AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು.

ಉಗ್ರರ ವಿರುದ್ಧ ಕಾರ್ಯಾಚರಣೆಯಲ್ಲಿ ಹತ್ಯೆಗೀಡಾದ ಇಬ್ಬರು ಉದ್ಯಮಿಗಳಿಗೂ ಇತ್ತು ಭಯೋತ್ಪಾದಕರೊಂದಿಗೆ ನಂಟು; ತನಿಖೆಗೆ ಆಗ್ರಹಿಸಿದ ಮುಫ್ತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Nov 16, 2021 | 5:56 PM

ಶ್ರೀನಗರ: ಇಲ್ಲಿ ನಿನ್ನೆ ಸಂಜೆ ನಡೆದ ಆ್ಯಂಟಿ ಟೆರರಿಸ್ಟ್​ (ಭಯೋತ್ಪಾದಕ ವಿರೋಧಿ) ಕಾರ್ಯಾಚರಣೆಯಲ್ಲಿ ಇಬ್ಬರು ಉದ್ಯಮಿಗಳು ಸೇರಿ ಒಟ್ಟು ನಾಲ್ಕು ಮಂದಿ ಭದ್ರತಾ ಪಡೆಗಳ ಗುಂಡಿಗೆ ಬಲಿಯಾಗಿದ್ದಾರೆ.  ಅಂದರೆ ಈ ಸತ್ತವರಲ್ಲಿ ಇಬ್ಬರು ಉಗ್ರರಾಗಿದ್ದು, ಉಳಿದಿಬ್ಬರು ಭಯೋತ್ಪಾದಕರಿಗೆ ಸಹಾಯ ಮಾಡುತ್ತಿದ್ದ ಉದ್ಯಮಿಗಳಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  

ಹತ್ಯೆಗೀಡಾದ ಉದ್ಯಮಿಗಳನ್ನು ಡಾ.ಮುಡ್ಸಿರ್​​ ಗುಲ್​ ಮತ್ತು ಅಲ್ತಾಫ್​ ಭಟ್​​ ಎಂದು ಗುರುತಿಸಲಾಗಿದೆ. ಹೈದರ್​ಪೋರಾದ ಕಮರ್ಷಿಯಲ್ ಕಾಂಪ್ಲೆಕ್ಸ್​​ ಇವರಿಬ್ಬರ ಉದ್ಯಮ ಕ್ಷೇತ್ರವಾಗಿತ್ತು. ಮುಡ್ಸಿರ್​ ಮೂಲತಃ ಡೆಂಟಲ್​ ಸರ್ಜರಿಯಲ್ಲಿ ತರಬೇತಿ ಪಡೆದಿದ್ದ. ಆದರೆ ಕಂಪ್ಯೂಟರ್​ ಸೆಂಟರ್​ ನಡೆಸುತ್ತಿದ್ದ. ಅಲ್ತಾಫ್​ ಭಟ್​​ ಕಮರ್ಷಿಯಲ್​ ಕಾಂಪ್ಲೆಕ್ಸ್​​ನ ಮಾಲೀಕನಾಗಿದ್ದು, ಹಾರ್ಡವೇರ್​ ಮತ್ತು ಸಿಮೆಂಟ್​ ಅಂಗಡಿ ಇಟ್ಟುಕೊಂಡಿದ್ದ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ಮಧ್ಯೆ ಇವರಿಬ್ಬರ ಹತ್ಯೆಯ ಬಗ್ಗೆ ತನಿಖೆ ನಡೆಯಬೇಕು ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆಗ್ರಹಿಸಿದ್ದಾರೆ. ಟ್ವೀಟ್​ ಮಾಡಿರುವ ಅವರು, ಇಲ್ಲಿನ ನಾಗರಿಕರನ್ನು ಮಾನವಗುರಾಣಿಗಳಂತೆ ಬಳಸಿ ನಂತರ ಅವರಿಗೆ ಗುಂಡು ಹೊಡೆದು ಕೊಲ್ಲಲಾಗುತ್ತಿದೆ. ಅದಾದ ಬಳಿಕ ಹತ್ಯೆ ಆದವರು ಉಗ್ರರಿಗಾಗಿ ಕೆಲಸ ಮಾಡುತ್ತಿದ್ದರು ಎಂದು ಹೇಳಲಾಗುತ್ತದೆ.  ಆದರೆ ಅದನ್ನು ಸುಮ್ಮನೆ ನಂಬಬಾರದು. ಈ ಇಬ್ಬರು ಉದ್ಯಮಿಗಳ ಹತ್ಯೆಯ ಬಗ್ಗೆ ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.  ಮೃತ ಉದ್ಯಮಿಗಳ ಕುಟುಂಬದವರೂ ಕೂಡ ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ: ಪುನೀತ್​ ರಾಜ್​ಕುಮಾರ್​ಗೆ ಕರ್ನಾಟಕ ರತ್ನ ಘೋಷಣೆ: ಈ ಮೊದಲು ಕರ್ನಾಟಕ ರತ್ನ ಪ್ರಶಸ್ತಿ ಪಡೆದವರು ಇವರು

ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಟೈಲರ್​ ಬಳಿ ಹೋಗಿ ಪತ್ನಿ ಬಾಯಿಗೆ ಹೊಲಿಗೆ ಹಾಕ್ತೀರಾ ಎಂದು ಕೇಳಿದ ಪತಿ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಹೆಚ್​ಎಎಲ್ ಬೇರೆ ರಾಜ್ಯಕ್ಕೆ ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ: ಅಶೋಕ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ಕನ್ನಡಿಗರು ಸಹನಶೀಲರು ಆದರೆ ಕಣಕಿದರೆ ಸುಮ್ಮನಿರಲ್ಲ: ನಾರಾಯಣಗೌಡ, ಕರವೇ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ನಟ ಕಮಲ್​ ಹಾಸನ್​ಗೆ ಕನ್ನಡದ ಇತಿಹಾಸ ಗೊತ್ತಿಲ್ಲ: ವ್ಯಂಗ್ಯವಾಡಿದ ಸಿಎಂ
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಆರ್ಮಿ ಜಾಕೆಟ್ ತೊಟ್ಟು ಬೀಗಿದ ಸಿದ್ದರಾಮಯ್ಯ ಮತ್ತು ಶಿವಕುಮಾರ್
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ಮೇಕೆಗೆ ಸುತ್ತಿಕೊಂಡಿತ್ತು ವಿಷಕಾರಿ ಹಾವು
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ರಜೆ ಮೇಲೆ ತೆರಳಿದ್ದ ಸಿಬ್ಬಂದಿಯನ್ನು ವಾಪಸ್ಸು ಕರೆಸಿಕೊಳ್ಳಲಾಗಿದೆ: ವೈದ್ಯ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಯಾದಗಿರಿ ಜಿಲ್ಲೆಯಲ್ಲಿ ಪ್ರವಾಹದ ಆತಂಕ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
ಮಂಗಳೂರುಗೆ ಇಂದು ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಹಿತೇಂದ್ರ ಭೇಟಿ
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್
‘ಅವಕಾಶ ಸಿಕ್ಕರೆ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿ ಆಗಲು ಸಿದ್ಧ’; ವಿನೋದ್