AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು. ‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. […]

ಸಿಯಾಚಿನ್​ನಲ್ಲಿ ಮತ್ತೆ ಹಿಮಕುಸಿತ: ಇಬ್ಬರು ಯೋಧರು ಹುತಾತ್ಮ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Dec 01, 2019 | 7:22 AM

Share

ಜಮ್ಮು-ಕಾಶ್ಮೀರದ ಲಡಾಖ್‌ನಲ್ಲಿರುವ ಜಗತ್ತಿನ ಅತೀ ಎತ್ತರದ ಸೇನಾ ನೆಲೆ ಸಿಯಾಚಿನ್‌ನಲ್ಲಿ ಹಿಮಪಾತವಾಗಿದೆ. ಭಾರಿ ಹಿಮಪಾತದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ. ಸಿಯಾಚಿನ್‌ ದಕ್ಷಿಣ ವಲಯದಲ್ಲಿ ಯೋಧರು ಗಸ್ತು ತಿರುಗುತ್ತಿದ್ರು. ಈ ವೇಳೆ ಹಿಮಪಾತ ಸಂಭವಿಸಿದ್ದು, ಇಬ್ಬರು ಯೋಧರು ಹಿಮದಡಿ ಸಿಲುಕಿ ಹುತಾತ್ಮರಾಗಿದ್ದಾರೆ. ಇತ್ತೀಚೆಗಷ್ಟೇ ಹಿಮಕುಸಿತವಾಗಿ 6 ಮಂದಿ ಹುತಾತ್ಮರಾಗಿದ್ದರು.

‘ಧೈರ್ಯವಿದ್ದರೆ ಜೀವಂತ ದಹನ ಮಾಡಲಿ’ ಕಾಂಗ್ರೆಸ್ಸಿಗರು ಬೆಂಕಿ ಹಚ್ಚುವಲ್ಲಿ ನಿಸ್ಸಿಮರು. ಹೀಗಾಗಿ, ಧೈರ್ಯವಿದ್ದರೆ ನನ್ನನ್ನ ಜೀವಂತ ದಹನ ಮಾಡಲಿ ಅಂತ ಸಂಸದೆ ಪ್ರಜ್ಞಾ ಸಿಂಗ್‌ ಠಾಕೂರ್‌ ಸವಾಲು ಹಾಕಿದ್ದಾರೆ. ಮಧ್ಯಪ್ರದೇಶದ ಬ್ಯಾವರಾ ಕ್ಷೇತ್ರಕ್ಕೆ ಪ್ರಜ್ಞಾ ಸಿಂಗ್‌ ಕಾಲಿಟ್ಟರೆ ಜೀವಂತವಾಗಿ ದಹನ ಮಾಡುತ್ತೇವೆ ಅಂತ ಕಾಂಗ್ರೆಸ್‌ ಶಾಸಕ ಇತ್ತೀಚೆಗೆ ಹೇಳಿಕೆ ನೀಡದ್ದರು.

ಘರ್ಷಣೆ ವೇಳೆ ಗನ್​ ತೋರಿಸಿದ ‘ಕೈ’ ಶಾಸಕ! ಜಾರ್ಖಂಡ್‌ನ ಪಲಮುದಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವೆ ಘರ್ಷಣೆ ನಡೆದಿದೆ. ಈ ವೇಳೆ ಕಾಂಗ್ರೆಸ್ ಅಭ್ಯರ್ಥಿ ಕೆ.ಎನ್.ತ್ರಿಪಾಠಿ ಗನ್​ ತೆಗೆದು ತೋರಿಸಿದ ಘಟನೆಯೂ ನಡೆದಿದೆ. ಜಾರ್ಖಂಡ್​ನ 13 ಕ್ಷೇತ್ರಗಳಲ್ಲಿ ನಿನ್ನೆ ಮೊದಲ ಹಂತದ ಮತದಾನ ನಡೆದಿತ್ತು.

ಚಾಕು ತೋರಿಸಿ ಕಾಮುಕರಿಂದ ಅತ್ಯಾಚಾರ: ಗುಜರಾತ್​​ನ​ಲ್ಲಿ 8 ವರ್ಷದ ಬಾಲಕಿಯನ್ನ ಅಪಹರಿಸಿ ಅತ್ಯಾಚಾರವೆಸಗಿದ ಅಮಾನವೀಯ ಘಟನೆ ನಡೆದಿದೆ. ರಾಜ್​​ಕೋಟ್​​ನಲ್ಲಿ ತಾಯಿ ಜೊತೆ ಪಾರ್ಕ್​ನಲ್ಲಿ ಮಲಗಿದ್ದ ಬಾಲಕಿಗೆ ಚಾಕು ತೋರಿಸಿ ಕಿರಾತರು ಅಪಹರಣ ಮಾಡಿದ್ದಾರೆ. ಬಳಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಇದೀಗ ಆರೋಪಿಗ ಪತ್ತೆಗೆ ಖಾಕಿ ಬಲೆ ಬೀಸಿದೆ.

ಮತ್ತೆ ಬಾಯ್ತೆರೆದ ‘ಜ್ವಾಲಾಮುಖಿ’..! ಮೆಕ್ಸಿಕೋ ರಾಜಧಾನಿ ಸಮೀಪವಿರುವ ಜ್ವಾಲಾಮುಖಿಯೊಂದು ಮತ್ತೆ ಬಾಯ್ತೆರೆದಿದೆ. ಇದರ ಪರಿಣಾಮ ಮೆಕ್ಸಿಕೋಗೆ ಬರಬೇಕಿದ್ದ ಹಾಗೂ ಮೆಕ್ಸಿಕೋದಿಂದ ತೆರಳಬೇಕಿದ್ದ ವಿಮಾನಗಳು ಹಾರಾಟ ನಿಲ್ಲಿಸಿವೆ. ಇನ್ನು ಜ್ವಾಲಾಮುಖಿ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದು, ಸ್ಥಳೀಯರನ್ನ ಸುರಕ್ಷಿತ ಸ್ಥಳಗಳಿಗೆ ರವಾನಿಸಲಾಗಿದೆ.

‘ಕಿಸ್​ಮಸ್ ಟ್ರೀ’ ಅನಾವರಣ..! ಕ್ರಿಸ್​ಮಸ್ ಸಮೀಪಿಸುತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಹಬ್ಬ ಎದುರಾಗಲಿದೆ. ವಿಶ್ವದಾದ್ಯಂತ ಕ್ರಿಸ್​ಮಸ್​ಗಾಗಿ ಸಂಭ್ರಮದ ತಯಾರಿ ನಡೆದಿದ್ದು, ಪೋರ್ಚ್​ಗಲ್​ನಲ್ಲಿ ಸುಮಾರು 30 ಮೀಟರ್ ಎತ್ತರದ ಕ್ರಿಸ್​ಮಸ್ ಟ್ರೀಯನ್ನು ಅನಾವರಣ ಮಾಡಲಾಗಿಯಿತು. ಇದು ಬೃಹತ್ ಕಟ್ಟಡದಷ್ಟು ಎತ್ತರವಾಗಿದೆ.

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ