AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ
ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ
ಆಯೇಷಾ ಬಾನು
ಆಯೇಷಾ ಬಾನು|

Updated on: May 25, 2021 | 10:15 AM

Share

ವಿಶಾಖಪಟ್ಟಣಂ: ಆಂಧ್ರಪ್ರದೇಶ-ಒಡಿಶಾ ಗಡಿ ಸಿಲೇರು ನದಿಯಲ್ಲಿ ಸೋಮವಾರ ರಾತ್ರಿ ದುರ್ಘಟನೆಯೊಂದು ಸಂಭವಿಸಿದೆ. ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಿದ್ದು 10 ತಿಂಗಳ ಪುಟ್ಟ ಮಗುವಿನ ಶವ ಪತ್ತೆಯಾಗಿದೆ. ದೋಣಿಗಳಲ್ಲಿದ್ದ 8 ಕೂಲಿ ಕಾರ್ಮಿಕರು ನೀರುಪಾಲಾಗಿದ್ದಾರೆ.

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

ಪ್ರಯಾಣ ಶುರು ಮಾಡಿದ ಕೆಲವೇ ಗಂಟೆಗಳಲ್ಲಿ ಒಂದು ದೋಣಿ ಮುಳುಗಿದೆ. ಈ ವೇಳೆ ಮುಳುಗಿದ ದೋಣಿಯಲ್ಲಿದ್ದ ಜನ ತಮ್ಮ ಪ್ರಾಣ ಉಳಿಸಿಕೊಳ್ಳಲು ಎರಡನೇ ದೋಣಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆಗ ಎರಡನೇ ದೋಣಿಯೂ ಮುಳುಗಿದೆ. ಒಟ್ಟು 13 ಜನರ ಪೈಕಿ ನಾಲ್ವರು ಈಜಿ ದಡವನ್ನು ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. 10 ತಿಂಗಳ ಮಗುವಿನ ಶವ ಪತ್ತೆಯಾಗಿದೆ. ಉಳಿದ 8 ಜನರು ನಾಪತ್ತೆಯಾಗಿದ್ದು ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ನಾಪತ್ತೆಯಾದವರು‌ ಮಲ್ಕಾನಗಿರಿ ಪ್ರದೇಶದ ಗುಂಟವಾಡ, ಕೆಂದಗುಡಾ ಗ್ರಾಮದವರು ಎನ್ನಲಾಗಿದೆ. ನಾಪತ್ತೆಯಾದ‌ ಕುಟುಂಬಸ್ಥರ ರೋಧನೆ, ಆಕ್ರಂದನ ಮುಗಿಲು‌ ಮುಟ್ಟಿದೆ.

ಇದನ್ನೂ ಓದಿ: ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ

Follow Us
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ಕರ್ನಾಟಕ ಬಂದ್​​​​​​​​ಗೆ ಬೆಂಬಲವಿಲ್ಲ: ಪ್ರವೀಣ್ ಶೆಟ್ಟಿ, ಸಾರಾ ಗೋವಿಂದ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ನಿಶ್ಚಿತಾರ್ಥಕ್ಕೆ ಹತ್ತು ವರ್ಷ, ಅಪರೂಪದ ವಿಡಿಯೋ ಹಂಚಿಕೊಂಡ ರಾಧಿಕಾ ಪಂಡಿತ್
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಇನ್ಮುಂದೆ ಬೇಕಾಬಿಟ್ಟಿ ಟ್ಯಾಟೂಗೆ ಬೀಳಲಿದೆ ಸರ್ಕಾರದ ಕಡಿವಾಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಸ್ವಾತಂತ್ರೋತ್ಸವದ ಆಹ್ವಾನ ಪತ್ರಿಕೆಯಲ್ಲಿ ಭಾರತೀಯ ಕಲಾ ವೈವಿಧ್ಯದ ಅನಾವರಣ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಡಿಸಿಎಂ ಪರಮೇಶ್ವರ್​​ ಕಾರಿಗೆ ಅಡ್ಡ ಮಲಗಿ ರೈತರ ಪ್ರತಿಭಟನೆ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ಸರ್ಕಾರಿ ಬಸ್ ಚಾಲಕನ ನಡೆಗೆ ಸಚಿವ ಎಂ.ಬಿ. ಪಾಟೀಲ್​​ ಗರಂ
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿದೆ ಮಹದೇಶ್ವರ ಬೆಟ್ಟ!
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಇಂದು ಭೀಮನ ಅಮವಾಸ್ಯೆ; ಜ್ಯೋತಿರ್ಭೀಮೇಶ್ವರ ವ್ರತವನ್ನು ಆಚರಿಸುವ ವಿಶೇಷ ದಿನ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಕೊಲಂಬಿಯಾ ಭೂಕಂಪದ ಮೃತರ ಸಂಖ್ಯೆ 224ಕ್ಕೆ ಏರಿಕೆ
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು
ಪಾಕಿಸ್ತಾನ ಸೇನೆಯ ಪ್ರಧಾನ ಕಚೇರಿ ಮೇಲೆ ಗುಂಡಿನ ದಾಳಿ; ಓರ್ವ ಸೈನಿಕ ಸಾವು