AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಠಾಕೂರ್ಬರಿ ದೇವಸ್ಥಾನದ ಆವರಣಕ್ಕೆ ಶೂ ಧರಿಸಿಕೊಂಡು ಬಂದ ಕೇಂದ್ರ ಸಚಿವರ ಭದ್ರತಾ ಪಡೆ, ಬಿಜೆಪಿ, ಟಿಎಂಸಿ ನಡುವೆ ಟ್ವೀಟ್​​ ವಾರ್​​

ಬಿಜೆಪಿ ನಾಯಕ ಮತ್ತು ಕೇಂದ್ರ ಬಂದರು ಮತ್ತು ಶಿಪ್ಪಿಂಗ್ ರಾಜ್ಯ ಸಚಿವ ಶಂತನು ಠಾಕೂರ್‌ ಅವರ ಭದ್ರತಾ ಸಿಬ್ಬಂದಿಗಳು ಬೂಟು ಹಾಕಿಕೊಂಡು ಆವರಣಕ್ಕೆ ಬಂದಿದ್ದು, ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದಾರೆ.

West Bengal: ಠಾಕೂರ್ಬರಿ ದೇವಸ್ಥಾನದ ಆವರಣಕ್ಕೆ ಶೂ ಧರಿಸಿಕೊಂಡು ಬಂದ ಕೇಂದ್ರ ಸಚಿವರ ಭದ್ರತಾ ಪಡೆ, ಬಿಜೆಪಿ, ಟಿಎಂಸಿ ನಡುವೆ ಟ್ವೀಟ್​​ ವಾರ್​​
ವೈರಲ್​​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:Jun 12, 2023 | 11:21 AM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಠಾಕೂರ್ಬರಿ ದೇವಸ್ಥಾನಕ್ಕೆ ಬಿಜೆಪಿ ಕೇಂದ್ರ ಸಚಿವರು ಅಪಮಾನ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಗಳ ನಡೆಯುತ್ತಿದೆ. ಮತುವಾ ಸಮುದಾಯದ ದೇವಾಲಯವಾದ ಠಾಕೂರ್ಬರಿ ದೇವಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ಬಗ್ಗೆ ವೀಡಿಯೊ ಕೂಡ ಒಂದು ವೈರಲ್ ಆಗಿದೆ. ಬಿಜೆಪಿ ನಾಯಕ ಮತ್ತು ಕೇಂದ್ರ ಬಂದರು ಮತ್ತು ಶಿಪ್ಪಿಂಗ್ ರಾಜ್ಯ ಸಚಿವ ಶಂತನು ಠಾಕೂರ್‌ ಅವರ ಭದ್ರತಾ ಸಿಬ್ಬಂದಿಗಳು ಬೂಟು ಹಾಕಿಕೊಂಡು ಆವರಣಕ್ಕೆ ಬಂದಿದ್ದು, ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ರಾಜಕೀಯದ ಹೆಸರಿನಲ್ಲಿ ಠಾಕೂರ್ಬಾರಿ ದೇವಾಲಯದ ಪಾವಿತ್ರ್ಯವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಟಿಎಂಸಿ ಹಿರಿಯ ನಾಯಕ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ಸಚಿವರ ನಾಚಿಕೆಗೇಡಿನ ಪ್ರದರ್ಶನ ಎಂದು ಹೇಳಿದ್ದಾರೆ.

CISF ಭದ್ರತಾ ಪಡೆಗಳು ಠಾಕೂರ್ಬರಿ ದೇವಸ್ಥಾನಕ್ಕೆ ಬೂಟುಗಳನ್ನು ಧರಿಸಿ ಬಂದಿದ್ದು ಮತ್ತು ಮಹಿಳಾ ಭಕ್ತರ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಮೂಲಕ ದೇಗುಲಕ್ಕೆ ಅಗೌರವ ತೋರಿದ ಸಚಿವ ಶಂತನು ಠಾಕೂರ್‌ ಅವರ ಅತಿರೇಕದ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ರಾಜಕೀಯದ ಹೆಸರಿನಲ್ಲಿ ಠಾಕೂರ್ಬರಿ ದೇವಾಲಯದ ಪವಿತ್ರತೆಯನ್ನು ಅಪವಿತ್ರಗೊಳಿಸಿದ್ದಾರೆ. ಎಂದು ಸಚಿವ ಶಂತನು ಠಾಕೂರ್‌ ಅವರನ್ನು ಉಲ್ಲೇಖಿಸಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:West Bengal Flood: ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರವಾಹ; ನೆರವು ನೀಡುವುದಾಗಿ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಭರವಸೆ

CISF ಪಡೆ ಶೂ ಹಾಕಿಕೊಂಡು ದೇವಾಲಯದ ಆವರಣವನ್ನು ಪ್ರವೇಶಿಸಿದಲ್ಲದೆ, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ, ಜತೆಗೆ ಅವರ ಆಭರಣಗಳನ್ನು ಕಸಿದುಕೊಂಡು ಅಸಂಸದೀಯ ಭಾಷೆ ಬಳಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದು ಅಗೌರವದಿಂದ ನಡೆದುಕೊಂಡಿದ್ದರೆ. ಇದು ಪವಿತ್ರ ದೇಗುಲಕ್ಕೆ ಘೋರ ಅಪಮಾನ ಮತ್ತು ಮಹಿಳೆಯರ ಘನತೆಗೆ ಭಂಗ ಮತ್ತು ಶಾಂತಿಪ್ರಿಯ ಮತುವವರ ಮುಖಕ್ಕೆ ಕಪಾಳಮೋಕ್ಷವಾಗಿದೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಆರೋಪಿಸಿದ್ದಾರೆ.

ಇಂದಿನ ದಾಳಿಯು ಮತುವ ಸಮುದಾಯದ ಮೇಲಿನ ಸಿಎಂ ದ್ವೇಷಕ್ಕೆ ಮತ್ತೊಂದು ಉದಾಹರಣೆಯಾಗಿದೆ ಮತ್ತು ಅವರ ನೈಜ ಮುಖ ಬಹಿರಂಗವಾಗಿದೆ. ಠಾಕೂರ್ಬಾರಿಯಲ್ಲಿ ಸುಮಾರು 5000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದು ಭಕ್ತ ರಕ್ಷಣೆಗೆ ಅಲ್ಲ, ಟಿಎಂಸಿ ಗೂಂಡಾಗಳನ್ನು ಉಳಿಸಲು. ಈ ಘಟನೆ ಅವಮಾನದ ಮಿತಿಯನ್ನು ಮೀರಿರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ಅವರು ಬೇಷರತ್ ಕ್ಷಮೆಯಾಚನೆ ಮಾಡಬೇಕು, ಗಾಯಾಳುಗಳು, ಬಹುತೇಕ ಮಹಿಳೆಯರು ಸೇರಿದಂತೆ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಮತ್ತು ಅವರ ಆಪ್ತರು ಈ ವಿಷಯವನ್ನು ರಾಜಕೀಯ ಮಾಡುತ್ತಿದ್ದಾರೆ, ಇದು ರಾಜ್ಯ ಸರ್ಕಾರದ ಕೃತ್ಯವಾಗಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Mon, 12 June 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ