AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

West Bengal: ಠಾಕೂರ್ಬರಿ ದೇವಸ್ಥಾನದ ಆವರಣಕ್ಕೆ ಶೂ ಧರಿಸಿಕೊಂಡು ಬಂದ ಕೇಂದ್ರ ಸಚಿವರ ಭದ್ರತಾ ಪಡೆ, ಬಿಜೆಪಿ, ಟಿಎಂಸಿ ನಡುವೆ ಟ್ವೀಟ್​​ ವಾರ್​​

ಬಿಜೆಪಿ ನಾಯಕ ಮತ್ತು ಕೇಂದ್ರ ಬಂದರು ಮತ್ತು ಶಿಪ್ಪಿಂಗ್ ರಾಜ್ಯ ಸಚಿವ ಶಂತನು ಠಾಕೂರ್‌ ಅವರ ಭದ್ರತಾ ಸಿಬ್ಬಂದಿಗಳು ಬೂಟು ಹಾಕಿಕೊಂಡು ಆವರಣಕ್ಕೆ ಬಂದಿದ್ದು, ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದಾರೆ.

West Bengal: ಠಾಕೂರ್ಬರಿ ದೇವಸ್ಥಾನದ ಆವರಣಕ್ಕೆ ಶೂ ಧರಿಸಿಕೊಂಡು ಬಂದ ಕೇಂದ್ರ ಸಚಿವರ ಭದ್ರತಾ ಪಡೆ, ಬಿಜೆಪಿ, ಟಿಎಂಸಿ ನಡುವೆ ಟ್ವೀಟ್​​ ವಾರ್​​
ವೈರಲ್​​ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:Jun 12, 2023 | 11:21 AM

Share

ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಠಾಕೂರ್ಬರಿ ದೇವಸ್ಥಾನಕ್ಕೆ ಬಿಜೆಪಿ ಕೇಂದ್ರ ಸಚಿವರು ಅಪಮಾನ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಗಳ ನಡೆಯುತ್ತಿದೆ. ಮತುವಾ ಸಮುದಾಯದ ದೇವಾಲಯವಾದ ಠಾಕೂರ್ಬರಿ ದೇವಸ್ಥಾನಕ್ಕೆ ಅಗೌರವ ತೋರಿಸಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ. ಬಗ್ಗೆ ವೀಡಿಯೊ ಕೂಡ ಒಂದು ವೈರಲ್ ಆಗಿದೆ. ಬಿಜೆಪಿ ನಾಯಕ ಮತ್ತು ಕೇಂದ್ರ ಬಂದರು ಮತ್ತು ಶಿಪ್ಪಿಂಗ್ ರಾಜ್ಯ ಸಚಿವ ಶಂತನು ಠಾಕೂರ್‌ ಅವರ ಭದ್ರತಾ ಸಿಬ್ಬಂದಿಗಳು ಬೂಟು ಹಾಕಿಕೊಂಡು ಆವರಣಕ್ಕೆ ಬಂದಿದ್ದು, ಮಹಿಳೆಯ ಮೇಲೆ ದೈಹಿಕವಾಗಿ ಹಲ್ಲೆ ಮಾಡಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್​​ ನಾಯಕರು ಆರೋಪಿಸಿದ್ದಾರೆ. ಬಿಜೆಪಿ ರಾಜಕೀಯದ ಹೆಸರಿನಲ್ಲಿ ಠಾಕೂರ್ಬಾರಿ ದೇವಾಲಯದ ಪಾವಿತ್ರ್ಯವನ್ನು ಅಪವಿತ್ರಗೊಳಿಸಿದ್ದಾರೆ ಎಂದು ಟಿಎಂಸಿ ಹಿರಿಯ ನಾಯಕ ಮತ್ತು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ಸಚಿವರ ನಾಚಿಕೆಗೇಡಿನ ಪ್ರದರ್ಶನ ಎಂದು ಹೇಳಿದ್ದಾರೆ.

CISF ಭದ್ರತಾ ಪಡೆಗಳು ಠಾಕೂರ್ಬರಿ ದೇವಸ್ಥಾನಕ್ಕೆ ಬೂಟುಗಳನ್ನು ಧರಿಸಿ ಬಂದಿದ್ದು ಮತ್ತು ಮಹಿಳಾ ಭಕ್ತರ ಮೇಲೆ ದೈಹಿಕವಾಗಿ ಹಲ್ಲೆ ಮಾಡುವ ಮೂಲಕ ದೇಗುಲಕ್ಕೆ ಅಗೌರವ ತೋರಿದ ಸಚಿವ ಶಂತನು ಠಾಕೂರ್‌ ಅವರ ಅತಿರೇಕದ ಕೃತ್ಯವನ್ನು ನಾನು ಬಲವಾಗಿ ಖಂಡಿಸುತ್ತೇನೆ. ಅವರು ರಾಜಕೀಯದ ಹೆಸರಿನಲ್ಲಿ ಠಾಕೂರ್ಬರಿ ದೇವಾಲಯದ ಪವಿತ್ರತೆಯನ್ನು ಅಪವಿತ್ರಗೊಳಿಸಿದ್ದಾರೆ. ಎಂದು ಸಚಿವ ಶಂತನು ಠಾಕೂರ್‌ ಅವರನ್ನು ಉಲ್ಲೇಖಿಸಿ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ:West Bengal Flood: ಪಶ್ಚಿಮ ಬಂಗಾಳದಲ್ಲಿ ಭಾರೀ ಪ್ರವಾಹ; ನೆರವು ನೀಡುವುದಾಗಿ ಸಿಎಂ ಮಮತಾ ಬ್ಯಾನರ್ಜಿಗೆ ಪ್ರಧಾನಿ ಮೋದಿ ಭರವಸೆ

CISF ಪಡೆ ಶೂ ಹಾಕಿಕೊಂಡು ದೇವಾಲಯದ ಆವರಣವನ್ನು ಪ್ರವೇಶಿಸಿದಲ್ಲದೆ, ಮಹಿಳೆಯರ ಮೇಲೆ ದೌರ್ಜನ್ಯ ನಡೆಸಿದ್ದಾರೆ, ಜತೆಗೆ ಅವರ ಆಭರಣಗಳನ್ನು ಕಸಿದುಕೊಂಡು ಅಸಂಸದೀಯ ಭಾಷೆ ಬಳಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದು ಅಗೌರವದಿಂದ ನಡೆದುಕೊಂಡಿದ್ದರೆ. ಇದು ಪವಿತ್ರ ದೇಗುಲಕ್ಕೆ ಘೋರ ಅಪಮಾನ ಮತ್ತು ಮಹಿಳೆಯರ ಘನತೆಗೆ ಭಂಗ ಮತ್ತು ಶಾಂತಿಪ್ರಿಯ ಮತುವವರ ಮುಖಕ್ಕೆ ಕಪಾಳಮೋಕ್ಷವಾಗಿದೆ ಎಂದು ಟಿಎಂಸಿ ವಕ್ತಾರ ಕುನಾಲ್ ಘೋಷ್ ಆರೋಪಿಸಿದ್ದಾರೆ.

ಇಂದಿನ ದಾಳಿಯು ಮತುವ ಸಮುದಾಯದ ಮೇಲಿನ ಸಿಎಂ ದ್ವೇಷಕ್ಕೆ ಮತ್ತೊಂದು ಉದಾಹರಣೆಯಾಗಿದೆ ಮತ್ತು ಅವರ ನೈಜ ಮುಖ ಬಹಿರಂಗವಾಗಿದೆ. ಠಾಕೂರ್ಬಾರಿಯಲ್ಲಿ ಸುಮಾರು 5000 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಇದು ಭಕ್ತ ರಕ್ಷಣೆಗೆ ಅಲ್ಲ, ಟಿಎಂಸಿ ಗೂಂಡಾಗಳನ್ನು ಉಳಿಸಲು. ಈ ಘಟನೆ ಅವಮಾನದ ಮಿತಿಯನ್ನು ಮೀರಿರುವುದರಿಂದ ಸಿಎಂ ಮಮತಾ ಬ್ಯಾನರ್ಜಿ ಅವರು ಬೇಷರತ್ ಕ್ಷಮೆಯಾಚನೆ ಮಾಡಬೇಕು, ಗಾಯಾಳುಗಳು, ಬಹುತೇಕ ಮಹಿಳೆಯರು ಸೇರಿದಂತೆ ಆಸ್ಪತ್ರೆಗೆ ದಾಖಲಾಗಿದ್ದು, ಸಿಎಂ ಮತ್ತು ಅವರ ಆಪ್ತರು ಈ ವಿಷಯವನ್ನು ರಾಜಕೀಯ ಮಾಡುತ್ತಿದ್ದಾರೆ, ಇದು ರಾಜ್ಯ ಸರ್ಕಾರದ ಕೃತ್ಯವಾಗಿದೆ ಎಂದು ಕೇಂದ್ರ ಸಚಿವ ಶಾಂತನು ಠಾಕೂರ್ ಟ್ವಿಟರ್‌ನಲ್ಲಿ ತಿಳಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:20 am, Mon, 12 June 23

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ