AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಹುಡುಗಿಯನ್ನು ಪ್ರೀತಿಸಿ ಜೀವ ಬಿಟ್ಟ ಸಹೋದರರು; ಸಾಯೋ ಮುನ್ನ ಹುಡುಗಿಗೆ ಒಳ್ಳೇ ಸಂಬಂಧ ನೋಡಿ ಮದುವೆಯಾಗಲು ಸಲಹೆ

ಇವರಿಬ್ಬರೂ ರೈಲಿಗೆ ಸಿಲುಕಿ ಸಾಯುವ ಮುನ್ನ ವಿಡಿಯೋ ಮಾಡಿದ್ದು, ಈ ಘಟನೆಗೆ ನಾವು ಯಾರನ್ನೂ ಹೊಣೆ ಮಾಡುವುದಿಲ್ಲ. ಇದು ಯಾರ ಒತ್ತಡದಿಂದಲೂ ತೆಗೆದುಕೊಳ್ಳುತ್ತಿರುವ ನಿರ್ಧಾರವಲ್ಲ. ನನ್ನ ಸಾವಿಗೆ ಅವನನ್ನು ದೂಷಿಸುವುದಾಗಲೀ, ಅವನ ಸಾವಿಗೆ ನನ್ನನ್ನು ದೂಷಿಸುವುದಾಗಲೀ ಮಾಡಬೇಡಿ ಎಂದು ತಿಳಿಸಿದ್ದಾರೆ.

ಒಂದೇ ಹುಡುಗಿಯನ್ನು ಪ್ರೀತಿಸಿ ಜೀವ ಬಿಟ್ಟ ಸಹೋದರರು; ಸಾಯೋ ಮುನ್ನ ಹುಡುಗಿಗೆ ಒಳ್ಳೇ ಸಂಬಂಧ ನೋಡಿ ಮದುವೆಯಾಗಲು ಸಲಹೆ
ಆತ್ಮಹತ್ಯೆ ಮಾಡಿಕೊಂಡ ಸಹೋದರರು
Skanda
| Edited By: |

Updated on: Mar 10, 2021 | 8:46 PM

Share

ಜೈಪುರ: ರಾಜಸ್ಥಾನದ ಗುಡ್ಲಾ ಪ್ರದೇಶದ ಬಳಿ ನಡೆದ ದುರ್ಘಟನೆಯೊಂದರಲ್ಲಿ ಒಂದೇ ಹುಡುಗಿಯನ್ನು ಪ್ರೀತಿಸಿದ್ದ ಸಹೋದರ ಸಂಬಂಧಿಗಳಿಬ್ಬರು ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಡಬ್ಲಾನಾ ಪೊಲೀಸ್​ ಠಾಣಾ ವ್ಯಾಪ್ತಿಗೆ ಸೇರಿದ ಕೇಶವಪುರ ಗ್ರಾಮದ ಮಹೇಂದ್ರ ಗುರ್ಜಾರ್ (23) ಹಾಗೂ ದೇವರಾಜ್​ ಗುರ್ಜಾರ್ (23) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಸಹೋದರ ಸಂಬಂಧಿಗಳಾಗಿದ್ದಾರೆ ಎಂದು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿದ ಬಂಡಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಮೃತರ ಮೊಬೈಲ್​ಗಳಲ್ಲಿ ದೊರೆತ ಫೋಟೋ ಮತ್ತು ವಿಡಿಯೋದ ಆಧಾರದ ಮೇಲೆ ಅವರಿಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಇಬ್ಬರೂ ತಮ್ಮ ತಮ್ಮ ತೋಳುಗಳಲ್ಲಿ ಹುಡುಗಿ  ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಎನ್ನುವುದೂ ಗೊತ್ತಾಗಿದೆ. ಆದರೆ, ಇದುವರೆಗೆ ಹುಡುಗಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳೇನೂ ಲಭ್ಯವಾಗಿಲ್ಲ.

ಈ ಇಬ್ಬರದ್ದೂ ಆತ್ಮಹತ್ಯೆ ಎನ್ನುವುದು ಮೇಲ್ನೋಟಕ್ಕೆ ಖಚಿತವಾಗಿದೆಯಾದರೂ ಸಾವಿಗೆ ಸಂಬಂಧಿಸದಂತೆ ಯಾವುದೇ ಪತ್ರ ವಿವರ ಸಿಕ್ಕಿಲ್ಲ. ಆದರೆ, ಖಾಸಗಿ ಮಾಧ್ಯಮವೊಂದರ ವರದಿ ಪ್ರಕಾರ ಇವರಿಬ್ಬರೂ ರೈಲಿಗೆ ಸಿಲುಕಿ ಸಾಯುವ ಮುನ್ನ ವಿಡಿಯೋ ಮಾಡಿದ್ದು, ಈ ಘಟನೆಗೆ ನಾವು ಯಾರನ್ನೂ ಹೊಣೆ ಮಾಡುವುದಿಲ್ಲ. ಇದು ಯಾರ ಒತ್ತಡದಿಂದಲೂ ತೆಗೆದುಕೊಳ್ಳುತ್ತಿರುವ ನಿರ್ಧಾರವಲ್ಲ. ನನ್ನ ಸಾವಿಗೆ ಅವನನ್ನು ದೂಷಿಸುವುದಾಗಲೀ, ಅವನ ಸಾವಿಗೆ ನನ್ನನ್ನು ದೂಷಿಸುವುದಾಗಲೀ ಮಾಡಬೇಡಿ. ಈ ನಿರ್ಧಾರವನ್ನು ನಾವಿಬ್ಬರೂ ವೈಯಕ್ತಿಕವಾಗಿ ಯೋಚಿಸಿ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಡಿಯೋ ಕೊನೆಯಲ್ಲಿ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿರುವ ಯುವಕರು ತಮ್ಮ ಸಾವಿನಿಂದಾಗಿ ಯಾವುದೇ ಗೊಂದಲಗಳು ಮೂಡುವುದು ಬೇಡ. ನೀವು ಮೊದಲಿನಂತೆಯೇ ಚೆನ್ನಾಗಿರಿ ಎಂದು ಹೇಳಿರುವುದಲ್ಲದೇ, ತಾವಿಬ್ಬರೂ ಪ್ರೀತಿಸಿದ ಆ ಹುಡುಗಿಗೂ ಉತ್ತಮ ಸಂಬಂಧ ನೋಡಿ ವಿವಾಹವಾಗುವಂತೆ ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ. ಪ್ರಕರಣವನ್ನು ಸಿಆರ್​ಪಿಸಿ ಸೆಕ್ಷನ್​ 174ರ ಅಡಿಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವಪತ್ತೆ

ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ: ಸಾವಿಗೂ ಮುನ್ನ ಗೂಗಲ್​ನಲ್ಲಿ ಹುಡುಕಾಟ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ