ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ. ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ. ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. […]

ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ!
ಆಯೇಷಾ ಬಾನು

Updated on: Oct 11, 2020 | 9:21 AM

ಹೈದರಾಬಾದ್: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳಿಂದ ಪೊಲೀಸ್ ಸಿಬ್ಬಂದಿ ಹತ್ಯೆ ಮಾಡಿರುವ ಭೀಕರ ಘಟನೆ ಆಂಧ್ರದ ವಿಜಯವಾಡದ ಹೊರ ವಲಯದಲ್ಲಿ ನಡೆದಿದೆ. ಮಹೇಶ ಹತ್ಯೆಗೀಡಾಗಿರೋ ದುರ್ದೈವಿ.

ತಡರಾತ್ರಿ ವಿಜಯವಾಡದ ಹೊರ ವಲಯದಲ್ಲಿನ ಬಾರೊಂದರಲ್ಲಿ‌ ಸ್ನೇಹಿತರೊಂದಿಗೆ ಮದ್ಯ ಕುಡಿಯುತ್ತಿದ್ದ ಮಹೇಶ್​ಗೆ ದ್ವಿಚಕ್ರ ವಾಹನದಲ್ಲಿ ಬಂದ ಇಬ್ಬರು ಗುಂಡು‌ ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ತೀವ್ರ ಗಾಯಗೊಂಡಿದ್ದ ಮಹೇಶನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ರಸ್ತೆ ಮಧ್ಯೆ ಮೃತಪಟ್ಟಿದ್ದಾರೆ.

ಮೃತ ಮಹೇಶ್ ಆಂಧ್ರಪ್ರದೇಶದ ವಿಜಯವಾಡದ ಪೊಲೀಸ್ ಕಮಿಷನರೇಟ್​ನಲ್ಲಿ‌ ಅಟೆಂಡರ್ ಆಗಿ ಕೆಲಸ ಮಾಡುತ್ತಿದ್ದ. ಸದ್ಯ ವಿಜಯವಾಡ ಪೊಲೀಸ್ ಕಮೀಷನರ್ ಶ್ರೀನಿವಾಸ್ ಸ್ಥಳಕ್ಕೆ‌ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೂರು ವಿಶೇಷ ತಂಡ ರಚಿಸಿ ಹಂತಕರಿಗೆ ಬಲೆ ಬೀಸಿದ್ದಾರೆ. ಈ ಕೊಲೆಗೆ ರಿಯಲ್‌ ಎಸ್ಟೇಟ್, ಇನ್ನಿತರೆ ಕಾರಣಗಳ ಶಂಕೆ ವ್ಯಕ್ತವಾಗಿದ್ದು, ಈ ಆಧಾರದಲ್ಲಿ‌ ತನಿಖೆ ನಡೆಸಲಾಗುತ್ತಿದೆ.

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Follow Us