವಲ ಟ್ವಿಟರ್​​ಗೆ ಮಾತ್ರವಲ್ಲ, ಭಾರತದಲ್ಲಿ 50 ಲಕ್ಷ ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣ ಈ ಮೂರು ರೀತಿಯ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಕ ಮಾಡಬೇಕಾಗಿದೆ. ಆದರೆ ಈ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಟ್ವಿಟರ್​ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು ಹೈಕೋರ್ಟ್ ಮೆಟ್ಟಿಲನ್ನೂ ಏರಿದೆ.

ಇನ್ನು ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಗೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್​, ನಮಗೆ ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡಲು ಇನ್ನೂ 8 ವಾರಗಳ ಕಾಲಾವಕಾಶ ಬೇಕು ಎಂದು ಹೇಳಿತ್ತು. ಭಾರತದಲ್ಲಿ ನಾವು ಸಂಪರ್ಕ ಕಚೇರಿ ನಿರ್ಮಾಣದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಅದಾದ ಬಳಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿತ್ತು.

ಇದೀಗ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ. ಟ್ವಿಟರ್​ ಭಾರತದಲ್ಲಿ ಅಜಮಾಸು 1.75 ಕೋಟಿ ಬಳಕೆದಾರರನ್ನು ಹೊಂದಿದೆ. ಆದರೆ ಇತ್ತೀಚೆಗೆ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರದೊಂದಿಗೆ ಮನಸ್ತಾಪ ಉಂಟಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ

30 ವರ್ಷ ಹಿಂದಿನ ವಿವಾದ ಈಗ ಭುಗಿಲೇಳಲು ಕಾರಣವೇನು? ಕೊಪ್ಪಳ ಕನಕದಾಸ ವೃತ್ತ ವಿವಾದದ ಹಿಂದಿದೆ ರಾಜಕೀಯ ತಂತ್ರ

Twitter Oppointed Vinay Prakash as Resident Grievance Officer In India

Follow Us
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಖಾಲಿ ವದಂತಿ: ಚಾಮರಾಜನಗರದಲ್ಲಿ ಬಂಕ್​ಗಳಿಗೆ ಮುಗಿಬಿದ್ದ ಜನ
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ಪೆಟ್ರೋಲ್ ಉಳಿಸಲು ವರ್ಕ್ ಫ್ರಂ ಹೋಂ? ಕೋವಿಡ್ ರೂಲ್ಸ್ ಮತ್ತೆ ಜಾರಿ ಸಾಧ್ಯತೆ!
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ನಾನು ಅವರ ತೊಡೆಯ ಮೇಲೆ ಕುಳಿತು ಬೆಳದವನು, ಅದಕ್ಕೆ ಅದೃಷ್ಟವಂತ; ರವಿಚಂದ್ರನ್
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ದುರ್ಗಾದೇವಿಗೆ ವೀಳ್ಯದೆಲೆ ಹಾರ ಅಥವಾ ಅಲಂಕಾರದ ಏಕೆ ಮಾಡಬೇಕು?
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಯೋಗ!
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ
ಸ್ಯಾಂಕಿ ಕೆರೆ ಮುಂದೆ 800 ಕೆಜಿ ತೂಕದ ಪುನೀತ್ ಕಂಚಿನ ಪ್ರತಿಮೆ ಲೋಕಾರ್ಪಣೆ