Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್​ ಭಾಗವತ್​ ಸೇರಿ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಟ್ವಿಟರ್ ಖಾತೆಯ ಬ್ಲ್ಯೂಟಿಕ್ ಕೂಡ ಮಾಯ..!

ಯಾವುದೇ ಅಕೌಂಟ್​​ಗೆ ಬ್ಲ್ಯೂಟಿಕ್​ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್​​ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್​ ತನ್ನ ವೆರಿಫಿಕೇಶನ್​ ನಿಯಮದಲ್ಲೇ ಉಲ್ಲೇಖಿಸಿದೆ.

ಮೋಹನ್​ ಭಾಗವತ್​ ಸೇರಿ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಟ್ವಿಟರ್ ಖಾತೆಯ ಬ್ಲ್ಯೂಟಿಕ್ ಕೂಡ ಮಾಯ..!
ಟ್ವಿಟರ್ ಖಾತೆಯಿಂದ ಬ್ಲ್ಯೂಟಿಕ್​ ತೆಗೆದುಹಾಕಿರುವುದು
Follow us
TV9 Web
| Updated By: Lakshmi Hegde

Updated on:Jun 05, 2021 | 12:21 PM

ದೆಹಲಿ: ಇಂದು ಬೆಳಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರವರ ವೈಯಕ್ತಿಕ ಖಾತೆಯ ಬ್ಲ್ಯೂಟಿಕ್​​ನ್ನು ತೆಗೆದುಹಾಕುವ ಮೂಲಕ ಟ್ವಿಟರ್​ ವಿವಾದ ಸೃಷ್ಟಿಸಿತ್ತು. ಹಲವು ಗಣ್ಯರು ಟ್ವಿಟರ್​ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್​​ನ್ನು ನೀಡಿತ್ತು. ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಖಾತೆ ಹಲವು ತಿಂಗಳುಗಳಿಂದಲೂ ನಿಷ್ಕ್ರಿಯವಾಗಿದ್ದ ಕಾರಣ ತೆಗೆದಿದ್ದಾಗಿ ಹೇಳಿತ್ತು. ಆದರೆ ಟ್ವಿಟರ್​ ಕೇವಲ ವೆಂಕಯ್ಯ ನಾಯ್ಡು ಖಾತೆಯದ್ದಷ್ಟೇ ಅಲ್ಲದೆ, ಹಲವು ಆರ್​ಎಸ್​ಎಸ್​ ನಾಯಕ ವೈಯಕ್ತಿಕ ಖಾತೆಯ ನೀಲಿ ಟಿಕ್​ನ್ನು ತೆಗೆದಿದ್ದು ಬೆಳಕಿಗೆ ಬಂದಿದೆ.

ಆರ್​​ಎಸ್​​ಎಸ್​ನ ಪ್ರಮುಖ ನಾಯಕರಾದ ಮೋಹನ್​ ಭಾಗವತ್,​​ ಸುರೇಶ್​ ಜೋಶಿ, ಅರುಣ್​ ಕುಮಾರ್​, ಕೃಷ್ಣನ್​ ಗೋಪಾಲ್​ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್​​​ಗಳು ಇಂದು ಬೆಳಗ್ಗೆ ಮಾಯವಾಗಿವೆ. ಈ ಬಗ್ಗೆ ನಾವು ಟ್ವಿಟರ್​ಗೆ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಜೀವ್​ ತುಳಿ ಎಂಬುವರು ಟ್ವೀಟ್ ಮಾಡಿದ್ದಾರೆ. ಟ್ವಿಟರ್​​ನಲ್ಲಿ ಬ್ಲ್ಯೂಟಿಕ್​ ಯಾವುದೇ ಗಣ್ಯರು ಈ ಬ್ಲ್ಯೂಟಿಕ್​ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು. ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್​ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ತುಂಬದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್​ಗಳನ್ನು ತೆಗೆದುಹಾಕಿದೆ.

ಇನ್ನು ಯಾವುದೇ ಅಕೌಂಟ್​​ಗೆ ಬ್ಲ್ಯೂಟಿಕ್​ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್​​ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್​ ತನ್ನ ವೆರಿಫಿಕೇಶನ್​ ನಿಯಮದಲ್ಲೇ ಉಲ್ಲೇಖಿಸಿದೆ. ಇಂದು ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಯ ಬ್ಲ್ಯೂಟಿಕ್​ ತೆಗೆದುಹಾಕಿದ್ದ ಟ್ವಿಟರ್​, ಆಕ್ಷೇಪಣೆಗಳು ವ್ಯಕ್ತವಾದ ಬೆನ್ನಲ್ಲೇ ಅದನ್ನು ಮತ್ತೆ ನೀಡಿದೆ.

Mohan Bhagwat

ಮೋಹನ್​ ಭಾಗವತ್​ ಅವರ ಟ್ವಿಟರ್​ ಖಾತೆಗಿಲ್ಲ ಬ್ಲ್ಯೂಟಿಕ್​

ಇದನ್ನೂ ಓದಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಗೆ ನೀಡಿದ್ದ ಬ್ಲ್ಯೂಟಿಕ್​ ತೆಗೆದುಹಾಕಿದ್ದ ಟ್ವಿಟರ್​; ಕಾರಣವೇನು?

ಕಲಬುರಗಿ ಪೊಲೀಸ್ ಠಾಣೆಯಿಂದ ನೂತನ ಪ್ರಯೋಗ; ವಾಟ್ಸಾಪ್ ಮತ್ತು ಫೇಸ್​ಬುಕ್ ಮೂಲಕ ದೂರು ದಾಖಲಿಸಲು ಅವಕಾಶ

Published On - 12:16 pm, Sat, 5 June 21

ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪುನೀತ್ ರಾಜ್​ಕುಮಾರ್ ಬಗ್ಗೆ ಅರ್ಧಗಂಟೆ ಮಾತನಾಡಿದ ರಶ್ಮಿಕಾ ಮಂದಣ್ಣ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಪತಿಯೊಂದಿಗೆ ಜಗಳವಾಡಿ ವಿದ್ಯುತ್ ಟವರ್ ಹತ್ತಿ ಆತ್ಮಹತ್ಯೆಗೆ ಯತ್ನಿಸಿದ ಪತ್ನಿ
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಕೋರ್ಟ್​ ಆದೇಶ ಹಾಗೂ ವ್ಯಕ್ತಿ ಪ್ರಾಣಕ್ಕೂ ಬೆಲೆ ಕೊಡದ KSRTC, ಬಸ್ ಜಪ್ತಿ!
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಚಂದನ್ ಶೆಟ್ಟಿ ಜೊತೆ ಮದುವೆ ಗಾಸಿಪ್, ಸ್ಪಷ್ಟನೆ ಕೊಟ್ಟ ಸಂಜನಾ
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಕುಮಾರಸ್ವಾಮಿ ನನ್ನನ್ನು ಬಯ್ಯದೆ ಬೇರೆ ಯಾರನ್ನು ಬಯ್ಯಲು ಸಾಧ್ಯ? ಶಿವಕುಮಾರ್
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಜಾರ್ಖಂಡ್‌ನ ದಿಯೋಘರ್‌ನಲ್ಲಿ ಇಂಡಿಯನ್ ಆಯಿಲ್ ಸ್ಥಾವರದಲ್ಲಿ ಬೆಂಕಿ ಅವಘಡ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಕರ್ನಾಟಕ ಮೊದಲು ತಮಿಳುನಾಡು ಚರ್ಚೆ ಮಾಡಬೇಕಾದ ಅವಶ್ಯಕತೆ ಸ್ಪಷ್ಟವಾಗುತ್ತಿದೆ
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಶಿವಲಿಂಗೇಗೌಡರು ಕೋಪದಿಂದ ಕುದಿಯುತ್ತಿದ್ದರೆ ಸಭಾಧ್ಯಕ್ಷರಿಗೆ ನಗು!
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ಕಂದಾಯ ಮತ್ತು ಸರ್ವೇ ಇಲಾಖೆ ಅಧಿಕಾರಿಗಳಿಂದ ಮಾರ್ಕಿಂಗ್ ಕೆಲಸ ಶುರುವಾಗಿದೆ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ
ತೆರವು ಕಾರ್ಯಾಚರಣೆ ಆರಂಭಿಸುವ ಮೊದಲು ನೋಟೀಸ್ ನೀಡಿಲ್ಲ: ಕುಮಾರಸ್ವಾಮಿ