AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

 ಫಾಲೋವರ್​ಗಳನ್ನು ಸೀಮಿತಗೊಳಿಸಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ನಿರಾಕರಿಸಿದ ಟ್ವಿಟರ್; ಇಲ್ಲಿದೆ ಪೂರ್ಣ ಮಾಹಿತಿ

Rahul Gandhi | Twitter: ಸರ್ಕಾರದ ಒತ್ತಡದಿಂದ ಟ್ವಿಟರ್ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ ಎಂದು ರಾಹುಲ್ ಗಾಂಧಿ ಟ್ವಿಟರ್ ಸಿಇಒ ಪರಾಗ್ ಅಗರ್ವಾಲ್​ಗೆ ಪತ್ರ ಬರೆದಿದ್ದರು. ಇದೀಗ ಟ್ವಿಟರ್​ ಇದಕ್ಕೆ ಪ್ರತಿಕ್ರಿಯೆ ನೀಡಿದೆ.

 ಫಾಲೋವರ್​ಗಳನ್ನು ಸೀಮಿತಗೊಳಿಸಲಾಗುತ್ತಿದೆ ಎಂಬ ರಾಹುಲ್ ಗಾಂಧಿ ಆರೋಪವನ್ನು ನಿರಾಕರಿಸಿದ ಟ್ವಿಟರ್; ಇಲ್ಲಿದೆ ಪೂರ್ಣ ಮಾಹಿತಿ
ಟ್ವಿಟರ್ ಲಾಂಛನ, ರಾಹುಲ್ ಗಾಂಧಿ (ಸಾಂದರ್ಭಿಕ ಚಿತ್ರ)
Follow us
TV9 Web
| Updated By: shivaprasad.hs

Updated on:Jan 27, 2022 | 11:34 AM

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಮೈಕ್ರೋ ಬ್ಲಾಗಿಂಗ್ ಸೈಟ್ ಟ್ವಿಟರ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪರಾಗ್ ಅಗರ್ವಾಲ್​ಗೆ ಬರೆದ ಪತ್ರಕ್ಕೆ ಟ್ವಿಟರ್ ಸಂಸ್ಥೆ (Twitter) ಪ್ರತಿಕ್ರಿಯಿಸಿದ್ದು, ಅವರು ಮಾಡಿದ್ದ ಆರೋಪವನ್ನು ನಿರಾಕರಿಸಿದೆ. ಈ ಕುರಿತು ಎಎನ್​ಐ ವರದಿ ಮಾಡಿದ್ದು, ಸಂಸ್ಥೆಯ ವಕ್ತಾರರ ಹೇಳಿಕೆಯನ್ನು ಉಲ್ಲೇಖಿಸಿದೆ. ಟ್ವಿಟರ್​ನಲ್ಲಿ ಅನುಯಾಯಿಗಳ ಸಂಖ್ಯೆ ನಿಖರವಾಗಿದೆ. ಟ್ವಿಟರ್​​ ಸ್ಪ್ಯಾಮ್​ಗಳಿಗೆ ಅವಕಾಶ ನೀಡುವುದಿಲ್ಲ ಎಂದು ಅವರು ಸ್ಪಷ್ಟನೆ ನೀಡಿದ್ದಾರೆ. ರಾಹುಲ್ ಗಾಂಧಿ ಪರಾಗ್ ಅಗರ್ವಾಲ್​ಗೆ ಬರೆದ ಪತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಟ್ವಿಟರ್ ಮೇಲೆ ಪ್ರಭಾವ ಬೀರಿ ತಮ್ಮ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ರಾಹುಲ್ ಗಾಂಧಿ ಅಂಕಿಅಂಶಗಳನ್ನೂ ನೀಡಿದ್ದರು. ಇದೀಗ ರಾಹುಲ್ ಹೇಳಿಕೆಗೆ ಟ್ವಿಟರ್ ತನ್ನ ಪ್ರತಿಕ್ರಿಯೆ ನೀಡಿ, ಆರೋಪ ನಿರಾಕರಿಸಿದೆ.

ರಾಹುಲ್ ಆರೋಪಕ್ಕೆ ಟ್ವಿಟರ್ ಪ್ರತಿಕ್ರಿಯೆ ಏನು?: ಎಎನ್​ಐ ಸುದ್ದಿಸಂಸ್ಥೆ ವರದಿ ಮಾಡಿರುವಂತೆ, ಟ್ವಿಟರ್ ವಕ್ತಾರರು ರಾಹುಲ್ ಗಾಂಧಿಯವರಿಗೆ ಸಂಸ್ಥೆಯ ನೀತಿಯನ್ನು ಉಲ್ಲೇಖಿಸಿ ಪ್ರತಿಕ್ರಿಯೆ ನೀಡಿದ್ದಾರೆ. ‘‘ಟ್ವಿಟರ್​ ಸ್ಪಾಮ್ ಹಾಗೂ ನಕಲಿ ಫಾಲೋವರ್​ಗಳ ಹೆಚ್ಚಳದ ಕುರಿತಂತೆ ಅತ್ಯುನ್ನತ ತಂತ್ರಜ್ಞಾನದ ಮೂಲಕ ನಿಗಾವಹಿಸುತ್ತದೆ. ಇದರಿಂದಾಗಿ ಫಾಲೋವರ್​ಗಳ ಸಂಖ್ಯೆಯಲ್ಲಿ ಏರಿಳಿತವಾಗುತ್ತದೆ’’ ಎಂದು ವಕ್ತಾರರು ತಿಳಿಸಿದ್ದಾರೆ.

ಮ್ಯಾನಿಪ್ಯುಲೇಷನ್ ಮತ್ತು ಸ್ಪ್ಯಾಮ್‌ ಮೂಲಕ ಟ್ವಿಟರ್​ನ ನೀತಿಗಳನ್ನು ಉಲ್ಲಂಘಿಸಿದ್ದಕ್ಕಾಗಿ ಪ್ರತಿ ವಾರ ಲಕ್ಷಾಂತರ ಖಾತೆಗಳನ್ನು ತೆಗೆದುಹಾಕುತ್ತೇವೆ ಎಂದು ತಿಳಿಸಿರುವ ವಕ್ತಾರರು, ಹೆಚ್ಚಿನ ವಿವರಕ್ಕೆ ಟ್ವಿಟರ್ ಟ್ರಾನ್ಸ್ಪರೆನ್ಸಿ ಸೆಂಟರ್​ಅನ್ನು ಗಮನಿಸಬಹುದು ಎಂದು ತಿಳಿಸಿದ್ದಾರೆ. ಅಲ್ಲದೇ ಟ್ವಿಟರ್​ನ ಈ ಕಾರ್ಯನಿರ್ವಹಣೆಯಿಂದ ಕೆಲವು ಖಾತೆಗಳಲ್ಲಿ ಸಣ್ಣ ಬದಲಾವಣೆಯಾಗಿದ್ದರೆ, ಮತ್ತೆ ಕೆಲವು ಖಾತೆಗಳು ಹೆಚ್ಚಿನ ಪರಿಣಾಮ ಎದುರಿಸಿವೆ ಎಂದೂ ಅವರು ಹೇಳಿದ್ದಾರೆ.

ಪರಾಗ್ ಅಗರ್ವಾಲ್​ಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ ಹೇಳಿದ್ದೇನು?: ಸರ್ಕಾರದ ಒತ್ತಡದಿಂದ ತಮ್ಮ ಟ್ವಿಟರ್ ಫಾಲೋವರ್​​ಗಳ ಸಂಖ್ಯೆಯನ್ನು ಸೀಮಿತಗೊಳಿಸುತ್ತಿದೆ ಎಂದು ಆರೋಪಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟರ್​ನ ಸಿಇಒ ಪರಾಗ್ ಅಗರ್ವಾಲ್​ಗೆ ಪತ್ರ ಬರೆದಿದ್ದರು. ಮೊದಲಿಗೆ ರಾಹುಲ್ ಗಾಂಧಿಯವರ ಖಾತೆಯನ್ನು ಪ್ರತಿ ತಿಂಗಳು ಸುಮಾರು 2 ಲಕ್ಷ ಹೊಸಬರು ಟ್ವಿಟರ್​ನಲ್ಲಿ ಫಾಲೋ ಮಾಡುತ್ತಿದ್ದರು. ಆದರೆ 2021ರ ಆಗಸ್ಟ್ ನಂತರ ಈ ಸಂಖ್ಯೆ ಕೇವಲ 2,500ರ ಆಸುಪಾಸಿನಲ್ಲಿದೆ. ಅರ್ಥಾತ್ ಸುಮಾರು 2,500 ಜನರು ಮಾತ್ರ ಪ್ರತಿ ತಿಂಗಳು ರಾಹುಲ್ ಗಾಂಧಿ ಖಾತೆಯನ್ನು ಹೊಸದಾಗಿ ಫಾಲೋ ಮಾಡುತ್ತಿದ್ದಾರೆ. ಅಲ್ಲದೇ ಕೆಲ ಸಮಯದಿಂದ ಟ್ವಿಟರ್ ಫಾಲೋವರ್​​ಗಳ ಸಂಖ್ಯೆ 19.5 ಮಿಲಿಯನ್​ನಲ್ಲೇ ಸ್ಥಿರವಾಗಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.

ಪರೇಶ್ ಅಗರವಾಲ್​ಗೆ ಬರೆದ ಪತ್ರದಲ್ಲಿ ರಾಹುಲ್ ಗಾಂಧಿ, ‘‘ಭಾರತದಲ್ಲಿ ನಿರಂಕುಶಾಧಿಕಾರದ ಬೆಳವಣಿಗೆಗೆ ಟ್ವಿಟರ್ ಸಕ್ರಿಯವಾಗಿ ಸಹಾಯ ಮಾಡದಂತೆ ನೋಡಿಕೊಳ್ಳುವ ಅಗಾಧ ಜವಾಬ್ದಾರಿ ನಿಮ್ಮ ಮೇಲಿದೆ’’ ಎಂದು ಬರೆದಿದ್ದರು. ‘‘ಜಗತ್ತಿನಾದ್ಯಂತ ಉದಾರವಾದಿ ಪ್ರಜಾಪ್ರಭುತ್ವ ಮತ್ತು ನಿರಂಕುಶಾಧಿಕಾರದ ನಡುವಿನ ಸೈದ್ಧಾಂತಿಕ ಯುದ್ಧವನ್ನು ಸಾಮಾಜಿಕ ಮಾಧ್ಯಮ ವೇದಿಕೆಗಳಿಂದ ರೂಪಿಸಲಾಗುತ್ತಿದೆ. ಇದು ಟ್ವಿಟರ್‌ನಂತಹ ದೊಡ್ಡ ಕಂಪನಿಗಳ ಮೇಲೆ ಬಹುದೊಡ್ಡ ಜವಾಬ್ದಾರಿ ಹೊರಿಸಿದೆ’’ ಎಂದು ರಾಹುಲ್ ಗಾಂಧಿ ಹೇಳಿದ್ದರು.

ಇದನ್ನೂ ಓದಿ:

ಪ್ರಧಾನಿ ಮೋದಿ ಸರ್ಕಾರದ ಒತ್ತಡದಿಂದ ಟ್ವಿಟರ್​ ಫಾಲೋವರ್​ಗಳ ಸಂಖ್ಯೆ ಸೀಮಿತಗೊಳಿಸುತ್ತಿದೆ: ರಾಹುಲ್ ಗಾಂಧಿ ಗಂಭೀರ ಆರೋಪ

ಗುರೂಜಿ ಆರ್ಯವೇದಿಕ್ ಫ್ಯಾಕ್ಟರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ 13 ಪುಟ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣು

Published On - 11:24 am, Thu, 27 January 22

ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಭೂಮಿಕ್ ಸಾಕುತ್ತಿದ್ದ ನಾಯಿ ಅನ್ನ-ನೀರು ಬಿಟ್ಟು ರೋದಿಸುತ್ತಿದೆ: ಅಶೋಕ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಪುನಾರಚನೆ ಬಗ್ಗೆ ಗೊತ್ತಿಲ್ಲ, ನನಗೆ ಸಚಿವನಾಗುವ ಆಕಾಂಕ್ಷೆ ಇಲ್ಲ: ರಾಜು ಕಾಗೆ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
ಸ್ಟೇಡಿಯಂನಲ್ಲಿ ಕಾರ್ಯಕ್ರಮ ನಡೆಯಲು ಶಿವಕುಮಾರ್ ಕಾರಣ: ವಿಜಯೇಂದ್ರ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
11 ವರ್ಷ ಒಟ್ಟಾಗಿ ಕಳೆದ ನಯನತಾರಾ-ವಿಘ್ನೇಶ್​ಗೆ ವಿವಾಹ ವಾರ್ಷಿಕೋತ್ಸವ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ಕಾಲ್ತುಳಿತ ಪ್ರಕರಣಕ್ಕೆ ಕಾರಣ ವರದಿಯ ಬಂದ ನಂತರ ಗೊತ್ತಾಗುತ್ತೆ: ಜಾರಕಿಹೊಳಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ದಕ್ಷತೆಯಿಂದ ಗುಮಾಸ್ತ ಕೆಲಸ ಮಾಡುತ್ತಿದ್ದ: ಪ್ರಾದೇಶಿಕ ಸಾರಿಗೆ ಅಧಿಕಾರಿ
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
ಪ್ರಲ್ಹಾದ್ ಜೋಶಿ ಸುದ್ದಿಗೋಷ್ಠಿ ಲೈವ್
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
‘ಜನರಿಗೆ ಮನು ಬುದ್ಧಿ ತೋರಿಸಲು ಆ ಆಡಿಯೋ ಬಿಟ್ಟೆ’; ಸಂತ್ರಸ್ತೆಯ ನೇರ ಮಾತು
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಒಂದೇ ವಿಮಾನದಲ್ಲಿ ದೆಹಲಿಗೆ ಹೊರಟ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು
ಗೂಗಲ್ ನಂಬಿ, ನಿರ್ಮಾಣ ಹಂತದ ಸೇತುವೆ ಮೇಲೆ ಹೋಗಿ ನೇತಾಡಿದ ಕಾರು