AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಗ್ರಾ: ತಾಜ್‌ಮಹಲ್‌ನಲ್ಲಿ ‘ಗಂಗಾಜಲ’ ಅರ್ಪಿಸಿದ ಇಬ್ಬರ ಬಂಧನ; ವಿಡಿಯೊ ವೈರಲ್

ತಾಜ್ ಮಹಲ್ ಆವರಣದ ಭದ್ರತೆಯ ಕರ್ತವ್ಯದಲ್ಲಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅವರನ್ನು ಬಂಧಿಸಿದೆ. ಪ್ರವಾಸಿಗರು ನೀರಿನ ಬಾಟಲಿಗಳನ್ನು ತರಲು ಅನುಮತಿಸುವ ಟಿಕೆಟ್ ಖರೀದಿಸಿದ ನಂತರ ಈ ವ್ಯಕ್ತಿಗಳು ಸ್ಮಾರಕದ ಆವರಣವನ್ನು ಪ್ರವೇಶಿಸಿದ್ದರು. ಷಹಜಹಾನ್ ಮತ್ತು ಮುಮ್ತಾಜ್ ಮಹಲ್ ಅವರ ಮೂಲ ಸಮಾಧಿಗಳನ್ನು ಹೊಂದಿರುವ ತಾಜ್ ಮಹಲ್‌ನ ನೆಲಮಾಳಿಗೆಗೆ ಹೋಗುವ ಮುಚ್ಚಿದ ಮೆಟ್ಟಿಲುಗಳ ಮೇಲೆ ಆರೋಪಿಗಳಲ್ಲಿ ಒಬ್ಬರು ಪ್ಲಾಸ್ಟಿಕ್ ಬಾಟಲಿಯಿಂದ ನೀರನ್ನು ಸುರಿಯುವುದನ್ನು ವಿಡಿಯೊ ಕ್ಲಿಪ್ ತೋರಿಸುತ್ತದೆ

ಆಗ್ರಾ: ತಾಜ್‌ಮಹಲ್‌ನಲ್ಲಿ ‘ಗಂಗಾಜಲ’ ಅರ್ಪಿಸಿದ ಇಬ್ಬರ ಬಂಧನ; ವಿಡಿಯೊ ವೈರಲ್
ತಾಜ್ ಮಹಲ್​​ನಲ್ಲಿ ಗಂಗಾಜಲ ಅರ್ಪಿಸಿದ ಯುವಕರು
ರಶ್ಮಿ ಕಲ್ಲಕಟ್ಟ
|

Updated on: Aug 03, 2024 | 4:28 PM

Share

ಆಗ್ರಾ ಆಗಸ್ಟ್ 03: ಶನಿವಾರ ಶ್ರಾವಣ ಮಾಸದ ಸಂದರ್ಭದಲ್ಲಿ ಉತ್ತರ ಪ್ರದೇಶದ (Uttar pradesh) ಆಗ್ರಾದ ತಾಜ್ ಮಹಲ್‌ನಲ್ಲಿ (Taj Mahal) ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆಯ ಇಬ್ಬರನ್ನು ಬಂಧಿಸಲಾಗಿದೆ. ತಾಜ್ ಮಹಲ್ ಅನ್ನು ‘ತೇಜೋಮಹಾಲಯ’(TejoMahalay), ಶಿವ ಮಂದಿರ ಎಂದು ಪರಿಗಣಿಸಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪವಿತ್ರ ನೀರನ್ನು ಅರ್ಪಿಸಿದ್ದೇವೆ ಎಂದು ಬಂಧಿತರು ಹೇಳಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಳ್ಳುವ ಇಬ್ಬರನ್ನು ತಾಜ್ ಮಹಲ್ ಆವರಣದಿಂದ ಬಂಧಿಸಿರುವುದನ್ನು ತಾಜ್‌ಗಂಜ್ ಪೊಲೀಸರು ಖಚಿತಪಡಿಸಿದ್ದಾರೆ.

ಷಹಜಹಾನ್ ಮತ್ತು ಮುಮ್ತಾಜ್ ಮಹಲ್ ಅವರ ಮೂಲ ಸಮಾಧಿಗಳನ್ನು ಹೊಂದಿರುವ ತಾಜ್ ಮಹಲ್‌ನ ನೆಲಮಾಳಿಗೆಗೆ ಹೋಗುವ ಮುಚ್ಚಿದ ಮೆಟ್ಟಿಲುಗಳ ಮೇಲೆ ಆರೋಪಿಗಳಲ್ಲಿ ಒಬ್ಬರು ಪ್ಲಾಸ್ಟಿಕ್ ಬಾಟಲಿಯಿಂದ ನೀರನ್ನು ಸುರಿಯುವುದನ್ನು ವಿಡಿಯೊ ಕ್ಲಿಪ್ ತೋರಿಸುತ್ತದೆ. ತಾಜ್ ಮಹಲ್ ಸ್ಮಾರಕವಲ್ಲ,ಅದು ಶಿವನ ದೇವಾಲಯ ಎಂದು ಅವರು ವಾದಿಸಿದ್ದಾರೆ. ಓಂ ಎಂದಿರುವ ಸ್ಟಿಕ್ಕರ್‌ನಲ್ಲಿ ಪವಿತ್ರ ನೀರನ್ನು ಸುರಿಯಲಾಗಿದೆ ಎಂದು ಪೊಲೀಸರು ಹೇಳಿರುವುದಾಗಿ ಐಎಎನ್‌ಎಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ವೈರಲ್ ವಿಡಿಯೊ

ತಾಜ್ ಮಹಲ್ ಆವರಣದ ಭದ್ರತೆಯ ಕರ್ತವ್ಯದಲ್ಲಿದ್ದ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ಅವರನ್ನು ಬಂಧಿಸಿದೆ. ಪ್ರವಾಸಿಗರು ನೀರಿನ ಬಾಟಲಿಗಳನ್ನು ತರಲು ಅನುಮತಿಸುವ ಟಿಕೆಟ್ ಖರೀದಿಸಿದ ನಂತರ ಈ ವ್ಯಕ್ತಿಗಳು ಸ್ಮಾರಕದ ಆವರಣವನ್ನು ಪ್ರವೇಶಿಸಿದ್ದರು.  ತಾಜ್ ಮಹಲ್ ಅನ್ನು ಮರುನಾಮಕರಣ ಮಾಡುವ ಪ್ರಯತ್ನಗಳು ನಡೆಯುತ್ತಿವೆ. ಅದೇ ವೇಳೆ ಸಾಂದರ್ಭಿಕವಾಗಿ ಆರತಿ ಅಥವಾ ಪೂಜೆಗಳನ್ನು ಪ್ರಾರ್ಥನೆಯೊಂದಿಗೆ ನಡೆಸಲು ಪ್ರಯತ್ನಿಸಲಾಗಿದೆ.

ಇಂತಹ ಧಾರ್ಮಿಕ ಅರ್ಪಣೆಗಳಿಗೆ ಅನುಮತಿ ಕೋರಿ ಸ್ಥಳೀಯವಾಗಿ ನ್ಯಾಯಾಲಯದ ಮೊಕದ್ದಮೆ ಪ್ರಸ್ತುತ ನಡೆಯುತ್ತಿದೆ. ಶ್ರಾವಣ ಮಾಸವು ಶಿವನಿಗೆ ಸಮರ್ಪಿತವಾಗಿದೆ. ಹಿಂದುತ್ವ ಸಿದ್ಧಾಂತದ ಗುಂಪುಗಳು ತಾಜ್ ಮಹಲ್ ಅನ್ನು ‘ತೇಜೋಮಹಾಲಯ’ ಎಂದು ಕರೆಯುತ್ತಾರೆ.

ತಾಜ್ ಗಂಜ್ ಪೊಲೀಸ್ ಠಾಣೆಯಲ್ಲಿ ಇಬ್ಬರು ಬಂಧನದಲ್ಲಿದ್ದು, ತನಿಖೆ ನಡೆಯುತ್ತಿದೆ ಎಂದು ಆಗ್ರಾ ನಗರ ಪೊಲೀಸ್ ಉಪ ಆಯುಕ್ತ ಸೂರಜ್  ರಾಯ್  ತಿಳಿಸಿದ್ದಾರೆ.

ಇದನ್ನೂ ಓದಿ: ಜಲಾವೃತಗೊಂಡ ಕೋಲ್ಕತ್ತಾ ವಿಮಾನ ನಿಲ್ದಾಣ, ಪಶ್ಚಿಮ ಬಂಗಾಳಕ್ಕೆ ಪ್ರವಾಹದ ಭೀತಿ

ಇದಕ್ಕೂ ಮುನ್ನ ಅಖಿಲ ಭಾರತ ಹಿಂದೂ ಮಹಾಸಭಾದ ಮಹಿಳಾ ಕಾರ್ಯಕರ್ತೆಯೊಬ್ಬರು ಕಾಸ್‌ಗಂಜ್‌ನ ಸೊರೊನ್‌ನಲ್ಲಿ ಗಂಗಾ ನದಿಯಿಂದ ನೀರನ್ನು ಹೊತ್ತು ತಾಜ್‌ಮಹಲ್ ಕಡೆಗೆ ಮೆರವಣಿಗೆ ನಡೆಸಿದ್ದರು. ಆದರೆ ಪೊಲೀಸರು ಬ್ಯಾರಿಕೇಡ್‌ನಲ್ಲಿ ತಡೆದರು.  ಹಿಂದೆ, ಬಲಪಂಥೀಯ ಕಾರ್ಯಕರ್ತರು ಮಹಾಶಿವರಾತ್ರಿಯ ಸಮಯದಲ್ಲಿ ತಾಜ್ ಮಹಲ್ ಸಂಕೀರ್ಣದೊಳಗೆ ‘ಶಿವ್ ಚಾಲೀಸಾ’ವನ್ನು ಪಠಿಸುತ್ತಿದ್ದರು. ಹಲವಾರು ವರ್ಷಗಳ ಹಿಂದೆ ಸಂಘಟನೆಯಾದ ಹಿಂದೂ ಜಾಗರಣ್ ಮಂಚ್‌ನ ಸದಸ್ಯರು, ಅದರ ಜಿಲ್ಲಾಧ್ಯಕ್ಷ ಗೌರವ್ ಠಾಕೂರ್ ಸೇರಿದಂತೆ, ಸ್ಮಾರಕದೊಳಗೆ ಕೇಸರಿ ಧ್ವಜವನ್ನು ಬೀಸಿದ್ದಕ್ಕಾಗಿ ಪೊಲೀಸರು ಬಂಧಿಸಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಚೂಪಾದ ಮುಳ್ಳುಗಳ ರಾಶಿ ಮೇಲೆ ನೃತ್ಯ; ತಮಿಳುನಾಡಿನಲ್ಲೊಂದು ವಿಶಿಷ್ಟ ಪದ್ಧತಿ
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?