AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pragya Singh Thakur: ಪ್ರಗ್ಯಾ ಸಿಂಗ್ ಠಾಕೂರ್​ಗೆ ಅಶ್ಲೀಲ ವಿಡಿಯೋ, ಮೆಸೇಜ್ ರವಾನೆ; ಇಬ್ಬರ ವಿರುದ್ಧ ಕೇಸ್ ದಾಖಲು

ತನಗೆ ಬಂದ ಫೋನ್ ಕರೆ ಮತ್ತು ವಿಡಿಯೋಗಳು ತನ್ನ ಮಾನಹಾನಿ ಮತ್ತು ಇಮೇಜ್ ಹಾಳು ಮಾಡುವ ಪಿತೂರಿಯ ಭಾಗವಾಗಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ

Pragya Singh Thakur: ಪ್ರಗ್ಯಾ ಸಿಂಗ್ ಠಾಕೂರ್​ಗೆ ಅಶ್ಲೀಲ ವಿಡಿಯೋ, ಮೆಸೇಜ್ ರವಾನೆ; ಇಬ್ಬರ ವಿರುದ್ಧ ಕೇಸ್ ದಾಖಲು
ಪ್ರಜ್ಞಾ ಸಿಂಗ್ ಠಾಕೂರ್
TV9 Web
| Edited By: |

Updated on: Feb 07, 2022 | 5:12 PM

Share

ಭೂಪಾಲ್: ಭೂಪಾಲ್‌ನ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ (Pragya Singh Thakur) ಅವರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಅಪರಿಚಿತ ಮೊಬೈಲ್ ನಂಬರ್​ನಿಂದ ತಮಗೆ ಆಕ್ಷೇಪಾರ್ಹ ವಿಡಿಯೋ ಕಾಲ್ ಬಂದಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರಗ್ಯಾ ಸಿಂಗ್ ಠಾಕೂರ್ ಮೊದಲು ತಮಗೆ ಬಂದ ಫೋನ್ ಕಾಲ್ ಕಡಿತಗೊಳಿಸಿದರು. ನಂತರ ಆಕೆಗೆ ಮತ್ತೊಂದು ನಂಬರ್​ನಿಂದ ಅಶ್ಲೀಲ ವಿಡಿಯೋ, ಮೆಸೇಜ್ ಕಳುಹಿಸಲಾಯಿತು. ಅಲ್ಲದೆ, ಆ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡುವ ಮೂಲಕ ತನ್ನ ಮಾನಹಾನಿ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ದೂರು ನೀಡಿದ್ದಾರೆ” ಎಂದು ಇನ್ಸ್‌ಪೆಕ್ಟರ್ ಚೈನ್ ಸಿಂಗ್ ರಘುವಂಶಿ ಹೇಳಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಲೈಂಗಿಕ ಕಿರುಕುಳ), 507 (ಅನಾಮಧೇಯ ವಿಳಾಸದಿಂದ ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನಗೆ ಬಂದ ಫೋನ್ ಕರೆ ಮತ್ತು ವಿಡಿಯೋಗಳು ತನ್ನ ಮಾನಹಾನಿ ಮತ್ತು ಇಮೇಜ್ ಹಾಳು ಮಾಡುವ ಪಿತೂರಿಯ ಭಾಗವಾಗಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Pragya Thakur: ನಾನು ಕಬಡ್ಡಿಯಾಡಿದ್ದನ್ನು ವಿಡಿಯೋ ಮಾಡಿದವರು ರಾವಣರು; ಬಿಜೆಪಿ ನಾಯಕಿ ಪ್ರಗ್ಯಾ ಠಾಕೂರ್ ಆಕ್ರೋಶ

ನನಗೆ ಕೊರೊನಾ ಸೋಂಕು ತಗುಲಿಲ್ಲ, ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ: ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್

Follow Us
Web contact
Web contact

TV9 Kannada

Read More
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಐಪಿಎಲ್‌ನಲ್ಲಿ ಇತಿಹಾಸ ನಿರ್ಮಿಸಿದ ಸಾಯಿ ಸುದರ್ಶನ್
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ