AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

Andhra Pradesh ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಡೆ.. ಮಗು ಸಾವು, 8 ಮಂದಿ ನಾಪತ್ತೆ
ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ
ಆಯೇಷಾ ಬಾನು
|

Updated on: May 25, 2021 | 10:15 AM

Share

ವಿಶಾಖಪಟ್ಟಣಂ: ಆಂಧ್ರಪ್ರದೇಶ-ಒಡಿಶಾ ಗಡಿ ಸಿಲೇರು ನದಿಯಲ್ಲಿ ಸೋಮವಾರ ರಾತ್ರಿ ದುರ್ಘಟನೆಯೊಂದು ಸಂಭವಿಸಿದೆ. ಸಿಲೇರು ನದಿಯಲ್ಲಿ ಎರಡು ದೋಣಿಗಳು ಮುಳುಗಿದ್ದು 10 ತಿಂಗಳ ಪುಟ್ಟ ಮಗುವಿನ ಶವ ಪತ್ತೆಯಾಗಿದೆ. ದೋಣಿಗಳಲ್ಲಿದ್ದ 8 ಕೂಲಿ ಕಾರ್ಮಿಕರು ನೀರುಪಾಲಾಗಿದ್ದಾರೆ.

ವರದಿಗಳ ಪ್ರಕಾರ, ವೈಜಾಗ್ ಏಜೆನ್ಸಿಯ ಎರಡು ದೋಣಿಗಳಲ್ಲಿ ಒಟ್ಟು 13 ಜನ ಪ್ರಯಾಣ ಮಾಡುತ್ತಿದ್ದರು. ಇವರೆಲ್ಲ ಹೈದರಾಬಾದ್‌ನಲ್ಲಿ ಕೂಲಿ‌ ಕೆಲಸ ಮಾಡುತ್ತಿದ್ದರು. ಆದರೆ ಲಾಕ್ ಡೌನ್ ಕಾರಣ ಸ್ವಗ್ರಾಮಕ್ಕೆ ಹಿಂತಿರುಗುವಾಗ ಈ ಘಟನೆ ನಡೆದಿದೆ.

ಪ್ರಯಾಣ ಶುರು ಮಾಡಿದ ಕೆಲವೇ ಗಂಟೆಗಳಲ್ಲಿ ಒಂದು ದೋಣಿ ಮುಳುಗಿದೆ. ಈ ವೇಳೆ ಮುಳುಗಿದ ದೋಣಿಯಲ್ಲಿದ್ದ ಜನ ತಮ್ಮ ಪ್ರಾಣ ಉಳಿಸಿಕೊಳ್ಳಲು ಎರಡನೇ ದೋಣಿಗೆ ಹತ್ತಲು ಪ್ರಯತ್ನಿಸಿದ್ದಾರೆ. ಆಗ ಎರಡನೇ ದೋಣಿಯೂ ಮುಳುಗಿದೆ. ಒಟ್ಟು 13 ಜನರ ಪೈಕಿ ನಾಲ್ವರು ಈಜಿ ದಡವನ್ನು ಸೇರಿ ಪ್ರಾಣ ಉಳಿಸಿಕೊಂಡಿದ್ದಾರೆ. 10 ತಿಂಗಳ ಮಗುವಿನ ಶವ ಪತ್ತೆಯಾಗಿದೆ. ಉಳಿದ 8 ಜನರು ನಾಪತ್ತೆಯಾಗಿದ್ದು ನೀರುಪಾಲಾದ ಕೂಲಿ ಕಾರ್ಮಿಕರಿಗಾಗಿ ಶೋಧಕಾರ್ಯ ನಡೆಯುತ್ತಿದೆ.

ನಾಪತ್ತೆಯಾದವರು‌ ಮಲ್ಕಾನಗಿರಿ ಪ್ರದೇಶದ ಗುಂಟವಾಡ, ಕೆಂದಗುಡಾ ಗ್ರಾಮದವರು ಎನ್ನಲಾಗಿದೆ. ನಾಪತ್ತೆಯಾದ‌ ಕುಟುಂಬಸ್ಥರ ರೋಧನೆ, ಆಕ್ರಂದನ ಮುಗಿಲು‌ ಮುಟ್ಟಿದೆ.

ಇದನ್ನೂ ಓದಿ: ಮಂಗಳೂರು ದೋಣಿ ದುರಂತ ಪ್ರಕರಣ; ಈಜಿ ದಡ ಸೇರಿದ ಮತ್ತೊಬ್ಬ ಯುವಕ

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ