AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋಹನ್​ ಭಾಗವತ್​ ಸೇರಿ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಟ್ವಿಟರ್ ಖಾತೆಯ ಬ್ಲ್ಯೂಟಿಕ್ ಕೂಡ ಮಾಯ..!

ಯಾವುದೇ ಅಕೌಂಟ್​​ಗೆ ಬ್ಲ್ಯೂಟಿಕ್​ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್​​ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್​ ತನ್ನ ವೆರಿಫಿಕೇಶನ್​ ನಿಯಮದಲ್ಲೇ ಉಲ್ಲೇಖಿಸಿದೆ.

ಮೋಹನ್​ ಭಾಗವತ್​ ಸೇರಿ ಆರ್​ಎಸ್​ಎಸ್​ನ ಪ್ರಮುಖ ನಾಯಕರ ಟ್ವಿಟರ್ ಖಾತೆಯ ಬ್ಲ್ಯೂಟಿಕ್ ಕೂಡ ಮಾಯ..!
ಟ್ವಿಟರ್ ಖಾತೆಯಿಂದ ಬ್ಲ್ಯೂಟಿಕ್​ ತೆಗೆದುಹಾಕಿರುವುದು
TV9 Web
| Updated By: Lakshmi Hegde|

Updated on:Jun 05, 2021 | 12:21 PM

Share

ದೆಹಲಿ: ಇಂದು ಬೆಳಗ್ಗೆ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡುರವರ ವೈಯಕ್ತಿಕ ಖಾತೆಯ ಬ್ಲ್ಯೂಟಿಕ್​​ನ್ನು ತೆಗೆದುಹಾಕುವ ಮೂಲಕ ಟ್ವಿಟರ್​ ವಿವಾದ ಸೃಷ್ಟಿಸಿತ್ತು. ಹಲವು ಗಣ್ಯರು ಟ್ವಿಟರ್​ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು. ಆಕ್ಷೇಪಣೆಗಳು ಸಲ್ಲಿಕೆಯಾದ ಬೆನ್ನಲ್ಲೇ ಮತ್ತೆ ಆ ದೃಢೀಕರಣ ಬ್ಯಾಡ್ಜ್​​ನ್ನು ನೀಡಿತ್ತು. ವೆಂಕಯ್ಯ ನಾಯ್ಡು ಅವರ ವೈಯಕ್ತಿಕ ಖಾತೆ ಹಲವು ತಿಂಗಳುಗಳಿಂದಲೂ ನಿಷ್ಕ್ರಿಯವಾಗಿದ್ದ ಕಾರಣ ತೆಗೆದಿದ್ದಾಗಿ ಹೇಳಿತ್ತು. ಆದರೆ ಟ್ವಿಟರ್​ ಕೇವಲ ವೆಂಕಯ್ಯ ನಾಯ್ಡು ಖಾತೆಯದ್ದಷ್ಟೇ ಅಲ್ಲದೆ, ಹಲವು ಆರ್​ಎಸ್​ಎಸ್​ ನಾಯಕ ವೈಯಕ್ತಿಕ ಖಾತೆಯ ನೀಲಿ ಟಿಕ್​ನ್ನು ತೆಗೆದಿದ್ದು ಬೆಳಕಿಗೆ ಬಂದಿದೆ.

ಆರ್​​ಎಸ್​​ಎಸ್​ನ ಪ್ರಮುಖ ನಾಯಕರಾದ ಮೋಹನ್​ ಭಾಗವತ್,​​ ಸುರೇಶ್​ ಜೋಶಿ, ಅರುಣ್​ ಕುಮಾರ್​, ಕೃಷ್ಣನ್​ ಗೋಪಾಲ್​ ಮತ್ತಿತರರ ವೈಯಕ್ತಿಕ ಟ್ವಿಟರ್ ಖಾತೆಗೆ ಇದ್ದ ಬ್ಲ್ಯೂಟಿಕ್​​​ಗಳು ಇಂದು ಬೆಳಗ್ಗೆ ಮಾಯವಾಗಿವೆ. ಈ ಬಗ್ಗೆ ನಾವು ಟ್ವಿಟರ್​ಗೆ ತಿಳಿಸಿದರೂ ಯಾವುದೇ ಪ್ರತಿಕ್ರಿಯೆ ಇಲ್ಲ ಎಂದು ರಾಜೀವ್​ ತುಳಿ ಎಂಬುವರು ಟ್ವೀಟ್ ಮಾಡಿದ್ದಾರೆ. ಟ್ವಿಟರ್​​ನಲ್ಲಿ ಬ್ಲ್ಯೂಟಿಕ್​ ಯಾವುದೇ ಗಣ್ಯರು ಈ ಬ್ಲ್ಯೂಟಿಕ್​ ಪಡೆಯಬೇಕು ಎಂದರೆ ಅವರು ಅದರಲ್ಲಿ ಸಕ್ರಿಯರಾಗಿರಬೇಕು. ಅವರದ್ದೇ ಅಧಿಕೃತ ಖಾತೆ ಎಂದು ದೃಢೀಕರಿಸಬೇಕು. ಆದರೆ ಇತ್ತೀಚೆಗೆ ಟ್ವಿಟರ್​ ಪರಿಶೀಲನೆ ನಡೆಸಿದಾಗ ಕೆಲವು ಖಾತೆಗಳು ತುಂಬದಿನಗಳಿಂದ ಬಳಕೆಯಾಗಿಲ್ಲ ಎಂಬುದು ಗೊತ್ತಾಗಿದೆ. ಹಾಗಾಗಿ ಅಂಥ ಟ್ವಿಟರ್ ಖಾತೆಗಳ ದೃಢೀಕರಣ ಬ್ಯಾಡ್ಜ್​ಗಳನ್ನು ತೆಗೆದುಹಾಕಿದೆ.

ಇನ್ನು ಯಾವುದೇ ಅಕೌಂಟ್​​ಗೆ ಬ್ಲ್ಯೂಟಿಕ್​ ಕೊಡುವಾಗ ಒಂದು ಹೆಸರಿದ್ದು, ಬಳಿಕ ಆ ಬಳಕೆದಾರರು ಹೆಸರನ್ನು ಬದಲಿಸಿಕೊಂಡರೆ ತಕ್ಷಣವೇ ಅವರಿಗೆ ನೀಡಲಾಗಿದ್ದ ದೃಢೀಕರಣ ಬ್ಯಾಡ್ಜ್​​ನ್ನು ತೆಗೆದುಹಾಕಲಾಗುವುದು ಎಂದು ಟ್ವಿಟರ್​ ತನ್ನ ವೆರಿಫಿಕೇಶನ್​ ನಿಯಮದಲ್ಲೇ ಉಲ್ಲೇಖಿಸಿದೆ. ಇಂದು ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಯ ಬ್ಲ್ಯೂಟಿಕ್​ ತೆಗೆದುಹಾಕಿದ್ದ ಟ್ವಿಟರ್​, ಆಕ್ಷೇಪಣೆಗಳು ವ್ಯಕ್ತವಾದ ಬೆನ್ನಲ್ಲೇ ಅದನ್ನು ಮತ್ತೆ ನೀಡಿದೆ.

Mohan Bhagwat

ಮೋಹನ್​ ಭಾಗವತ್​ ಅವರ ಟ್ವಿಟರ್​ ಖಾತೆಗಿಲ್ಲ ಬ್ಲ್ಯೂಟಿಕ್​

ಇದನ್ನೂ ಓದಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ವೈಯಕ್ತಿಕ ಖಾತೆಗೆ ನೀಡಿದ್ದ ಬ್ಲ್ಯೂಟಿಕ್​ ತೆಗೆದುಹಾಕಿದ್ದ ಟ್ವಿಟರ್​; ಕಾರಣವೇನು?

ಕಲಬುರಗಿ ಪೊಲೀಸ್ ಠಾಣೆಯಿಂದ ನೂತನ ಪ್ರಯೋಗ; ವಾಟ್ಸಾಪ್ ಮತ್ತು ಫೇಸ್​ಬುಕ್ ಮೂಲಕ ದೂರು ದಾಖಲಿಸಲು ಅವಕಾಶ

Published On - 12:16 pm, Sat, 5 June 21

ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ಜಾಗದ ವಿಚಾರಕ್ಕೆ ಸಮುದಾಯಗಳ ನಡುವೆ ಗಲಾಟೆ: ಅಷ್ಟಕ್ಕೂ ಆಗಿದ್ದೇನು?
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ರಾಹುಲ್ ಗಾಂಧಿಯ ದಿಮಾಗ್ ಚೋರಿಯಾಗಿದೆ ಎಂದ ಪ್ರಲ್ಹಾದ್ ಜೋಶಿ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಬಳ್ಳಾರಿ: ಹೊತ್ತಿ ಉರಿದ ಲಾರಿ, 40 ಯಮಹಾ ಬೈಕ್​ಗಳು ಭಸ್ಮ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಿವರಾಜಕುಮಾರ್ ಹಾಡಿಗೆ ಹೆಜ್ಜೆ ಹಾಕಿದ ಶಾಸಕ ಹೆಚ್.ಸಿ.ಬಾಲಕೃಷ್ಣ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ
ಶಾಮನೂರು ಶಿವಶಂಕರಪ್ಪ ಅಂತ್ಯಸಂಸ್ಕಾರ ಹೇಗೆ ನಡೆಯಲಿದೆ? ಇಲ್ಲಿದೆ ಮಾಹಿತಿ