AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾಹೀರಾತಿನಲ್ಲಿ ಮೋದಿಗೆ ಅವಮಾನ? ಟ್ವಿಟರ್​​ನಲ್ಲಿ ಕ್ಯಾಡ್​ಬರಿ ಬಹಿಷ್ಕಾರಕ್ಕೆ ಕರೆ

ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಹೆಸರನ್ನು ಲೇವಡಿ ಮಾಡುವುದಕ್ಕೆ ಇದನ್ನು ಈ ರೀತಿ ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ..

ಜಾಹೀರಾತಿನಲ್ಲಿ ಮೋದಿಗೆ ಅವಮಾನ? ಟ್ವಿಟರ್​​ನಲ್ಲಿ ಕ್ಯಾಡ್​ಬರಿ ಬಹಿಷ್ಕಾರಕ್ಕೆ ಕರೆ
ಕ್ಯಾಡ್​​ಬರಿ ಜಾಹೀರಾತು
TV9 Web
| Edited By: |

Updated on: Oct 30, 2022 | 1:17 PM

Share

Boycott Cadbury ಭಾನುವಾರ ಟ್ವಿಟರ್‌ನಲ್ಲಿ (Twitter) ಟ್ರೆಂಡಿಂಗ್ ಆಗಿದೆ. ಕ್ಯಾಡ್​​ಬರಿ (Cadbury) ಉತ್ಪನ್ನಗಳಲ್ಲಿ ‘ಗೋಮಾಂಸ’ ಬಳಸಲಾಗುತ್ತಿದೆ ಎಂಬ ವದಂತಿ ಜತೆಗೆ ಸಾಮಾಜಿಕ ಮಾಧ್ಯಮ ಬಳಕೆದಾರರು ಕಂಪನಿಯ ಇತ್ತೀಚಿನ ದೀಪಾವಳಿ ಜಾಹೀರಾತನ್ನು ಗುರಿಯಾಗಿಸಿಕೊಂಡಿದ್ದಾರೆ. ವಿಎಚ್‌ಪಿ ನಾಯಕಿ ಸಾಧ್ವಿ ಪ್ರಾಚಿ ಕ್ಯಾಡ್​​ಬರಿ ಜಾಹೀರಾತನ್ನು ಹಂಚಿಕೊಂಡಿದ್ದು ಇದರಲ್ಲಿ ಬಡ ದೀಪ ಮಾರಾಟಗಾರನ ಹೆಸರು ‘ದಾಮೋದರ್’ ಎಂದು ಬಳಸುವುದನ್ನು ಆಕ್ಷೇಪಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ತಂದೆಯ ಹೆಸರನ್ನು ಲೇವಡಿ ಮಾಡುವುದಕ್ಕೆ ಇದನ್ನು ಈ ರೀತಿ ಬಳಸಲಾಗಿದೆ ಎಂದು ಅವರು ಹೇಳಿದ್ದಾರೆ. “ಚಾಯ್‌ವಾಲೆ ಕೆ ಬಾಪ್ ದಿಯೇವಾಲಾ” ಎಂದು ಸಾಧ್ವಿ ಪ್ರಾಚಿ ಟ್ವೀಟ್ ಮಾಡಿದ್ದು, ಭಾರತದಲ್ಲಿ ಕ್ಯಾಡ್​​ಬರಿ ಉತ್ಪನ್ನಗಳನ್ನು ಬಹಿಷ್ಕರಿಸುವಂತೆ ಅನೇಕರು ಟ್ವೀಟ್ ಮಾಡಲು ಪ್ರಾರಂಭಿಸಿದರು.

ಕ್ಯಾಡ್​​ಬರಿ ವಿರುದ್ಧ ಭಾರತೀಯ ಟ್ವಿಟರ್ ಬಳಕೆದಾರರು ಆಕ್ರೋಶ ವ್ಯಕ್ತಪಡಿಸಿದ್ದು ಇದು ಮೊದಲೇನೂ ಇಲ್ಲ. 2021 ರಲ್ಲಿ ಕ್ಯಾಡ್​​ಬರಿ ನಾನ್ ವೆಜ್ ಎಂದು, ಇದೇ ರೀತಿಯ ಬಹಿಷ್ಕಾರದ ಕರೆಯನ್ನು ನೀಡಲಾಯಿತು. ಆದರೆ ಭಾರತದಲ್ಲಿನ ತನ್ನ ಎಲ್ಲಾ ಉತ್ಪನ್ನಗಳು 100% ಸಸ್ಯಾಹಾರಿ, ಪ್ಯಾಕೆಟ್ ಮೇಲಿರುವ ಹಸಿರು ಚುಕ್ಕಿ ಅದನ್ನು ತೋರಿಸುತ್ತದೆ ಎಂದು ಪ್ರಸ್ತುತ ಕಂಪನಿ ಹೇಳಿಕೆ ನೀಡಿತ್ತು.

‘Boycott Cadbury’ ಟ್ರೆಂಡ್ ಹುಟ್ಟು ಹಾಕಿದ ಟ್ವಿಟರ್ ಬಳಕೆದಾರರು ಆಸ್ಟ್ರೇಲಿಯಾದ ಕ್ಯಾಡ್​​ಬರಿ ವೆಬ್‌ಸೈಟ್‌ನ ಉತ್ಪನ್ನ ವಿವರಣೆ ಪುಟದ ಸ್ಕ್ರೀನ್‌ಶಾಟ್ ಅನ್ನು ಹಂಚಿಕೊಂಡಿದ್ದಾರೆ. ಅದರಲ್ಲಿ, ದಯವಿಟ್ಟು ಗಮನಿಸಿ, ನಮ್ಮ ಯಾವುದೇ ಆಸ್ಟ್ರೇಲಿಯನ್ ಉತ್ಪನ್ನಗಳು ಪದಾರ್ಥಗಳಲ್ಲಿ ಜೆಲಾಟಿನ್ ಹೊಂದಿದ್ದರೆ, ನಾವು ಬಳಸುವ ಜೆಲಾಟಿನ್ ಹಲಾಲ್ ಪ್ರಮಾಣೀಕರಿಸಲ್ಪಟ್ಟಿದೆ ಮತ್ತು ಗೋಮಾಂಸದಿಂದ ಪಡೆಯಲಾಗಿದೆ ಎಂದು ಬರೆದಿದೆ.

ಗೋಮಾಂಸ ಆರೋಪದ ಸತ್ಯವೇನು? ಕ್ಯಾಡ್​​ಬರಿ ಉತ್ಪನ್ನಗಳಲ್ಲಿ ಗೋಮಾಂಸವಿದೆ ಎಂದು ಹೇಳುವ ವೈರಲ್ ಸ್ಕ್ರೀನ್‌ಶಾಟ್ ಭಾರತದಲ್ಲ. ಈ ಹಿಂದೆ ಕ್ಯಾಡ್​​ಬರಿ ಡೈರಿ ಮಿಲ್ಕ್ ಅನ್ನು ತಯಾರಿಸುವ ಕ್ಯಾಡ್​​ಬರಿ, ಮೊಂಡೆಲೆಜ್ ಇಂಡಿಯಾ ವಿರುದ್ಧ ಇದೇ ರೀತಿಯ ಆರೋಪ ಮಾಡಿದಾಗ ಭಾರತೀಯ ಉತ್ಪನ್ನಗಳು 100% ಸಸ್ಯಾಹಾರಿಗಳಾಗಿವೆ ಎಂದು ಕಂಪನಿ ಹೇಳಿತ್ತು.

ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಗವಿಸಿದ್ದೇಶ್ವರ ಮಹಾರಥೋತ್ಸವ: ಪುಣ್ಯ ಕ್ಷಣಕ್ಕೆ ಸಾಕ್ಷಿಯಾದ 5 ಲಕ್ಷ ಮಂದಿ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಮೂಳೆ ಬಿದ್ದು ಹೋಗೋಕಿಂತ ಮೊದಲು ಮದುವೆ ಆಗು: ಗಿಲ್ಲಿ ಮೇಲೆ ಅಶ್ವಿನಿ ಆಕ್ರೋಶ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ: ಹುಮ್ನಾಬಾದ್​​ನಲ್ಲಿ ನಿಷೇಧಾಜ್ಞೆ ಜಾರಿ
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ