AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಹುಡುಗಿಯನ್ನು ಪ್ರೀತಿಸಿ ಜೀವ ಬಿಟ್ಟ ಸಹೋದರರು; ಸಾಯೋ ಮುನ್ನ ಹುಡುಗಿಗೆ ಒಳ್ಳೇ ಸಂಬಂಧ ನೋಡಿ ಮದುವೆಯಾಗಲು ಸಲಹೆ

ಇವರಿಬ್ಬರೂ ರೈಲಿಗೆ ಸಿಲುಕಿ ಸಾಯುವ ಮುನ್ನ ವಿಡಿಯೋ ಮಾಡಿದ್ದು, ಈ ಘಟನೆಗೆ ನಾವು ಯಾರನ್ನೂ ಹೊಣೆ ಮಾಡುವುದಿಲ್ಲ. ಇದು ಯಾರ ಒತ್ತಡದಿಂದಲೂ ತೆಗೆದುಕೊಳ್ಳುತ್ತಿರುವ ನಿರ್ಧಾರವಲ್ಲ. ನನ್ನ ಸಾವಿಗೆ ಅವನನ್ನು ದೂಷಿಸುವುದಾಗಲೀ, ಅವನ ಸಾವಿಗೆ ನನ್ನನ್ನು ದೂಷಿಸುವುದಾಗಲೀ ಮಾಡಬೇಡಿ ಎಂದು ತಿಳಿಸಿದ್ದಾರೆ.

ಒಂದೇ ಹುಡುಗಿಯನ್ನು ಪ್ರೀತಿಸಿ ಜೀವ ಬಿಟ್ಟ ಸಹೋದರರು; ಸಾಯೋ ಮುನ್ನ ಹುಡುಗಿಗೆ ಒಳ್ಳೇ ಸಂಬಂಧ ನೋಡಿ ಮದುವೆಯಾಗಲು ಸಲಹೆ
ಆತ್ಮಹತ್ಯೆ ಮಾಡಿಕೊಂಡ ಸಹೋದರರು
Skanda
| Edited By: |

Updated on: Mar 10, 2021 | 8:46 PM

Share

ಜೈಪುರ: ರಾಜಸ್ಥಾನದ ಗುಡ್ಲಾ ಪ್ರದೇಶದ ಬಳಿ ನಡೆದ ದುರ್ಘಟನೆಯೊಂದರಲ್ಲಿ ಒಂದೇ ಹುಡುಗಿಯನ್ನು ಪ್ರೀತಿಸಿದ್ದ ಸಹೋದರ ಸಂಬಂಧಿಗಳಿಬ್ಬರು ಚಲಿಸುವ ರೈಲಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಭಾನುವಾರ ರಾತ್ರಿ ಈ ಘಟನೆ ಸಂಭವಿಸಿದ್ದು, ಮೃತರನ್ನು ಡಬ್ಲಾನಾ ಪೊಲೀಸ್​ ಠಾಣಾ ವ್ಯಾಪ್ತಿಗೆ ಸೇರಿದ ಕೇಶವಪುರ ಗ್ರಾಮದ ಮಹೇಂದ್ರ ಗುರ್ಜಾರ್ (23) ಹಾಗೂ ದೇವರಾಜ್​ ಗುರ್ಜಾರ್ (23) ಎಂದು ಗುರುತಿಸಲಾಗಿದೆ. ಈ ಇಬ್ಬರೂ ಸಹೋದರ ಸಂಬಂಧಿಗಳಾಗಿದ್ದಾರೆ ಎಂದು ಘಟನೆ ನಡೆದ ಪ್ರದೇಶಕ್ಕೆ ಆಗಮಿಸಿದ ಬಂಡಿ ಜಿಲ್ಲಾ ಪೊಲೀಸರು ತಿಳಿಸಿದ್ದಾರೆ.

ಮೃತರ ಮೊಬೈಲ್​ಗಳಲ್ಲಿ ದೊರೆತ ಫೋಟೋ ಮತ್ತು ವಿಡಿಯೋದ ಆಧಾರದ ಮೇಲೆ ಅವರಿಬ್ಬರೂ ಒಂದೇ ಹುಡುಗಿಯನ್ನು ಪ್ರೀತಿಸುತ್ತಿದ್ದರು ಎಂದು ತಿಳಿದುಬಂದಿದ್ದು, ಇಬ್ಬರೂ ತಮ್ಮ ತಮ್ಮ ತೋಳುಗಳಲ್ಲಿ ಹುಡುಗಿ  ಹೆಸರನ್ನು ಹಚ್ಚೆ ಹಾಕಿಸಿಕೊಂಡಿದ್ದಾರೆ ಎನ್ನುವುದೂ ಗೊತ್ತಾಗಿದೆ. ಆದರೆ, ಇದುವರೆಗೆ ಹುಡುಗಿಗೆ ಸಂಬಂಧಿಸಿದ ಹೆಚ್ಚಿನ ವಿವರಗಳೇನೂ ಲಭ್ಯವಾಗಿಲ್ಲ.

ಈ ಇಬ್ಬರದ್ದೂ ಆತ್ಮಹತ್ಯೆ ಎನ್ನುವುದು ಮೇಲ್ನೋಟಕ್ಕೆ ಖಚಿತವಾಗಿದೆಯಾದರೂ ಸಾವಿಗೆ ಸಂಬಂಧಿಸದಂತೆ ಯಾವುದೇ ಪತ್ರ ವಿವರ ಸಿಕ್ಕಿಲ್ಲ. ಆದರೆ, ಖಾಸಗಿ ಮಾಧ್ಯಮವೊಂದರ ವರದಿ ಪ್ರಕಾರ ಇವರಿಬ್ಬರೂ ರೈಲಿಗೆ ಸಿಲುಕಿ ಸಾಯುವ ಮುನ್ನ ವಿಡಿಯೋ ಮಾಡಿದ್ದು, ಈ ಘಟನೆಗೆ ನಾವು ಯಾರನ್ನೂ ಹೊಣೆ ಮಾಡುವುದಿಲ್ಲ. ಇದು ಯಾರ ಒತ್ತಡದಿಂದಲೂ ತೆಗೆದುಕೊಳ್ಳುತ್ತಿರುವ ನಿರ್ಧಾರವಲ್ಲ. ನನ್ನ ಸಾವಿಗೆ ಅವನನ್ನು ದೂಷಿಸುವುದಾಗಲೀ, ಅವನ ಸಾವಿಗೆ ನನ್ನನ್ನು ದೂಷಿಸುವುದಾಗಲೀ ಮಾಡಬೇಡಿ. ಈ ನಿರ್ಧಾರವನ್ನು ನಾವಿಬ್ಬರೂ ವೈಯಕ್ತಿಕವಾಗಿ ಯೋಚಿಸಿ ತೆಗೆದುಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ವಿಡಿಯೋ ಕೊನೆಯಲ್ಲಿ ತಮ್ಮ ಕುಟುಂಬಸ್ಥರಿಗೆ ಕರೆ ಮಾಡಿರುವ ಯುವಕರು ತಮ್ಮ ಸಾವಿನಿಂದಾಗಿ ಯಾವುದೇ ಗೊಂದಲಗಳು ಮೂಡುವುದು ಬೇಡ. ನೀವು ಮೊದಲಿನಂತೆಯೇ ಚೆನ್ನಾಗಿರಿ ಎಂದು ಹೇಳಿರುವುದಲ್ಲದೇ, ತಾವಿಬ್ಬರೂ ಪ್ರೀತಿಸಿದ ಆ ಹುಡುಗಿಗೂ ಉತ್ತಮ ಸಂಬಂಧ ನೋಡಿ ವಿವಾಹವಾಗುವಂತೆ ಕಿವಿಮಾತು ಹೇಳಿದ್ದಾರೆ ಎಂದು ವರದಿಯಾಗಿದೆ. ಪ್ರಕರಣವನ್ನು ಸಿಆರ್​ಪಿಸಿ ಸೆಕ್ಷನ್​ 174ರ ಅಡಿಯಲ್ಲಿ ದಾಖಲಿಸಿಕೊಂಡಿರುವ ಪೊಲೀಸರು ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.

ಇದನ್ನೂ ಓದಿ: ಮಂಗಳೂರಿನಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಕಾಲೇಜು ವಿದ್ಯಾರ್ಥಿನಿ ಶವಪತ್ತೆ

ಆತ್ಮಹತ್ಯೆಗೆ ಶರಣಾದ ಎಂಬಿಬಿಎಸ್ ವಿದ್ಯಾರ್ಥಿ: ಸಾವಿಗೂ ಮುನ್ನ ಗೂಗಲ್​ನಲ್ಲಿ ಹುಡುಕಾಟ

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್