AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 16, 2021 | 5:56 PM

Share

ಶ್ರೀನಗರ: ಇಲ್ಲಿ ನಿನ್ನೆ ಸಂಜೆ ನಡೆದ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ಕಾರ್ಯಾಚರಣೆಯಲ್ಲಿ ಇಬ್ಬರು ಉದ್ಯಮಿಗಳು ಸೇರಿ ಒಟ್ಟು ನಾಲ್ಕು ಮಂದಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.  ಅಂದರೆ ಈ ಸತ್ತವರಲ್ಲಿ ಇಬ್ಬರು ಉಗ್ರರಾಗಿದ್ದು, ಉಳಿದಿಬ್ಬರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಉದ್ಯಮಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು. ಮುಡ್ಸಿರ್​ ಮೂಲತಃ ಡೆಂಟಲ್​ ಸರ್ಜರಿಯಲ್ಲಿ ತರಬೇತಿ ಪಡೆದಿದ್ದ. ಆದರೆ ಕಂಪ್ಯೂಟರ್​ ಸೆಂಟರ್​ ನಡೆಸುತ್ತಿದ್ದ. ಅಲ್ತಾಫ್​ ಭಟ್​​ ಕಮರ್ಷಿಯಲ್​ ಕಾಂಪ್ಲೆಕ್ಸ್​​ನ ಮಾಲೀಕನಾಗಿದ್ದು, ಹಾರ್ಡವೇರ್​ ಮತ್ತು ಸಿಮೆಂಟ್​ ಅಂಗಡಿ ಇಟ್ಟುಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಇವರಿಬ್ಬರ ಹತ್ಯೆಯ ಬಗ್ಗೆ ತನಿಖೆ ನಡೆಯಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಗ್ರಹಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಇಲ್ಲಿನ ನಾಗರಿಕರನ್ನು ಮಾನವಗುರಾಣಿಗಳಂತೆ ಬಳಸಿ ನಂತರ ಅವರಿಗೆ ಗುಂಡು ಹೊಡೆದು ಕೊಲ್ಲಲಾಗುತ್ತಿದೆ. ಅದಾದ ಬಳಿಕ ಹತ್ಯೆ ಆದವರು ಉಗ್ರರಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತದೆ.  ಆದರೆ ಅದನ್ನು ಸುಮ್ಮನೆ ನಂಬಬಾರದು. ಈ ಇಬ್ಬರು ಉದ್ಯಮಿಗಳ ಹತ್ಯೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.  ಮೃತ ಉದ್ಯಮಿಗಳ ಕುಟುಂಬದವರೂ ಕೂಡ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​