Sign In

By signing in or creating an account, you agree with Associated Broadcasting Company's Terms & Conditions and Privacy Policy.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​

ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಇ-ಮೇಲ್​ ಐಡಿ ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ.

Twitter India: ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್ ಪ್ರಕಾಶ್​ರನ್ನು ನೇಮಕ ಮಾಡಿದ ಟ್ವಿಟರ್​
ಟ್ವಿಟರ್​ ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jul 11, 2021 | 1:32 PM

ದೆಹಲಿ: ಟ್ವಿಟರ್​​  (Twitter) ಭಾರತದ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ವಿನಯ್​ ಪ್ರಕಾಶ್​​ರನ್ನು ಭಾನುವಾರ ನೇಮಕ ಮಾಡಿದೆ. ಕೇಂದ್ರ ಸರ್ಕಾರದ ಹೊಸ ಐಟಿ ನಿಯಮ (IT Rules)ಗಳ ಪ್ರಕಾರ ಟ್ವಿಟರ್​ ಭಾರತದಲ್ಲಿ ಮುಖ್ಯ ಅನುಸರಣಾ ಅಧಿಕಾರಿ, ನೋಡೆಲ್​ ಅಧಿಕಾರಿ ಹಾಗೂ ಸ್ಥಾನಿಕ ಕುಂದುಕೊರತೆ ಪರಿಹಾರ ಅಧಿಕಾರಿಯನ್ನು ನೇಮಕ ಮಾಡಲೇಬೇಕಾಗಿದೆ. ಕೇವಲ ಟ್ವಿಟರ್​​ಗೆ ಮಾತ್ರವಲ್ಲ, ಭಾರತದಲ್ಲಿ 50 ಲಕ್ಷ ಬಳಕೆದಾರರನ್ನು ಹೊಂದಿರುವ ಯಾವುದೇ ಸಾಮಾಜಿಕ ಜಾಲತಾಣ ಈ ಮೂರು ರೀತಿಯ ಅಧಿಕಾರಿಗಳನ್ನು ಕಡ್ಡಾಯವಾಗಿ ನೇಮಕ ಮಾಡಬೇಕಾಗಿದೆ. ಆದರೆ ಈ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರ ಸರ್ಕಾರ ಮತ್ತು ಟ್ವಿಟರ್​ ನಡುವೆ ತೀವ್ರ ಸಂಘರ್ಷ ಏರ್ಪಟ್ಟಿದ್ದು ಹೈಕೋರ್ಟ್ ಮೆಟ್ಟಿಲನ್ನೂ ಏರಿದೆ.

ಇನ್ನು ಐಟಿ ನಿಯಮ ಪಾಲನೆ ಮಾಡುವಲ್ಲಿ ಟ್ವಿಟರ್​ ವಿಳಂಬ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರ ಹೈಕೋರ್ಟ್​ಗೆ ಸಲ್ಲಿಸಿದ್ದ ಗೆ ಗುರುವಾರ ಪ್ರತಿಕ್ರಿಯೆ ನೀಡಿದ್ದ ಟ್ವಿಟರ್​, ನಮಗೆ ಭಾರತದಲ್ಲಿ ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡಲು ಇನ್ನೂ 8 ವಾರಗಳ ಕಾಲಾವಕಾಶ ಬೇಕು ಎಂದು ಹೇಳಿತ್ತು. ಭಾರತದಲ್ಲಿ ನಾವು ಸಂಪರ್ಕ ಕಚೇರಿ ನಿರ್ಮಾಣದ ಪ್ರಕ್ರಿಯೆ ನಡೆಸುತ್ತಿದ್ದೇವೆ. ಅದಾದ ಬಳಿಕ ಕುಂದುಕೊರತೆ ಅಧಿಕಾರಿಯನ್ನು ನೇಮಕ ಮಾಡುತ್ತೇವೆ ಎಂದು ತಿಳಿಸಿತ್ತು.

ಇದೀಗ ವಿನಯ್ ಪ್ರಕಾಶ್​ ಅವರನ್ನು ಸ್ಥಾನಿಕ ಕುಂದುಕೊರತೆ ಅಧಿಕಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಯಾವುದೇ ಸಮಸ್ಯೆಯಿದ್ದರೂ grievance-officer-in @ twitter.com ಮೂಲಕ ಅವರನ್ನು ಸಂಪರ್ಕಿಸಬಹುದಾಗಿದೆ. ಟ್ವಿಟರ್​ ಭಾರತದಲ್ಲಿ ಅಜಮಾಸು 1.75 ಕೋಟಿ ಬಳಕೆದಾರರನ್ನು ಹೊಂದಿದೆ. ಆದರೆ ಇತ್ತೀಚೆಗೆ ಐಟಿ ನಿಯಮಗಳ ಪಾಲನೆ ವಿಚಾರದಲ್ಲಿ ಕೇಂದ್ರದೊಂದಿಗೆ ಮನಸ್ತಾಪ ಉಂಟಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಕುಂದುಕೊರತೆ ಪರಿಹಾರ ಅಧಿಕಾರಿ ನೇಮಕ ಮಾಡಲು 8 ವಾರಗಳ ಸಮಯ ಬೇಕು; ದೆಹಲಿ ಹೈಕೋರ್ಟ್​ಗೆ ಟ್ವಿಟರ್​​ನಿಂದ ಮಾಹಿತಿ

30 ವರ್ಷ ಹಿಂದಿನ ವಿವಾದ ಈಗ ಭುಗಿಲೇಳಲು ಕಾರಣವೇನು? ಕೊಪ್ಪಳ ಕನಕದಾಸ ವೃತ್ತ ವಿವಾದದ ಹಿಂದಿದೆ ರಾಜಕೀಯ ತಂತ್ರ

Twitter Oppointed Vinay Prakash as Resident Grievance Officer In India

ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ಅಬ್ಬಬ್ಬಾ ಚಿನ್ನವೋ ಚಿನ್ನ...ಬಂಗಾರದಂಗಡಿಯಾದ ದಾವಣಗೆರೆ ಎಸ್ಪಿ ಕಚೇರಿ!
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ರಾಜ್ಯ ಘಟಕವನ್ನು ಯಡಿಯೂರಪ್ಪ ಕುಟುಂಬಕ್ಕೆ ಲೀಸ್​ಗೆ ನೀಡಿರುವಂತಿದೆ:ಯತ್ನಾಳ್
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಮೊದಲ ಬಾರಿ ಶಾಸಕನಾದಾಗಿನಿಂದ ನಾನು ಪಕ್ಷದ ಶಿಸ್ತಿನ ಸಿಪಾಯಿ: ತುಕಾರಾಂ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಯತ್ನಾಳ್ ಉಚ್ಚಾಟನೆಯಿಂದ ಉತ್ತರ ಕರ್ನಾಟಕದಲ್ಲಿ ಕಾಂಗ್ರೆಸ್​ಗೆ ಲಾಭ: ತಂಗಡಿಗಿ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ