AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pragya Singh Thakur: ಪ್ರಗ್ಯಾ ಸಿಂಗ್ ಠಾಕೂರ್​ಗೆ ಅಶ್ಲೀಲ ವಿಡಿಯೋ, ಮೆಸೇಜ್ ರವಾನೆ; ಇಬ್ಬರ ವಿರುದ್ಧ ಕೇಸ್ ದಾಖಲು

ತನಗೆ ಬಂದ ಫೋನ್ ಕರೆ ಮತ್ತು ವಿಡಿಯೋಗಳು ತನ್ನ ಮಾನಹಾನಿ ಮತ್ತು ಇಮೇಜ್ ಹಾಳು ಮಾಡುವ ಪಿತೂರಿಯ ಭಾಗವಾಗಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ

Pragya Singh Thakur: ಪ್ರಗ್ಯಾ ಸಿಂಗ್ ಠಾಕೂರ್​ಗೆ ಅಶ್ಲೀಲ ವಿಡಿಯೋ, ಮೆಸೇಜ್ ರವಾನೆ; ಇಬ್ಬರ ವಿರುದ್ಧ ಕೇಸ್ ದಾಖಲು
ಪ್ರಜ್ಞಾ ಸಿಂಗ್ ಠಾಕೂರ್
TV9 Web
| Edited By: |

Updated on: Feb 07, 2022 | 5:12 PM

Share

ಭೂಪಾಲ್: ಭೂಪಾಲ್‌ನ ಸಂಸದೆ ಪ್ರಗ್ಯಾ ಸಿಂಗ್ ಠಾಕೂರ್ (Pragya Singh Thakur) ಅವರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ ಹಿನ್ನೆಲೆಯಲ್ಲಿ ಇಬ್ಬರು ಅಪರಿಚಿತ ವ್ಯಕ್ತಿಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಅಪರಿಚಿತ ಮೊಬೈಲ್ ನಂಬರ್​ನಿಂದ ತಮಗೆ ಆಕ್ಷೇಪಾರ್ಹ ವಿಡಿಯೋ ಕಾಲ್ ಬಂದಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ದೂರು ದಾಖಲಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಪ್ರಗ್ಯಾ ಸಿಂಗ್ ಠಾಕೂರ್ ಮೊದಲು ತಮಗೆ ಬಂದ ಫೋನ್ ಕಾಲ್ ಕಡಿತಗೊಳಿಸಿದರು. ನಂತರ ಆಕೆಗೆ ಮತ್ತೊಂದು ನಂಬರ್​ನಿಂದ ಅಶ್ಲೀಲ ವಿಡಿಯೋ, ಮೆಸೇಜ್ ಕಳುಹಿಸಲಾಯಿತು. ಅಲ್ಲದೆ, ಆ ಅಶ್ಲೀಲ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಅಪ್​ಲೋಡ್ ಮಾಡುವ ಮೂಲಕ ತನ್ನ ಮಾನಹಾನಿ ಮಾಡುವ ಬೆದರಿಕೆ ಹಾಕಿದ್ದಾರೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ದೂರು ನೀಡಿದ್ದಾರೆ” ಎಂದು ಇನ್ಸ್‌ಪೆಕ್ಟರ್ ಚೈನ್ ಸಿಂಗ್ ರಘುವಂಶಿ ಹೇಳಿದ್ದಾರೆ.

ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಆರೋಪಿಗಳ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354 (ಲೈಂಗಿಕ ಕಿರುಕುಳ), 507 (ಅನಾಮಧೇಯ ವಿಳಾಸದಿಂದ ಕ್ರಿಮಿನಲ್ ಬೆದರಿಕೆ) ಮತ್ತು 509 (ಮಹಿಳೆಯರನ್ನು ಅವಮಾನಿಸುವ ಉದ್ದೇಶದಿಂದ ಪದ, ಸನ್ನೆ ಅಥವಾ ಕೃತ್ಯ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ತನಗೆ ಬಂದ ಫೋನ್ ಕರೆ ಮತ್ತು ವಿಡಿಯೋಗಳು ತನ್ನ ಮಾನಹಾನಿ ಮತ್ತು ಇಮೇಜ್ ಹಾಳು ಮಾಡುವ ಪಿತೂರಿಯ ಭಾಗವಾಗಿದೆ ಎಂದು ಪ್ರಗ್ಯಾ ಸಿಂಗ್ ಠಾಕೂರ್ ಹೇಳಿದ್ದಾರೆ. ಆರೋಪಿಗಳನ್ನು ಗುರುತಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: Pragya Thakur: ನಾನು ಕಬಡ್ಡಿಯಾಡಿದ್ದನ್ನು ವಿಡಿಯೋ ಮಾಡಿದವರು ರಾವಣರು; ಬಿಜೆಪಿ ನಾಯಕಿ ಪ್ರಗ್ಯಾ ಠಾಕೂರ್ ಆಕ್ರೋಶ

ನನಗೆ ಕೊರೊನಾ ಸೋಂಕು ತಗುಲಿಲ್ಲ, ಏಕೆಂದರೆ ನಾನು ನಿತ್ಯ ಗೋಮೂತ್ರ ಸೇವಿಸುತ್ತೇನೆ: ಬಿಜೆಪಿ ಸಂಸದೆ ಪ್ರಗ್ಯಾಸಿಂಗ್ ಠಾಕೂರ್

Follow Us
TV9 Web
TV9 Web

TV9 Kannada

Read More
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ